AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ವಿಶ್ವಕಪ್​ ಸೋತಿದ್ದು ಈ 12 ಜನರಿಗೆ ಇನ್ನೂ ಗೊತ್ತಿಲ್ಲ; ತಿಳಿಯೋದು ಯಾವಾಗ?

‘ಐಸಿಸಿ ವಿಶ್ವಕಪ್​ 2023’ ಪಂದ್ಯದಲ್ಲಿ ಭಾರತ ಫೈನಲ್​ಗೆ ಹೋಗಿತ್ತು ಎಂಬುದಾಗಲಿ, ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದೆ ಎಂಬುದಾಗಲಿ ಇವರಿಗೆ ತಿಳಿದೇ ಇಲ್ಲ. ಆ ವಿಷಯ ತಿಳಿದರೆ ಖಂಡಿತವಾಗಿಯೂ ಅವರಿಗೆಲ್ಲ ಸಖತ್​ ಬೇಸರ ಆಗಲಿದೆ. ಸೂಕ್ತ ಸಮಯ ಬಂದಾಗ ಅವರ ಎದುರು ಸೋಲಿನ ವಿಷಯ ಬಹಿರಂಗ ಆಗಲಿದೆ.

ಭಾರತ ವಿಶ್ವಕಪ್​ ಸೋತಿದ್ದು ಈ 12 ಜನರಿಗೆ ಇನ್ನೂ ಗೊತ್ತಿಲ್ಲ; ತಿಳಿಯೋದು ಯಾವಾಗ?
ಟೀಮ್ ಇಂಡಿಯಾ
ಮದನ್​ ಕುಮಾರ್​
|

Updated on: Nov 21, 2023 | 6:04 PM

Share

ಈ ಬಾರಿ ಭಾರತ ಖಂಡಿತವಾಗಿಯೂ ವಿಶ್ವಕಪ್​ (ICC World Cup) ಗೆಲ್ಲಲ್ಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಆ ಆಸೆ ಈಡೇರಲೇ ಇಲ್ಲ. ಫೈನಲ್​ ತನಕ ಸೋಲಿಲ್ಲದ ಸರದಾರರಂತೆ ಮುನ್ನುಗ್ಗಿದ್ದ ಟೀಮ್​ ಇಂಡಿಯಾ ಆಟಗಾರರು ಫೈನಲ್​ನಲ್ಲಿ ಮುಗ್ಗರಿಸಿದರು. ಇಡೀ ದೇಶಕ್ಕೆ ಇದರಿಂದ ಆಘಾತ ಆಯಿತು. ಇಂಡಿಯಾ ವರ್ಸಸ್​ ಆಸ್ಟ್ರೇಲಿಯಾ (Ind vs Aus) ಪಂದ್ಯವನ್ನು ನೋಡುತ್ತಿದ್ದ ಕೋಟ್ಯಂತರ ಹೃದಯಗಳಿಗೆ ಘಾಸಿ ಆಯಿತು. ಸೋಲಿನ ನೋವಿನಲ್ಲಿ ಕಣ್ಣೀರು ಹಾಕಿದವರಿಗೆ ಲೆಕ್ಕವೇ ಇಲ್ಲ. ಇಷ್ಟೆಲ್ಲ ಆಗಿದ್ದರೂ ಕೂಡ ಕೆಲವರಿಗೆ ಭಾರತ ವಿಶ್ವಕಪ್​ ಸೋತಿದೆ ಎಂಬುದು ಇನ್ನೂ ಗೊತ್ತಿಲ್ಲ! ಯಾರು ಅದು? ಬಿಗ್​ ಬಾಸ್​’ (Bigg Boss Kannada) ಸ್ಪರ್ಧಿಗಳು!

ಬಿಗ್​ ಬಾಸ್​ ಮನೆಗೆ ಕಾಲಿಡುವವರು ಹೊರ ಜಗತ್ತಿನ ಸಂಪರ್ಕವನ್ನು ಸಂಪೂರ್ಣವಾಗಿ ಕಡಿದುಕೊಳ್ಳಬೇಕು. ಮೊಬೈಲ್​, ಸೋಶಿಯಲ್​ ಮೀಡಿಯಾ ಬಳಸುವಂತಿಲ್ಲ. ಹೊರಗೆ ಏನು ನಡೆಯುತ್ತಿದೆ ಎಂಬುದರ ಅರಿವೇ ಇಲ್ಲದೇ ಆಟ ಆಡಬೇಕು. ಈ ಸಂದರ್ಭದಲ್ಲಿ ನಡೆಯುವ ಪ್ರಮುಖ ಘಟನೆಗಳು ಅವರ ಗಮನಕ್ಕೆ ಬರುವುದಿಲ್ಲ. ಈಗ ಭಾರತ ತಂಡ ವಿಶ್ವಕಪ್​ ಫೈನಲ್​ಗೆ ಹೋಗಿತ್ತು ಎಂಬುದಾಗಲಿ, ಫೈನಲ್​ನಲ್ಲಿ ಸೋತಿದೆ ಎಂಬುದಾಗಲಿ ಬಿಗ್​ ಬಾಸ್​ ಬಾಸ್​ ಮಂದಿಗೆ ತಿಳಿದೇ ಇಲ್ಲ. ಆ ವಿಷಯ ತಿಳಿದರೆ ಖಂಡಿತವಾಗಿಯೂ ಎಲ್ಲರಿಗೂ ಸಖತ್​ ಬೇಸರ ಆಗಲಿದೆ.

