AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಸರ್, ನೀವು ಹೇಳಿದ್ದೇನು? ಆಗುತ್ತಿರುವುದೇನು: ಸಂಗೀತಾ ಸಹೋದರ ಪ್ರಶ್ನೆ

Bigg Boss: ಬಿಗ್​ಬಾಸ್ ಮನೆಯಲ್ಲಿ ಹಿಂಸಾತ್ಮಕ ಪ್ರವೃತ್ತಿ ಹೆಚ್ಚಾಗಿದೆ. ವಿನಯ್ ಹಾಗೂ ತಂಡದ ಕೃತ್ಯದಿಂದ ಸಂಗೀತಾ ಗಾಯಗೊಂಡಿದ್ದಾರೆ. ಇದೀಗ ಸಂಗೀತಾರ ಸಹೋದರ, ಬಿಗ್​ಬಾಸ್ ಮನೆಯಲ್ಲಿನ ಸುರಕ್ಷತೆ ಬಗ್ಗೆ ಸುದೀಪ್ ಅವರಿಗೆ ಪ್ರಶ್ನೆ ಮಾಡಿದ್ದಾರೆ.

ಸುದೀಪ್ ಸರ್, ನೀವು ಹೇಳಿದ್ದೇನು? ಆಗುತ್ತಿರುವುದೇನು: ಸಂಗೀತಾ ಸಹೋದರ ಪ್ರಶ್ನೆ
ಸಂಗೀತಾ ಶೃಂಗೇರಿ
ಮಂಜುನಾಥ ಸಿ.
|

Updated on:Dec 09, 2023 | 2:57 PM

Share

ಬಿಗ್​ಬಾಸ್ ಕನ್ನಡ ಸೀಸನ್ 10ರ (Bigg Boss) ಇತ್ತೀಚೆಗಿನ ಎಪಿಸೋಡ್​ಗಳ ಬಗ್ಗೆ ತೀವ್ರ ಟೀಕೆ ವ್ಯಕ್ತವಾಗುತ್ತಿದೆ. ಸ್ಪರ್ಧಿಗಳು ಹಿಂಸಾತ್ಮಕವಾಗಿ ವರ್ತಿಸುತ್ತಿದ್ದಾರೆ, ಪರಸ್ಪರರ ಬಗ್ಗೆ ಕಠೋರ ಮಾತುಗಳನ್ನಾಡುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗುತ್ತಿದೆ. ಇದರ ನಡುವೆ ಇತ್ತೀಚೆಗಿನ ಟಾಸ್ಕ್ ಒಂದರಲ್ಲಿ ಎದುರಾಳಿ ಸ್ಪರ್ಧಿಗಳು ಹಿಂಸಾತ್ಮಕವಾಗಿ ಆಡಿದ ಕಾರಣ ಸಂಗೀತಾ ಹಾಗೂ ಡ್ರೋನ್ ಪ್ರತಾಪ್​ ಅವರುಗಳಿಗೆ ಗಾಯವಾಗಿದೆ. ಈ ಬಗ್ಗೆ ಸಂಗೀತಾರ ಸಹೋದರ ಸುದೀಪ್​ ಅವರನ್ನು ಸಾಮಾಜಿಕ ಜಾಲತಾಣದ ಮೂಲಕ ಪ್ರಶ್ನೆ ಮಾಡಿದ್ದಾರೆ.

‘‘ಕಿಚ್ಚ ಸುದೀಪ್, ಬಿಗ್​ಬಾಸ್ ಮನೆ ಸ್ವರ್ಗದಷ್ಟೆ ಸುರಕ್ಷಿತವಾದದ್ದು, ಯಾವ ಕಾರಣಕ್ಕೂ ಅಪಾಯಕ್ಕೆ ಆಸ್ಪದವೇ ಇಲ್ಲ ಎಂದು ನೀವು ಭರವಸೆ ನೀಡಿದ್ದಿರಿ. ಆದರೆ ನೀವು ಕೊಟ್ಟ ಭರವಸೆಯನ್ನು ಈಗ ಬಿಗ್​ಬಾಸ್ ಮನೆಯೊಳಗೆ ನಡೆದಿರುವ ಘಟನೆಗಳು ಮುರಿದು ಹಾಕಿವೆ. ಒಂದೊಮ್ಮೆ ಕೌಟುಂಬಿಕ ಕಾರ್ಯಕ್ರಮ ಆಗಿದ್ದ ಬಿಗ್​ಬಾಸ್ ಈಗ ಆಕ್ರಮಣಕಾರಿ ಮತ್ತು ತಡೆಯಿಲ್ಲದ ಹಿಂಸೆಗೆ ವೇದಿಕೆ ಆದಂತಾಗಿದೆ. ಕುಟುಂಬಗಳು ಆತಂಕದಲ್ಲಿವೆ. ಹೇಗೆತಾನೆ ನಾವು ಒಟ್ಟಿಗೆ ಕೂತು ಈ ಆಕ್ರಮಣಶೀಲತೆ, ಹಿಂಸೆಯನ್ನು ನೋಡಲು ಸಾಧ್ಯ’’ ಎಂದು ಪ್ರಶ್ನೆ ಮಾಡಿದ್ದಾರೆ ಸಂಗೀತಾರ ಸಹೋದರ ಸಂತೋಷ್ ಕುಮಾರ್.

