ಹಠಾತ್ತನೆ ಬಿಗ್​ಬಾಸ್ ಬಳಿ ಗಂಭೀರ ಮನವಿ ಮಾಡಿದ ಸಂಗೀತಾ

Bigg Boss: ಬಿಗ್​ಬಾಸ್ ಮನೆಯ ಗಟ್ಟಿ ಸ್ಪರ್ಧಿಗಳಲ್ಲಿ ಒಬ್ಬರು ಎಂದು ತಮ್ಮನ್ನು ತಾವು ಬಿಂಬಿಸಿಕೊಂಡಿರುವ ಸಂಗೀತಾ ಹಠಾತ್ತಾಗಿ ಮನೆಗೆ ಕಳಿಸಿಬಿಡುವಂತೆ ಮನವಿ ಮಾಡಿದ್ದಾರೆ. ಬಿಗ್​ಬಾಸ್ ನಿರ್ಣಯ ಏನಾಗಿರುತ್ತದೆ?

ಹಠಾತ್ತನೆ ಬಿಗ್​ಬಾಸ್ ಬಳಿ ಗಂಭೀರ ಮನವಿ ಮಾಡಿದ ಸಂಗೀತಾ
ಸಂಗೀತಾ ಶೃಂಗೇರಿ
Follow us
|

Updated on: Oct 27, 2023 | 4:10 PM

ಬಿಗ್​ಬಾಸ್ (Bigg Boss) ಮನೆಯಲ್ಲಿ ಹಲವು ಸ್ಪರ್ಧಿಗಳು ಉತ್ತಮವಾಗಿ ಆಡುತ್ತಿದ್ದಾರೆ. ಕೆಲವರು ಟಾಸ್ಕ್​ನಿಂದ, ಕೆಲವರು ತಮ್ಮ ಮಾತಿನ ಚಾತುರ್ಯರಿಂದ, ಕೆಲವರು ತಮ್ಮ ವ್ಯಕ್ತಿತ್ವದಿಂದ ಹೀಗೆ ಹಲವು ವಿಧಗಳಲ್ಲಿ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಅದರಲ್ಲಿ ಸಂಗೀತಾ ಶೃಂಗೇರಿ ಸಹ ಒಬ್ಬರು. ಸಂಗೀತಾ (Sangeetha Sringeri) ತಮ್ಮ ನೇರ-ನಿಷ್ಠುರ ಮಾತಿನಿಂದ ಬಿಗ್​ಬಾಸ್ ಮನೆಯಲ್ಲಿ ಚರ್ಚೆಯಲ್ಲಿರುವ ಸ್ಪರ್ಧಿಯಾಗಿದ್ದಾರೆ. ಗಟ್ಟಿ ವ್ಯಕ್ತಿತ್ವದ ಹೆಣ್ಣಾಗಿ ಅವರು ಮನೆಯಲ್ಲಿ ತಮ್ಮನ್ನು ತಾವು ಬಿಂಬಿಸಿಕೊಂಡಿದ್ದರು. ಆದರೆ ಈಗ ಯಾಕೋ ವಾಪಸ್ ಹೋಗುವ ಮಾತನಾಡಿದ್ದಾರೆ.

ಕಾರ್ತಿಕ್ ಜೊತೆ ಜಗಳ, ವಿನಯ್ ಜೊತೆ ಜಗಳ ಮಾಡಿಕೊಂಡು ಇದ್ದ ಸಂಗೀತಾ ಆರಾಮವಾಗಿಯೇ ಇದ್ದಂತಿದ್ದರು, ಆದರೆ ಗುರುವಾರ ಪ್ರಸಾರವಾದ ಎಪಿಸೋಡ್​ನಲ್ಲಿ ಇದ್ದಕ್ಕಿದ್ದಂತೆ ಬಿಗ್​ಬಾಸ್ ಸೀಕ್ರೆಟ್ ರೂಂಗೆ ಹೋದ ಸಂಗೀತಾ, ತಮ್ಮನ್ನು ಮನೆಗೆ ಕಳಿಸಿಬಿಡುವಂತೆ ಬಿಗ್​ಬಾಸ್ ಬಳಿ ಮನವಿ ಮಾಡಿಕೊಂಡಿದ್ದಾರೆ. ”ನಾನು ಬಹಳ ಬೋರಿಂಗ್ ವ್ಯಕ್ತಿ, ನನ್ನಿಂದ ಯಾವುದೇ ಮನೊರಂಜನೆ ಸಿಗುವುದಿಲ್ಲ, ನನ್ನನ್ನು ಕಳಿಸಿಬಿಡಿ ಬಿಗ್​ಬಾಸ್” ಎಂದು ಸಂಗೀತಾ ಮನವಿ ಮಾಡಿದ್ದಾರೆ.