ಇದನ್ನೂ ಓದಿ: Bigg Boss Kannada: ‘ನೋಡಪ್ಪ.. ಕೇಳಯ್ಯ ಇಲ್ಲಿ’: ಬಿಗ್​ ಬಾಸ್​ಗೆ ಏಕವಚನದಲ್ಲಿ ಮಾತನಾಡಿಸಿದ ಬ್ರಹ್ಮಾಂಡ ಗುರೂಜಿ

ಪ್ರತಿ ಬಾರಿಯೂ ಬಿಗ್​ ಬಾಸ್​ ಶೋ ಕೊನೇ ಹಂತವನ್ನು ತಲುಪುವಾಗ ಕೆಲವು ಸುದ್ದಿಗಳನ್ನು ಸ್ಪರ್ಧಿಗಳಿಗೆ ತೋರಿಸಲಾಗುತ್ತದೆ. ಬಿಗ್​ ಬಾಸ್​ ಶೋ ಆರಂಭ ಆದ ಬಳಿಕ ಇಂದಿನ ತನಕ ಹೊರಜಗತ್ತಿನಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳನ್ನು ವಾರ್ತೆಯನ್ನು ತಿಳಿಸಲಾಗುತ್ತದೆ. ಈ ಹಿಂದಿನ ಸೀಸನ್​ಗಳಲ್ಲಿ ಈ ರೀತಿ ಮಾಡಲಾಗಿತ್ತು. ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ರಲ್ಲೂ ಆ ರೀತಿ ನ್ಯೂಸ್​ ಪ್ರಸಾರ ಮಾಡಿದರೆ ಮಾತ್ರ ಸ್ಪರ್ಧಿಗಳಿಗೆಲ್ಲ ವಿಶ್ವಕಪ್​ ಸೋಲಿನ ವಿಷಯ ಗೊತ್ತಾಗಲಿದೆ. ಒಂದು ವೇಳೆ ನ್ಯೂಸ್​ ತೋರಿಸದೇ ಇದ್ದರೆ ಬಿಗ್​ ಬಾಸ್​ ಫಿನಾಲೆ ಆದ ನಂತರವೇ ಆ ವಿಚಾರ ಗೊತ್ತಾಗಬೇಕಷ್ಟೇ.

ಇದನ್ನೂ ಓದಿ: ಬಿಗ್​ ಬಾಸ್​ಗೆ ಹೋಗಲು ಚಾನ್ಸ್​ ಕೇಳಿಕೊಂಡು ಎತ್ತಿನ ಗಾಡಿಯಲ್ಲಿ ಸುದೀಪ್​ ಮನೆಗೆ ಬಂದ ‘ಅವಿದ್ಯಾವಂತ ರೈತ’

‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ರಿಯಾಲಿಟಿ ಶೋನಲ್ಲಿ ಈಗ 7ನೇ ವಾರದ ಆಟ ನಡೆಯುತ್ತಿದೆ. ಅಂದರೆ, ಬಹುತೇಕ ಅರ್ಧ ಹಂತಕ್ಕೆ ಬಂದಿದೆ. ಸದ್ಯಕ್ಕೆ ದೊಡ್ಮನೆಯಲ್ಲಿ 12 ಮಂದಿ ಇದ್ದಾರೆ. ವರ್ತೂರು ಸಂತೋಷ್​, ತುಕಾಲಿ ಸಂತೋಷ್​, ವಿನಯ್​ ಗೌಡ, ಸ್ನೇಹಿತ್​ ಗೌಡ, ನಮ್ರತಾ ಗೌಡ, ಸಂಗೀತಾ ಶೃಂಗೇರಿ, ತನಿಷಾ ಕುಪ್ಪಂಡ, ಕಾರ್ತಿಕ್​ ಮಹೇಶ್​, ಡ್ರೋನ್​ ಪ್ರತಾಪ್​, ಮೈಕೆಲ್​ ಅಜಯ್​, ನೀತು ವನಜಾಕ್ಷಿ, ಸಿರಿ ಅವರು ಆಟ ಮುಂದುವರಿಸಿದ್ದಾರೆ. 6ನೇ ವಾರದಲ್ಲಿ ಡಬಲ್​ ಎಲಿಮಿಷನ್​ ನಡೆದಿತ್ತು ಈಶಾನಿ ಮತ್ತು ಭಾಗ್ಯಶ್ರೀ ಅವರು ಔಟ್​ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವೇಗ ಅತೀ ವೇಗ... ಅತ್ಯಂತ ವೇಗದಲ್ಲಿ ಚೆಂಡೆಸದ 23 ವರ್ಷದ ಯುವ ವೇಗಿ
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ವಿದ್ಯಾರ್ಥಿಗಳು ತಾಂಬೂಲ ಸೇವನೆ ಮಾಡಬಾರದು ಯಾಕೆ?
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಇಂದು ಈ ರಾಶಿಯವರಿಗೆ ಪ್ರೀತಿಪಾತ್ರರೊಂದಿಗೆ ಭಿನ್ನಾಭಿಪ್ರಾಯಗಳು ಬರಬಹುದು
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಪೆಟ್ರೋಲ್ ಬಂಕ್​ನಲ್ಲಿ ಡೀಸೆಲ್​ನಿಂದ ಗಾಡಿ ತೊಳೆದ ಯುವಕ!
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಬಾಗಲಕೋಟೆ ಬೈ ಎಲೆಕ್ಷನ್​​: ಬಿಜೆಪಿ, ಕಾಂಗ್ರೆಸ್​​ ನಡುವೆ ಕರಪತ್ರ ಫೈಟ್
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!