AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ವಿಶ್ವಕಪ್​ ಸೋತಿದ್ದು ಈ 12 ಜನರಿಗೆ ಇನ್ನೂ ಗೊತ್ತಿಲ್ಲ; ತಿಳಿಯೋದು ಯಾವಾಗ?

‘ಐಸಿಸಿ ವಿಶ್ವಕಪ್​ 2023’ ಪಂದ್ಯದಲ್ಲಿ ಭಾರತ ಫೈನಲ್​ಗೆ ಹೋಗಿತ್ತು ಎಂಬುದಾಗಲಿ, ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದೆ ಎಂಬುದಾಗಲಿ ಇವರಿಗೆ ತಿಳಿದೇ ಇಲ್ಲ. ಆ ವಿಷಯ ತಿಳಿದರೆ ಖಂಡಿತವಾಗಿಯೂ ಅವರಿಗೆಲ್ಲ ಸಖತ್​ ಬೇಸರ ಆಗಲಿದೆ. ಸೂಕ್ತ ಸಮಯ ಬಂದಾಗ ಅವರ ಎದುರು ಸೋಲಿನ ವಿಷಯ ಬಹಿರಂಗ ಆಗಲಿದೆ.

ಭಾರತ ವಿಶ್ವಕಪ್​ ಸೋತಿದ್ದು ಈ 12 ಜನರಿಗೆ ಇನ್ನೂ ಗೊತ್ತಿಲ್ಲ; ತಿಳಿಯೋದು ಯಾವಾಗ?
ಟೀಮ್ ಇಂಡಿಯಾ
ಮದನ್​ ಕುಮಾರ್​
|

Updated on: Nov 21, 2023 | 6:04 PM

Share

ಈ ಬಾರಿ ಭಾರತ ಖಂಡಿತವಾಗಿಯೂ ವಿಶ್ವಕಪ್​ (ICC World Cup) ಗೆಲ್ಲಲ್ಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಆ ಆಸೆ ಈಡೇರಲೇ ಇಲ್ಲ. ಫೈನಲ್​ ತನಕ ಸೋಲಿಲ್ಲದ ಸರದಾರರಂತೆ ಮುನ್ನುಗ್ಗಿದ್ದ ಟೀಮ್​ ಇಂಡಿಯಾ ಆಟಗಾರರು ಫೈನಲ್​ನಲ್ಲಿ ಮುಗ್ಗರಿಸಿದರು. ಇಡೀ ದೇಶಕ್ಕೆ ಇದರಿಂದ ಆಘಾತ ಆಯಿತು. ಇಂಡಿಯಾ ವರ್ಸಸ್​ ಆಸ್ಟ್ರೇಲಿಯಾ (Ind vs Aus) ಪಂದ್ಯವನ್ನು ನೋಡುತ್ತಿದ್ದ ಕೋಟ್ಯಂತರ ಹೃದಯಗಳಿಗೆ ಘಾಸಿ ಆಯಿತು. ಸೋಲಿನ ನೋವಿನಲ್ಲಿ ಕಣ್ಣೀರು ಹಾಕಿದವರಿಗೆ ಲೆಕ್ಕವೇ ಇಲ್ಲ. ಇಷ್ಟೆಲ್ಲ ಆಗಿದ್ದರೂ ಕೂಡ ಕೆಲವರಿಗೆ ಭಾರತ ವಿಶ್ವಕಪ್​ ಸೋತಿದೆ ಎಂಬುದು ಇನ್ನೂ ಗೊತ್ತಿಲ್ಲ! ಯಾರು ಅದು? ಬಿಗ್​ ಬಾಸ್​’ (Bigg Boss Kannada) ಸ್ಪರ್ಧಿಗಳು!

ಬಿಗ್​ ಬಾಸ್​ ಮನೆಗೆ ಕಾಲಿಡುವವರು ಹೊರ ಜಗತ್ತಿನ ಸಂಪರ್ಕವನ್ನು ಸಂಪೂರ್ಣವಾಗಿ ಕಡಿದುಕೊಳ್ಳಬೇಕು. ಮೊಬೈಲ್​, ಸೋಶಿಯಲ್​ ಮೀಡಿಯಾ ಬಳಸುವಂತಿಲ್ಲ. ಹೊರಗೆ ಏನು ನಡೆಯುತ್ತಿದೆ ಎಂಬುದರ ಅರಿವೇ ಇಲ್ಲದೇ ಆಟ ಆಡಬೇಕು. ಈ ಸಂದರ್ಭದಲ್ಲಿ ನಡೆಯುವ ಪ್ರಮುಖ ಘಟನೆಗಳು ಅವರ ಗಮನಕ್ಕೆ ಬರುವುದಿಲ್ಲ. ಈಗ ಭಾರತ ತಂಡ ವಿಶ್ವಕಪ್​ ಫೈನಲ್​ಗೆ ಹೋಗಿತ್ತು ಎಂಬುದಾಗಲಿ, ಫೈನಲ್​ನಲ್ಲಿ ಸೋತಿದೆ ಎಂಬುದಾಗಲಿ ಬಿಗ್​ ಬಾಸ್​ ಬಾಸ್​ ಮಂದಿಗೆ ತಿಳಿದೇ ಇಲ್ಲ. ಆ ವಿಷಯ ತಿಳಿದರೆ ಖಂಡಿತವಾಗಿಯೂ ಎಲ್ಲರಿಗೂ ಸಖತ್​ ಬೇಸರ ಆಗಲಿದೆ.

