AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಪ್ರತಾಪ್​ ತುಂಬ ಇಷ್ಟ’: ಕನ್ಫೆಷನ್​​ ರೂಮ್​ನಲ್ಲಿ ಕಣ್ಣೀರು ಹಾಕಿಕೊಂಡು ಹೇಳಿದ ಸಂಗೀತಾ

ಬಿಗ್​ ಬಾಸ್​ ಶೋನಲ್ಲಿ ಡ್ರೋನ್​ ಪ್ರತಾಪ್ ಅವರು ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಶೃಂಗೇರಿ ಅವರಿಗೆ ಇಷ್ಟ ಆಗಿದೆ. ಅದನ್ನು ಅವರು ಮನಸಾರೆ ಹೊಗಳಿದ್ದಾರೆ. ‘ನನಗೆ ಪ್ರತಾಪ್​ ತುಂಬ ಇಷ್ಟ’ ಎಂದು ಅವರು ಕನ್ಫೆಷನ್​ ರೂಮ್​ನಲ್ಲಿ ಹೇಳಿದ್ದಾರೆ. ದಿನದಿಂದ ದಿನಕ್ಕೆ ಅವರಿಬ್ಬರ ನಡುವೆ ಬಾಂಧವ್ಯ ಗಟ್ಟಿ ಆಗುತ್ತಿದೆ.

‘ನನಗೆ ಪ್ರತಾಪ್​ ತುಂಬ ಇಷ್ಟ’: ಕನ್ಫೆಷನ್​​ ರೂಮ್​ನಲ್ಲಿ ಕಣ್ಣೀರು ಹಾಕಿಕೊಂಡು ಹೇಳಿದ ಸಂಗೀತಾ
ಡ್ರೋನ್​ ಪ್ರತಾಪ್​, ಸಂಗೀತಾ ಶೃಂಗೇರಿ
ಮದನ್​ ಕುಮಾರ್​
| Edited By: |

Updated on:Dec 12, 2023 | 6:31 AM

Share

ಬಿಗ್​ ಬಾಸ್​ ಮನೆಯಲ್ಲಿ ಸಂಬಂಧಗಳು ಹುಟ್ಟಿಕೊಳ್ಳುತ್ತವೆ. ಅಪರಿಚಿತರಾಗಿ ಬಿಗ್​ ಬಾಸ್​ (Bigg Boss Kannada) ಮನೆ ಸೇರಿದ್ದವರು ಕೆಲವೇ ದಿನಗಳಲ್ಲಿ ಆಪ್ತರಾಗಿಬಿಡುತ್ತಾರೆ. ಅದಕ್ಕೆ ಈಗಾಗಲೇ ಅನೇಕ ನಿದರ್ಶನಗಳು ಸಿಕ್ಕಿವೆ. ಈಗ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ರಲ್ಲೂ ಅದು ಮುಂದುವರಿದಿದೆ. ವಿಶೇಷ ಏನೆಂದರೆ ಸಂಗೀತಾ ಶೃಂಗೇರಿ (Sangeetha Sringeri) ಮತ್ತು ಡ್ರೋನ್​ ಪ್ರತಾಪ್​ ನಡುವೆ ಉತ್ತಮ ಬಾಂಧವ್ಯ ಬೆಳೆದಿದೆ. ಮೊದಲಿನಿಂದಲೂ ಸಂಗೀತಾ ಶೃಂಗೇರಿ ಅವರನ್ನು ಡ್ರೋನ್​ ಪ್ರತಾಪ್​  (Drone Prathap) ಅವರು ಅಕ್ಕ ಎಂದು ಕರೆಯುತ್ತಾ ಬಂದಿದ್ದಾರೆ. ಅದು ಸಂಗೀತಾಗೆ ನಿಜ ಎನಿಸಿದೆ. ಅದನ್ನು ಅವರು ಕನ್ಫೆಷನ್​ ರೂಮ್​ನಲ್ಲಿ ಹೇಳಿಕೊಂಡಿದ್ದಾರೆ.