ಬಿಗ್​ಬಾಸ್ ಕಡೆಯಿಂದ ಉತ್ತರವನ್ನು ನಿರೀಕ್ಷಿಸಿ ಸಾಕಷ್ಟು ಸಮಯ ಸೀಕ್ರೇಟ್ ರೂಂನಲ್ಲಿಯೇ ಸಂಗೀತಾ ಕೂತಿದ್ದರಾದರೂ ಬಿಗ್​ಬಾಸ್ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ಸಂಗೀತಾಗೆ ನೀಡಲಿಲ್ಲ. ಕೊನೆಗೆ ತಾವಾಗಿಯೇ ಸೀಕ್ರೆಟ್ ರೂಂನಿಂದ ಹೊರಬಂದರು. ಬಳಿಕ ಎಲ್ಲರೊಡನೆ ಮಾಮೂಲಿನಂತೆ ಬೆರೆತರು. ಕಾರ್ತಿಕ್, ವಿನಯ್, ನಮ್ರತಾ ಜೊತೆ ಸೇರಿ ತಮಾಷೆ ಮಾಡುತ್ತಾ ಆರಾಮವಾಗಿಯೇ ಇದ್ದರು.

ಇದನ್ನೂ ಓದಿ:ಬಿಗ್​ಬಾಸ್ 10ರ ಹೀರೋ ಸಂಗೀತಾ ಶೃಂಗೇರಿ ಯಾರು? ಅವರ ಹಿನ್ನೆಲೆ ಏನು?

ಸಂಗೀತಾ, ಕಾರ್ತಿಕ್ ಹಾಗೂ ವಿನಯ್ ನಡುವೆ ನಡೆಯುತ್ತಿರುವ ಸ್ನೇಹ, ಪ್ರೀತಿ, ಜಗಳಗಳು ಆಸಕ್ತಿಕರವಾಗಿವೆ. ಸಂಗೀತಾ ವೈಯಕ್ತಿಕವಾಗಿ ಗೆಲ್ಲುವ ಛಲವುಳ್ಳ ಆಟಗಾರ್ತಿಯೆಂದೇ ಮನೆಯಲ್ಲಿ ಬಿಂಬಿಸಿಕೊಂಡಿದ್ದಾರೆ. ಟಾಸ್ಕ್​ಗಳ ವಿಷಯ ಬಂದಾಗ, ಮನೆಯಲ್ಲಿ ಯಾವುದಾದರೂ ನಿರ್ಣಯಗಳನ್ನು ತೆಗೆದುಕೊಳ್ಳುವ ವಿಷಯ ಬಂದಾಗ ತಮ್ಮನ್ನು ತಾವು ತೊಡಗಿಸಿಕೊಳ್ಳುತ್ತಾರೆ. ಆದರೆ ಅವರ ಚಂಚಲ ಸ್ವಭಾವದಿಂದಾಗಿ ಈಗ ಬಿಗ್​ಬಾಸ್ ಮನೆಯಿಂದ ಹೊರ ಹೋಗುವ ಮಾತನ್ನಾಡಿದ್ದಾರೆ ಅನ್ನಿಸುತ್ತದೆ.

ಕನ್ನಡ ಬಿಗ್​ಬಾಸ್ ಇತಿಹಾಸದಲ್ಲಿ ಹೀಗೆ, ಮನೆಗೆ ಹೋಗಲು ಬಿಡಿ ಎಂದ ಯಾರನ್ನು ಸುಮ್ಮನೆ ಮನೆಗೆ ಕಳಿಸಿದ್ದಲ್ಲ. ನಿಯಮ ಉಲ್ಲಂಘಿಸಿ ಮನೆಗೆ ಹೋದವರಿದ್ದಾರೆ, ಆರೋಗ್ಯ ಸಮಸ್ಯೆ ಇನ್ನಿತರೆ ಗಂಭೀರ ಸಮಸ್ಯೆಗಳಾದಾಗ ಬಿಗ್​ಬಾಸ್​ ಸ್ಪರ್ಧಿಗಳನ್ನು ಮನೆಗೆ ಕಳಿಸಿದ್ದಿದೆ. ಆದರೆ ಮಾಡಿದ ಮನವಿಗೆ ಓಗೊಟ್ಟು ಮನೆಗೆ ಕಳಿಸಿದ ಉದಾಹರಣೆ ಇಲ್ಲ. ಈ ವಾರಾಂತ್ಯದ ಎಪಿಸೋಡ್​ನಲ್ಲಿ ಸುದೀಪ್ ಬರಲಿದ್ದಾರೆ. ಅವರು ಸಂಗೀತಾಗೆ ಸ್ಪೂರ್ತಿ ತುಂಬುವ ಅಥವಾ ಬುದ್ಧಿ ಹೇಳುವ ಸಾಧ್ಯತೆ ಇದೆ. ಬಿಗ್​ಬಾಸ್ ಕನ್ನಡ ಸೀಸನ್ 10 ಕಲರ್ಸ್ ವಾಹಿನಿಯಲ್ಲಿ ಪ್ರತಿ ರಾತ್ರಿ 9:30ಕ್ಕೆ ಹಾಗೂ ಜಿಯೋ ಸಿನಿಮಾಸ್​ನಲ್ಲಿ ಪ್ರತಿದಿನ ಲೈವ್ ಪ್ರಸಾರವಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