AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಿಕ್ರಂ ಪಾಲಿಗೆ ಒಲಿದ ಅದೃಷ್ಟ; ಹೊಸ ಸೀರಿಯಲ್​ಗೆ ಹೀರೋ ಆದ ಬಿಗ್ ಬಾಸ್ ರನ್ನರ್​​ಅಪ್​

ಬಿಗ್ ಬಾಸ್ ಕನ್ನಡ ಸೀಸನ್ 11 ರನ್ನರ್ ಅಪ್ ತ್ರಿವಿಕ್ರಂ ಅವರಿಗೆ ಕಲರ್ಸ್ ಕನ್ನಡದ ಹೊಸ ಧಾರಾವಾಹಿ ‘ಮುದ್ದು ಸೊಸೆ’ಯಲ್ಲಿ ನಾಯಕನ ಪಾತ್ರ ದೊರೆತಿದೆ. ಬಿಗ್ ಬಾಸ್ ನಂತರ ಅವರಿಗೆ ಹಲವು ಅವಕಾಶಗಳು ಬಂದಿವೆ ಎಂದು ತಿಳಿದುಬಂದಿದೆ. ಈ ಧಾರಾವಾಹಿಯಲ್ಲಿ ವಿದ್ಯಾ ಎಂಬ ಹುಡುಗಿಯೊಂದಿಗೆ ಅವರ ಪ್ರೇಮಕಥೆ ಶುರುವಾಗುತ್ತದೆ. ತ್ರಿವಿಕ್ರಂ ಸದ್ಯ ಸಿಸಿಎಲ್ ನಲ್ಲೂ ತೊಡಗಿಸಿಕೊಂಡಿದ್ದಾರೆ.

ತ್ರಿವಿಕ್ರಂ ಪಾಲಿಗೆ ಒಲಿದ ಅದೃಷ್ಟ; ಹೊಸ ಸೀರಿಯಲ್​ಗೆ ಹೀರೋ ಆದ ಬಿಗ್ ಬಾಸ್ ರನ್ನರ್​​ಅಪ್​
ತ್ರಿವಿಕ್ರಂ ಹೊಸ ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on: Feb 24, 2025 | 7:28 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ರನ್ನರ್ ಅಪ್ ತ್ರಿವಿಕ್ರಂ ಅವರು ಒಂದೊಳ್ಳೆಯ ಅವಕಾಶಕ್ಕಾಗಿ ಕಾಯುತ್ತಾ ಇದ್ದರು. ‘ಬಿಗ್ ಬಾಸ್’ನಿಂದ ಬದುಕು ಬದಲಾಗುತ್ತದೆ ಎಂದು ಲೆಕ್ಕಾಚಾರ ಹಾಕಿಕೊಂಡಿದ್ದರು. ಕೊನೆಗೂ ಅದು ನಿಜವಾಗಿದೆ. ಅವರಿಗೆ ಹೊಸ ಧಾರಾವಾಹಿಯಲ್ಲಿ ನಾಯಕನಾಗಿ ನಟಿಸೋ ಅವಕಾಶ ಸಿಕ್ಕಿದೆ. ಇದರ ಪ್ರೋಮೋನ ಕಲರ್ಸ್ ಕನ್ನಡ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದಕ್ಕೆ ಭರ್ಜರಿ ಲೈಕ್ಸ್​ಗಳು ಸಿಕ್ಕಿವೆ. ಫ್ಯಾನ್ಸ್ ನಾನಾ ರೀತಿಯಲ್ಲಿ ಇದಕ್ಕೆ ಕಮೆಂಟ್ ಮಾಡುತ್ತಿದ್ದಾರೆ.

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಂಡಿದ್ದ ‘ಪದ್ಮಾವತಿ’ ಹೆಸರಿನ ಸೀರಿಯಲ್​​ನಲ್ಲಿ ತ್ರಿವಿಕ್ರಂ ಅವರು ನಟಿಸಿದ್ದರು. ಇದರಲ್ಲಿ ಕಥಾ ನಾಯಕನ ಪಾತ್ರ ಮಾಡಿದ್ದರು. ಆ ಬಳಿಕ ಅವರಿಗೆ ಹೆಚ್ಚು ಆಫರ್​ಗಳು ಬಂದಿರಲಿಲ್ಲ. ಬಿಗ್ ಬಾಸ್​ಗೆ ಬಂದ ಬಳಿಕ ಸಿನಿಮಾ ಅಥವಾ ಸೀರಿಯಲ್​ಗಳಲ್ಲಿ ನಟಿಸೋಕೆ ಅವಕಾಶ ಸಿಗಬಹುದು ಎಂದು ಅವರು ಅಂದುಕೊಂಡಿದ್ದರು. ಅದು ನಿಜವಾಗಿದೆ.