ಡ್ರೋನ್​ ಪ್ರತಾಪ್ ಅವರು ನಡೆದುಕೊಳ್ಳುತ್ತಿರುವ ರೀತಿ ಸಂಗೀತಾ ಶೃಂಗೇರಿ ಅವರಿಗೆ ಇಷ್ಟ ಆಗಿದೆ. ಅದನ್ನು ಅವರು ಮನಸಾರೆ ಹೊಗಳಿದ್ದಾರೆ. ‘ನನಗೆ ಪ್ರತಾಪ್​ ತುಂಬ ಇಷ್ಟ’ ಎಂದು ಅವರು ಕನ್ಫೆಷನ್​ ರೂಮ್​ನಲ್ಲಿ ಹೇಳಿದ್ದಾರೆ. ದಿನದಿಂದ ದಿನಕ್ಕೆ ಅವರಿಬ್ಬರ ನಡುವೆ ಬಾಂಧವ್ಯ ಗಟ್ಟಿ ಆಗುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಟಾಸ್ಕ್​ ಮತ್ತು ನಾಮಿನೇಷನ್​ ಬಂದಾಗ ಹೇಗೆ ನಡೆದುಕೊಳ್ಳುತ್ತಾರೆ ಎಂಬುದು ಕೌತುಕದ ವಿಚಾರ.

ಇದನ್ನೂ ಓದಿ: ‘ಕಣ್ಣು ತೆಗೆದುಬಿಡಿ..’: ವೈದ್ಯರಿಗೆ ಸಂಗೀತಾ ಶೃಂಗೇರಿ ಹೀಗೆ ಹೇಳಿದ್ದು ಯಾಕೆ?

ಒಂದಷ್ಟು ದಿನಗಳು ಕಳೆದ ನಂತರ ಸ್ಪರ್ಧಿಗಳ ಕುಟುಂಬದಿಂದ ಯಾರಾದರೊಬ್ಬರನ್ನು ಬಿಗ್​ ಬಾಸ್​ ಮನೆಯ ಒಳಗೆ ಕರೆಸಲಾಗುತ್ತದೆ. ತಮ್ಮ ಮನೆಯಿಂದ ಯಾರೂ ಬರುವುದು ಬೇಡ ಎಂದು ಸಂಗೀತಾ ಶೃಂಗೇರಿ ಹೇಳಿದ್ದಾರೆ. ಆದರೆ ಡ್ರೋನ್​ ಪ್ರತಾಪ್​ ಅವರ ಮನೆಯಿಂದ ಯಾರಾದರೂ ಬಂದರೆ ತಮಗೆ ಖುಷಿ ಆಗುತ್ತದೆ ಎಂದು ಅವರು ಹೇಳಿದ್ದಾರೆ. ಪ್ರತಾಪ್​ ಅವರನ್ನು ಪ್ರೀತಿಯಿಂದ ಪ್ರತು ಎಂದು ಸಂಗೀತಾ ಕರೆದಿದ್ದಾರೆ.

ಇದನ್ನೂ ಓದಿ: ಡ್ರೋನ್​ ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ ಗೌಡ

ಡ್ರೋನ್​ ಪ್ರತಾಪ್​ ಅವರು ಬಿಗ್​ ಬಾಸ್​ ಮನೆಗೆ ಬರುವುದಕ್ಕೂ ಮುನ್ನ ನೆಗೆಟಿವ್​ ರೀತಿಯಲ್ಲಿ ಸುದ್ದಿ ಆಗಿದ್ದರು. ಆದರೆ ದೊಡ್ಮನೆ ಒಳಗೆ ಬಂದ ನಂತರ ಅವರ ಬಗ್ಗೆ ಜನರಿಗೆ ಇದ್ದ ಅಭಿಪ್ರಾಯ ಬಂದಾಗಿದೆ. ವೀಕ್ಷಕರಿಂದ ಹೆಚ್ಚು ವೋಟ್​ ಪಡೆಯುವಲ್ಲಿ ಡ್ರೋನ್​ ಪ್ರತಾಪ್​ ಯಶಸ್ವಿ ಆಗಿದ್ದಾರೆ. ಅವರು ಕೂಡ ಫಿನಾಲೆಗೆ ತಲುಪಬೇಕು, ಟ್ರೋಫಿ ಗೆಲ್ಲಬೇಕು ಎಂದು ಅನೇಕರು ಆಶಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:47 pm, Mon, 11 December 23

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