ಮುಂದುವರೆದು, ಕಲರ್ಸ್ ಕನ್ನಡ ಚಾನೆಲ್​ ಅನ್ನು ಸಹ ಪ್ರಶ್ನೆ ಮಾಡಿರುವ ಸಂತೋಷ್ ಕುಮಾರ್, ‘‘ಮನೆಯಲ್ಲಿ ಆಗಿರುವ ಸಮಸ್ಯೆಗಳನ್ನು ಪರಿಹರಿಸಲು, ಬುದ್ಧಿಹೇಳಲು ಸುದೀಪ್ ಅವರೇ ಬರಬೇಕು ಎಂದು ಕಾಯುವುದು ಏಕೆ? ಸ್ಪರ್ಧಿಗಳು ಮಾಡಿದ ತಪ್ಪನ್ನು ಸ್ಥಳದಲ್ಲಿಯೇ ಬಿಗ್​ಬಾಸ್ ಸರಿ ಮಾಡಬಹುದಲ್ಲವೇ? ಏಕೆ ಮಾಡುತ್ತಿಲ್ಲ’’ ಎಂದು ಸಹ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:ಈ ವಾರ ಬಿಗ್​ಬಾಸ್ ಮನೆಯಲ್ಲಿ ಅತಿ ಹೆಚ್ಚು ಮತ ಗಳಿಸಿರುವುದು ಯಾರು? ಡ್ರೋನ್ ಪ್ರತಾಪ್​ಗೆ ಎಷ್ಟನೆ ಸ್ಥಾನ?

ಬಿಗ್​ಬಾಸ್ ಮನೆಯಲ್ಲಿ ಈ ವಾರ ಅತಿಯಾದ ಹಿಂಸೆ ನಡೆದಿದೆ. ಕಾರ್ತಿಕ್ ಹಾಗೂ ವಿನಯ್ ಪರಸ್ಪರ ಕೈ-ಕೈ ಮಿಲಾಯಿಸುವ ಹಂತಕ್ಕೆ ಜಗಳವಾಡಿದರು. ಸಂಗೀತಾ-ನಮ್ರತಾ ಜಗಳವೂ ಸಹ ಕರ್ಣ ಕಠೋರವಾಗಿತ್ತು. ಶುಕ್ರವಾರದ ಎಪಿಸೋಡ್​ನಲ್ಲಂತೂ ವಿನಯ್, ಮೈಖಲ್, ನಮ್ರತಾ, ಪವಿ ಹಾಗೂ ವರ್ತೂರು ಅವರುಗಳು ಮಾನವೀಯತೆಯ ಗಡಿ ಮೀರಿ ವರ್ತಿಸಿದರು. ಕುರ್ಚಿಯಲ್ಲಿ ಕೂತಿದ್ದ ಸಂಗೀತಾ ಹಾಗೂ ಡ್ರೋನ್ ಪ್ರತಾಪ್​ರನ್ನು ಎಬ್ಬಿಸಲು ಸೋಲು, ಡೆಟಾಲ್, ಖಾರದ ಪುಡಿ ಇನ್ನಿತರೆ ಬೆರೆಸಿದ ನೀರನ್ನು ಸತತವಾಗಿ ಮತ್ತು ಬಲವಾಗಿ ಎಸೆದರು. ಇದರಿಂದ ಸಂಗೀತಾ ಹಾಗೂ ಡ್ರೋನ್ ಪ್ರತಾಪ್ ಮುಖ, ಕಣ್ಣಿಗೆ ಹಾನಿಯಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು.

ಶನಿವಾರ ಸುದೀಪ್​ ವಾರದ ಪಂಚಾಯ್ತಿ ನಡೆಸಲಿದ್ದಾರೆ. ಟಾಸ್ಕ್​ಗಳಲ್ಲಿ ತಪ್ಪು ಮಾಡಿದವರಿಗೆ ಇಂದು ಶಿಕ್ಷೆಯಾಗುವ ನಿರೀಕ್ಷೆ ಇದೆ. ಜೊತೆಗೆ ಈ ವಾರ ಯಾರು ಹೊರಗೆ ಹೊಗುತ್ತಾರೆ, ಯಾರು ಉಳಿದುಕೊಳ್ಳುತ್ತಾರೆ ಎಂಬ ಕುತೂಹಲಕ್ಕೂ ಅರ್ಧ ಉತ್ತರ ಸಿಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:44 pm, Sat, 9 December 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