ಕಲರ್ಸ್ ಕನ್ನಡದಲ್ಲಿ ಶೀಘ್ರವೇ ‘ಮುದ್ದು ಸೊಸೆ’ ಹೆಸರಿನ ಸೀರಿಯಲ್ ಪ್ರಸಾರ ಕಾಣಲಿದೆ. ಇದಕ್ಕೆ ತ್ರಿವಿಕ್ರಂ ಅವರು ಹೀರೋ ಆಗಿ ಆಯ್ಕೆ ಆಗಿದ್ದಾರೆ. ಕಥಾ ನಾಯಕಿ ವಿದ್ಯಾ ಇನ್ನೂ ಶಿಕ್ಷಣ ಪಡೆಯುತ್ತಿರುವ ಹುಡುಗಿ. ಸ್ಕೂಲ್​ನಲ್ಲಿ ಆಕೆಯೇ ನಂಬರ್ 1. ಒಂದಿನ ಅಜ್ಜಿಗೆ ಅನಾರೋಗ್ಯ ಆಗಿದೆ ಎಂದು ಆಕೆಯನ್ನು ಶಾಲೆಯಿಂದ ಕರೆಸುತ್ತಾರೆ. ಮನೆಗೆ ಬಂದು ನೋಡಿದರೆ ಹೆಣ್ಣು ನೋಡುವ ಶಾಸ್ತ್ರಕ್ಕೆ ತಯಾರಿ ನಡೆಯುತ್ತಾ ಇರುತ್ತದೆ.

ಇದನ್ನೂ ಓದಿ: ಬಿಗ್ ಬಾಸ್​ನಿಂದ ಹೊರ ಬಂದು ದೊಡ್ಡ ಸಿನಿಮಾ ಆಫರ್ ಪಡೆದ ಉಗ್ರಂ ಮಂಜು

ವಿದ್ಯಾನ ನೋಡೋಕೆ ಬರೋದು ಕಥಾ ನಾಯಕನ ಪಾತ್ರದಲ್ಲಿರೋ ತ್ರಿವಿಕ್ರಂ. ವಿದ್ಯಾಗೆ ಡಾಕ್ಟರ್ ಆಗಬೇಕು ಎಂಬ ಆಸೆ. ಆದರೆ, ಮದುವೆ ಬಳಿಕೆ ಆಕೆಯನ್ನು ಶಾಲೆಗೆ ಕಳಿಸೋದು ಬೇಡ ಎಂಬ ನಿರ್ಧಾರಕ್ಕೆ ಎಲ್ಲರೂ ಬರುತ್ತಾರೆ. ಮುಂದೇನಾಗುತ್ತದೆ ಎಂಬುದು ಧಾರಾವಾಹಿಯ ಕಥೆ. ಸದ್ಯ ಪ್ರೋಮೋ ರಿಲೀಸ್ ಆಗಿದ್ದು, ಮುಂದಿನ ದಿನಗಳಲ್ಲಿ ಧಾರಾವಾಹಿಯ ಪ್ರಸಾರ ದಿನಾಂಕದ ಬಗ್ಗೆ ವಿವರ ಸಿಗಲಿದೆ.

ಸದ್ಯ ತ್ರಿವಿಕ್ರಂ ಅವರು ‘ಸಿಸಿಎಲ್​​’ನಲ್ಲಿ ಬ್ಯುಸಿ ಇದ್ದಾರೆ. ಕ್ರಿಕೆಟ್ ಆಡುತ್ತಾ ಸಮಯ ಕಳೆಯುತ್ತಿದ್ದಾರೆ. ಶೀಘ್ರವೇ ಅವರು ಧಾರಾವಾಹಿ ಶೂಟ್​​ನಲ್ಲಿ ಬ್ಯುಸಿ ಆಗಲಿದ್ದಾರೆ ಅನ್ನೋದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!