ಇದನ್ನೂ ಓದಿ: Bigg Boss Kannada: ‘ನೋಡಪ್ಪ.. ಕೇಳಯ್ಯ ಇಲ್ಲಿ’: ಬಿಗ್​ ಬಾಸ್​ಗೆ ಏಕವಚನದಲ್ಲಿ ಮಾತನಾಡಿಸಿದ ಬ್ರಹ್ಮಾಂಡ ಗುರೂಜಿ

ಪ್ರತಿ ಬಾರಿಯೂ ಬಿಗ್​ ಬಾಸ್​ ಶೋ ಕೊನೇ ಹಂತವನ್ನು ತಲುಪುವಾಗ ಕೆಲವು ಸುದ್ದಿಗಳನ್ನು ಸ್ಪರ್ಧಿಗಳಿಗೆ ತೋರಿಸಲಾಗುತ್ತದೆ. ಬಿಗ್​ ಬಾಸ್​ ಶೋ ಆರಂಭ ಆದ ಬಳಿಕ ಇಂದಿನ ತನಕ ಹೊರಜಗತ್ತಿನಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳನ್ನು ವಾರ್ತೆಯನ್ನು ತಿಳಿಸಲಾಗುತ್ತದೆ. ಈ ಹಿಂದಿನ ಸೀಸನ್​ಗಳಲ್ಲಿ ಈ ರೀತಿ ಮಾಡಲಾಗಿತ್ತು. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ರಲ್ಲೂ ಆ ರೀತಿ ನ್ಯೂಸ್​ ಪ್ರಸಾರ ಮಾಡಿದರೆ ಮಾತ್ರ ಸ್ಪರ್ಧಿಗಳಿಗೆಲ್ಲ ವಿಶ್ವಕಪ್​ ಸೋಲಿನ ವಿಷಯ ಗೊತ್ತಾಗಲಿದೆ. ಒಂದು ವೇಳೆ ನ್ಯೂಸ್​ ತೋರಿಸದೇ ಇದ್ದರೆ ಬಿಗ್​ ಬಾಸ್​ ಫಿನಾಲೆ ಆದ ನಂತರವೇ ಆ ವಿಚಾರ ಗೊತ್ತಾಗಬೇಕಷ್ಟೇ.

ಇದನ್ನೂ ಓದಿ: ಬಿಗ್​ ಬಾಸ್​ಗೆ ಹೋಗಲು ಚಾನ್ಸ್​ ಕೇಳಿಕೊಂಡು ಎತ್ತಿನ ಗಾಡಿಯಲ್ಲಿ ಸುದೀಪ್​ ಮನೆಗೆ ಬಂದ ‘ಅವಿದ್ಯಾವಂತ ರೈತ’

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಈಗ 7ನೇ ವಾರದ ಆಟ ನಡೆಯುತ್ತಿದೆ. ಅಂದರೆ, ಬಹುತೇಕ ಅರ್ಧ ಹಂತಕ್ಕೆ ಬಂದಿದೆ. ಸದ್ಯಕ್ಕೆ ದೊಡ್ಮನೆಯಲ್ಲಿ 12 ಮಂದಿ ಇದ್ದಾರೆ. ವರ್ತೂರು ಸಂತೋಷ್​, ತುಕಾಲಿ ಸಂತೋಷ್​, ವಿನಯ್​ ಗೌಡ, ಸ್ನೇಹಿತ್​ ಗೌಡ, ನಮ್ರತಾ ಗೌಡ, ಸಂಗೀತಾ ಶೃಂಗೇರಿ, ತನಿಷಾ ಕುಪ್ಪಂಡ, ಕಾರ್ತಿಕ್​ ಮಹೇಶ್​, ಡ್ರೋನ್​ ಪ್ರತಾಪ್​, ಮೈಕೆಲ್​ ಅಜಯ್​, ನೀತು ವನಜಾಕ್ಷಿ, ಸಿರಿ ಅವರು ಆಟ ಮುಂದುವರಿಸಿದ್ದಾರೆ. 6ನೇ ವಾರದಲ್ಲಿ ಡಬಲ್​ ಎಲಿಮಿಷನ್​ ನಡೆದಿತ್ತು ಈಶಾನಿ ಮತ್ತು ಭಾಗ್ಯಶ್ರೀ ಅವರು ಔಟ್​ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು