AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್: ಸ್ವರ್ಗ-ನರಕದ ನಡುವೆ ಶುರುವಾಗುತ್ತಿದೆ ಪ್ರೀತಿಯ ಸೇತುವೆ

Bigg Boss Kannada: ಬಿಗ್​ಬಾಸ್​ನಲ್ಲಿ ಜಗಳಗಳು ಎಷ್ಟು ಸಾಮಾನ್ಯವೋ ಹಾಗೆಯೇ ಪ್ರೇಮಕತೆಗಳು ಸಹ ಸಾಮಾನ್ಯ. ಈ ಬಾರಿ ಆರಂಭದಲ್ಲಿಯೇ ಒಂದು ಪ್ರೇಮಕತೆ ಶುರುವಾಗುವ ಮುನ್ಸೂಚನೆ ದೊರೆತಿದೆ.

ಬಿಗ್​ಬಾಸ್: ಸ್ವರ್ಗ-ನರಕದ ನಡುವೆ ಶುರುವಾಗುತ್ತಿದೆ ಪ್ರೀತಿಯ ಸೇತುವೆ
ಮಂಜುನಾಥ ಸಿ.
|

Updated on: Oct 02, 2024 | 10:40 AM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಶುರುವಾಗಿದ್ದು, ಪ್ರಾರಂಭವಾದ ದಿನದಿಂದಲೂ ಜಗಳಗಳೇ ಮುನ್ನೆಲೆಯಲ್ಲಿವೆ. ಬಿಗ್​ಬಾಸ್​ ಮನೆಯಲ್ಲಿ ಜಗಳ ಸಾಮಾನ್ಯ ಸಹ. ಆದರೆ ಜಗಳದ ಜೊತೆಗೆ ಪ್ರೀತಿ-ಪ್ರೇಮವೂ ಸಹ ಸಾಮಾನ್ಯವೇ. ಪ್ರತಿ ಸೀಸನ್​ನಲ್ಲೂ ಯಾವುದಾದರೂ ಒಂದು ಯುವ ಜೋಡಿ ಜಂಟಿಯಾಗುತ್ತದೆ. ಕನಿಷ್ಟ ಪಕ್ಷ ಸೀಸನ್ ಮುಗಿಯುವವರೆಗಾದರೂ ಒಟ್ಟಿಗೆ ಇದ್ದು ಮನೊರಂಜನೆ ನೀಡುತ್ತಾರೆ. ಕೆಲವು ಬಾರಿ ಶೋ ಮುಗಿದ ಬಳಿಕವೂ ಜೊತೆಗಿರುವ ಉದಾಹರಣೆಗಳು ಇವೆ. ಈ ಬಾರಿ ಶೋ ಆರಂಭವಾದ ಎರಡೇ ದಿನಕ್ಕೆ ಬಿಗ್​ಬಾಸ್​ ಮನೆಯಲ್ಲಿ ಲವ್ ಸ್ಟೋರಿಯೊಂದು ಪ್ರಾರಂಭ ಆಗುತ್ತಿರುವ ಸೂಚನೆ ಸಿಕ್ಕಿದೆ.

ಹಿಂದಿನ ಸೀಸನ್​ನಲ್ಲಿ ಮೈಖಲ್-ಇಶಾನಿ, ಸ್ನೇಹಿತ್ ಹಾಗೂ ನಮ್ರತಾ, ಸಂಗೀತಾ ಕಾರ್ತಿಕ್ ನಡುವೆ ಆತ್ಮೀಯತೆ, ಪರಸ್ಪರ ಫ್ಲರ್ಟಿಂಗ್​ಗಳು ನೋಡಲು ಸಿಕ್ಕಿದ್ದವು. ಈ ಬಾರಿಯೂ ಆರಂಭದಲ್ಲಿಯೇ ಪ್ರೇಮಕತೆಯೊಂದು ಶುರುವಾಗುತ್ತಿರುವ ಸೂಚನೆಗಳು ಸಿಕ್ಕಿವೆ. ನರಕವಾಸಿಯಾದ ರಂಜಿತ್ ಹಾಗೂ ಐಶ್ವರ್ಯಾ ನಡುವೆ ಆತ್ಮೀಯ ಬಾಂಡಿಂಗ್ ಒಂದು ಬಿಲ್ಡ್ ಆಗುತ್ತಿರುವುದು ಮನೆಯವರ ಗಮನಕ್ಕೆ ಮತ್ತು ನೋಡುಗರ ಗಮನಕ್ಕೆ ಬರುತ್ತಿದೆ. ಅದಕ್ಕೆ ಕೆಲವು ಸಾಕ್ಷಿಗಳು ಸಹ ನಿನ್ನೆ ಸಿಕ್ಕಿವೆ.

