AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ಟಿಆರ್​ಪಿ ಪಡೆದ ‘ಬಿಗ್ ಬಾಸ್’-‘ಸರೆಗಮಪ’; ಯಾವುದಕ್ಕೆ ಹೆಚ್ಚು?

ಅತಿದೊಡ್ಡ ರಿಯಾಲಿಟಿ ಶೋ ಎಂದು ಖ್ಯಾತಿ ಪಡೆದಿರುವ ಬಿಗ್ ಬಾಸ್ ಇತ್ತೀಚೆಗೆ ಆರಂಭ ಆಯಿತು. ಅದೇ ರೀತಿ ಜೀ ಕನ್ನಡದಲ್ಲಿ ‘ಸರೆಗಮಪ’ ರಿಯಾಲಿಟಿ ಶೋ ಪ್ರಸಾರ ಆರಂಭಿಸಿದೆ. ಇವುಗಳ ಟಿಆರ್​ಪಿ ಹೊರಬಿದ್ದಿದೆ. ಯಾವುದಕ್ಕೆ ಎಷ್ಟು ಟಿಆರ್​ಪಿ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಉತ್ತಮ ಟಿಆರ್​ಪಿ ಪಡೆದ ‘ಬಿಗ್ ಬಾಸ್’-‘ಸರೆಗಮಪ’; ಯಾವುದಕ್ಕೆ ಹೆಚ್ಚು?
ರಿಯಾಲಿಟಿ ಶೋ ಟಿಆರ್​ಪಿ
ರಾಜೇಶ್ ದುಗ್ಗುಮನೆ
|

Updated on:Oct 19, 2023 | 1:30 PM

Share

ಕಿರುತೆರೆ ಜಗತ್ತು ವಿಸ್ತಾರವಾಗಿದೆ. ವಾರದ ದಿನಗಳಲ್ಲಿ ಧಾರಾವಾಹಿಗಳು ಪ್ರಸಾರ ಕಂಡರೆ ವೀಕೆಂಡ್​ನಲ್ಲಿ ರಿಯಾಲಿಟಿ ಶೋಗಳ ಅಬ್ಬರ ಇರುತ್ತದೆ. ಧಾರಾವಾಹಿ ಮಾತ್ರವಲ್ಲದೆ, ರಿಯಾಲಿಟಿ ಶೋಗಳ ಮಧ್ಯೆಯೂ ಟಫ್ ಕಾಂಪಿಟೇಷನ್ ಇದೆ. ಅತಿದೊಡ್ಡ ರಿಯಾಲಿಟಿ ಶೋ ಎಂದು ಖ್ಯಾತಿ ಪಡೆದಿರುವ ಬಿಗ್ ಬಾಸ್ (Bigg Boss) ಇತ್ತೀಚೆಗೆ ಆರಂಭ ಆಯಿತು. ಅದೇ ರೀತಿ ಜೀ ಕನ್ನಡದಲ್ಲಿ ‘ಸರೆಗಮಪ’ ರಿಯಾಲಿಟಿ ಶೋ ಪ್ರಸಾರ ಆರಂಭಿಸಿದೆ. ಇವುಗಳ ಟಿಆರ್​ಪಿ ಹೊರಬಿದ್ದಿದೆ. ಯಾವುದಕ್ಕೆ ಎಷ್ಟು ಟಿಆರ್​ಪಿ ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ರಿಯಾಲಿಟಿ ಶೋ..

‘ಸರೆಗಮಪ ಸೀಸನ್ 20’ ಇತ್ತೀಚೆಗೆ ಆರಂಭ ಆಗಿದೆ. ಜೀ ಕನ್ನಡ ವಾಹಿನಿಯಲ್ಲಿ ‘ಸರೆಗಮಪ 20ನೇ ಸೀಸನ್’ ಪ್ರಸಾರ ಕಾಣುತ್ತಿದೆ. ನಗರ ಭಾಗದಲ್ಲಿ ‘ಸರೆಗಮಪ ಸೀಸನ್ 20’ 8.2 ಟಿಆರ್​ಪಿ ಪಡೆದಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫಿನಾಲೆಗೆ 5.1 ರೇಟಿಂಗ್ ಸಿಕ್ಕಿದೆ.

ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ವಾರದ ದಿನದಲ್ಲಿ ಈ ರಿಯಾಲಿಟಿ ಶೋ ನಗರ ಭಾಗದಲ್ಲಿ 5.7 ರೇಟಿಂಗ್ ಪಡೆದಿದೆ. ವೀಕೆಂಡ್​ನಲ್ಲಿ 7.1 ರೇಟಿಂಗ್ ಶೋಗೆ ಸಿಕ್ಕಿದೆ. ವೀಕೆಂಡ್​ನಲ್ಲಿ ಕಿಚ್ಚ ಸುದೀಪ್ ಬರುತ್ತಾರೆ. ಈ ಕಾರಣಕ್ಕೆ ವಿಕೆಂಡ್​ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಈ ರಿಯಾಲಿಟಿ ಶೋ ನೋಡುತ್ತಾರೆ.

ಇದನ್ನೂ ಓದಿ: ‘ಬಿಗ್ ಬಾಸ್​ನ ಅಕ್ರಮವಾಗಿ ಪ್ರಸಾರ ಮಾಡುವಂತಿಲ್ಲ’; ಆದೇಶ ನೀಡಿದ ಕೋರ್ಟ್​  

ಧಾರಾವಾಹಿಗಳ ಟಿಆರ್​ಪಿ

ನಗರ ವಿಭಾಗದ ಟಿಆರ್​ಪಿ ಪರಿಗಣನೆಗೆ ತೆಗೆದುಕೊಂಡರೆ, ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ‘ಸೀತಾ ರಾಮ’ ಧಾರಾವಾಹಿಗೆ ಎರಡನೇ ಸ್ಥಾನ ಸಿಕ್ಕಿದೆ. ‘ಶ್ರೀರಸ್ತು ಶುಭಮಸ್ತು ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ನಾಲ್ಕನೇ ಸ್ಥಾನದಲ್ಲಿ ‘ಸತ್ಯ’ ಧಾರಾವಾಹಿ ಇದೆ. ಐದನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ. ‘ಭಾಗ್ಯಲಕ್ಷ್ಮೀ’ ಧಾರಾವಾಹಿ ಆರನೇ ಸ್ಥಾನಕ್ಕೆ ಹಾಗೂ ‘ಅಮೃತಧಾರೆ’ ಧಾರಾವಾಹಿ ಏಳನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:28 pm, Thu, 19 October 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​