ನಿನ್ನೆ ಬೆಳಿಗ್ಗೆ ಸ್ವರ್ಗವಾಸಿಯಾದ ಐಶ್ವರ್ಯಾ ಸಿಂಧೋಗಿ, ತಿಂಡಿ ತಿನ್ನುತ್ತಾ ನರಕದ ಬಳಿ ಹೋದರು. ಅವರನ್ನು ನೋಡಿದ ರಂಜಿತ್, ವಾವ್ ಎಂದೇನೋ ಪ್ರತಿಕ್ರಿಯೆ ನೀಡಿದರು. ಅದಕ್ಕೆ ಐಶ್ವರ್ಯಾ, ‘ನೀವು ನನ್ನನ್ನು ನೋಡಿ ಹೇಳಿದ್ದಾ? ಅಥವಾ ನನ್ನ ತಟ್ಟೆ ನೋಡಿ ಹೇಳಿದ್ದಾ?’ ಎಂದು ಕೇಳಿದರು. ಅದಕ್ಕೆ ರಂಜಿತ್, ‘ಪ್ಲೇಟ್​ಗಿಂತಲೂ ನೀವೇ ಚೆನ್ನಾಗಿದ್ದೀರ’ ಎಂದರು. ಇದು ಐಶ್ವರ್ಯಾ ಸಣ್ಣಗೆ ನಾಚುವಂತೆ ಮಾಡಿತು. ಬಳಿಕ ಐಶ್ವರ್ಯಾ, ‘ನಿಮಗೆ ನಾನು ಬೇಕಾ, ಪ್ಲೇಟ್ ಬೇಕಾ?’ ಎಂದು ಕೇಳಿದ್ದಾರೆ. ಅದಕ್ಕೆ ರಂಜಿತ್, ‘ನೀವೇ ಬೇಕು’ ಎಂದು ಉತ್ತರಿಸಿದ್ದಾರೆ. ಇದನ್ನು ಕೇಳಿಸಿಕೊಂಡ ಮಾನಸಾ ಓಹ್​ ಎಂದು ಉದ್ಘಾರ ಸಹ ತೆಗೆದರು.

ಇದನ್ನೂ ಓದಿ:‘ಚಿನ್ನದ ಅಂಗಡಿ ಧರಿಸಿ’ ಬಿಗ್​ಬಾಸ್ ಮನೆಗೆ ಹೋದ ಸುರೇಶ್, ಕಾಲೆಳೆದ ಸುದೀಪ್

ಮತ್ತೆ ರಾತ್ರಿ ಸಮಯದಲ್ಲಿ ಐಶ್ವರ್ಯಾ, ನರಕದ ಕಡೆಗೆ ಬಂದಾಗಲೂ ಸಹ ಇದೇ ವಿಷಯ ಚರ್ಚೆ ಆಗಿದೆ. ಅದೇ ಸಮಯದಲ್ಲಿ ಅಲ್ಲಿಗೆ ಬಂದ ಉಗ್ರಂ ಮಂಜು, ಧಮ್ ಇದ್ದರೆ ಇವಳನ್ನು ಮುಟ್ಟು ನೋಡೋಣ ಎಂದು ಸವಾಲು ಹಾಕಿದ್ದಾರೆ, ಆಗ ರಂಜಿತ್ ‘ಮನಸ್ಸು ಮಾಡಿದರೆ ಎತ್ತಾಕೊಂಡು ಹೋಗ್ತೀನಿ’ ಎಂದು ಪ್ರತಿಕ್ರಿಯೆ ಕೊಟ್ಟರು, ಇದನ್ನು ಕೇಳಿದ ಐಶ್ವರ್ಯಾ ಹುಸಿ ಕೋಪ ತೋರುತ್ತಾ ಅಲ್ಲಿಂದ ಎದ್ದು ಹೋದರು.

ಒಟ್ಟಾರೆಯಾಗಿ ಈ ಬಿಗ್​ಬಾಸ್​ನಲ್ಲಿಯೂ ಆರಂಭದಲ್ಲಿಯೇ ಒಂದು ಪ್ರೇಮಾಂಕುರ ಆಗುವ ಸೂಚನೆ ದೊರೆತಿದೆ. ಈ ಪ್ರೇಮಕತೆ ಮುಂದುವರೆಯುತ್ತದೆಯೇ ಅಥವಾ ಹಾದಿ ತಪ್ಪುತ್ತದೆಯೋ ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!