AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rap Singer Eshani: ಬಿಗ್​​ ಬಾಸ್​ ಮನೆಯೊಳಗೆ ಕಾಲಿಟ್ಟ 3ನೇ ಸ್ಪರ್ಧಿ ಈಶಾನಿ; ದುಬೈನಲ್ಲಿ ಬೆಳೆದ ಕನ್ನಡದ ಹುಡುಗಿ

Bigg Boss Kannada Season 10: ಇದು 10ನೇ ಸೀಸನ್​ ಆಗಿರುವುದರಿಂದ ಈ ಬಾರಿ ಅದ್ದೂರಿತನ ಜಾಸ್ತಿಯೇ ಇದೆ. ವಿವಿಧ ಕ್ಷೇತ್ರಗಳ ಸ್ಪರ್ಧಿಗಳು ದೊಡ್ಮನೆಯಲ್ಲಿ ಪೈಪೋಟಿ ನೀಡುವ ಅವಕಾಶ ಪಡೆದಿದ್ದಾರೆ. ಮೂರನೇ ಸ್ಪರ್ಧಿಯಾಗಿ ರ‍್ಯಾಪ್​ ಗಾಯಕಿ ಈಶಾನಿ ಅವರಿಗೆ ಅವಕಾಶ ಸಿಕ್ಕಿದೆ.

Rap Singer Eshani: ಬಿಗ್​​ ಬಾಸ್​ ಮನೆಯೊಳಗೆ ಕಾಲಿಟ್ಟ 3ನೇ ಸ್ಪರ್ಧಿ ಈಶಾನಿ; ದುಬೈನಲ್ಲಿ ಬೆಳೆದ ಕನ್ನಡದ ಹುಡುಗಿ
ರ‍್ಯಾಪ್​ ಸಿಂಗರ್​ ಈಶಾನಿ
ಮದನ್​ ಕುಮಾರ್​
|

Updated on: Oct 08, 2023 | 7:29 PM

Share

ಅದ್ದೂರಿಯಾಗಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ (Bigg Boss Kannada Season 10) ಶೋಗೆ ಚಾಲನೆ ಸಿಕ್ಕಿದೆ. ಹಲವು ಬಗೆಯ ವ್ಯಕ್ತಿತ್ವ ಇರುವ ಸ್ಪರ್ಧಿಗಳು ಬಿಗ್​ ಬಾಸ್ (Bigg Boss Kannada)​ ಮನೆಯೊಳಗೆ ಎಂಟ್ರಿ ನೀಡಿದ್ದಾರೆ. ದೊಡ್ಮನೆಗೆ ಹೋಗುವುದಕ್ಕೂ ಮುನ್ನವೇ ವೇದಿಕೆಯಲ್ಲಿ ಈ ಸ್ಪರ್ಧಿಗಳು ಅರ್ಹರು ಹೌದೋ ಅಲ್ಲವೋ ಎಂಬುದಕ್ಕೆ ಓಟಿಂಗ್​ ನಡೆಯಿತು. ಅಗತ್ಯ ಇರುವಷ್ಟು ಓಟ್​ ಪಡೆದವರಿಗೆ ಮಾತ್ರ ಬಿಗ್​ ಬಾಸ್​ ಮನೆಯನ್ನು ಪ್ರವೇಶಿಸುವ ಚಾನ್ಸ್​ ಸಿಕ್ಕಿತು. ಮೂರನೇ ಸ್ಪರ್ಧಿಯಾಗಿ ರ‍್ಯಾಪ್​ ಸಿಂಗರ್​ ಈಶಾನಿ (Rap Singer Eshani) ಅವರು ಬಿಗ್​ ಬಾಸ್​ ಮನೆ ಪ್ರವೇಶಿಸಿದ್ದಾರೆ. ಕಿಚ್ಚ ಸುದೀಪ್​ ಅವರು ಎಂದಿನ ಉತ್ಸಾಹದಲ್ಲಿ ಶೋ ನಿರೂಪಣೆ ಮಾಡುತ್ತಿದ್ದಾರೆ.

ಮೊದಲ ಸ್ಪರ್ಧಿಯಾಗಿ ನಟಿ ನಮ್ರತಾ ಗೌಡ ಅವರು ಬಿಗ್​ ಬಾಸ್​ ಮನೆಗೆ ಬಂದಿದ್ದಾರೆ. ನಂತರ ಎರಡನೇ ಸ್ಪರ್ಧಿಯಾಗಿ ಸ್ನೇಹಿತ್​ ಗೌಡ ಅವರು ದೊಡ್ಮನೆ ಪ್ರವೇಶಿಸಿದ್ದಾರೆ. ಬಿಗ್​ ಬಾಸ್​ ಮನೆಯೊಳಗೆ ಕಾಲಿಟ್ಟ ಮೂರನೇ ಸ್ಪರ್ಧಿ ಈಶಾನಿ. ಇದು 10ನೇ ಸೀಸನ್​ ಆಗಿರುವುದರಿಂದ ಈ ಬಾರಿ ಅದ್ದೂರಿತನ ಜಾಸ್ತಿಯೇ ಇದೆ. ವಿವಿಧ ಕ್ಷೇತ್ರಗಳ ಸ್ಪರ್ಧಿಗಳು ದೊಡ್ಮನೆಯಲ್ಲಿ ಪೈಪೋಟಿ ನೀಡುವ ಅವಕಾಶ ಪಡೆದಿದ್ದಾರೆ. ಈ ಸಲ ಮನೆಯ ವಿನ್ಯಾಸ ಸಖತ್​ ಗ್ರ್ಯಾಂಡ್​ ಆಗಿದೆ. 100 ದಿನಗಳ ಕಾಲ ನಡೆಯುವ ಈ ರಿಯಾಲಿಟಿ ಶೋ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ 24 ಗಂಟೆಯೂ ಉಚಿತವಾಗಿ ಪ್ರಸಾರ ಆಗಲಿದೆ. ಪ್ರತಿ ದಿನದ ಎಪಿಸೋಡ್​ಗಳು ‘ಕಲರ್ಸ್​ ಕನ್ನಡ’ ವಾಹಿಯಲ್ಲಿ ರಾತ್ರಿ 9.30ಕ್ಕೆ ಬಿತ್ತರ ಆಗಲಿವೆ.

ರ‍್ಯಾಪ್​ ಸಿಂಗರ್​ ಈಶಾನಿ ಹಿನ್ನೆಲೆ:

ಲಾಸ್​ ಏಂಜಲಿಸ್​ನಲ್ಲಿ ಇದ್ದ ಈಶಾನಿ ಅವರು ನಂತರ ದುಬೈಗೆ ಹೋದರು. ಕನ್ನಡದ ಹುಡುಗಿಯೇ ಆದ ಅವರು ಮೂಲತಃ ಮೈಸೂರಿನವರು. ಬೆಳೆದಿದ್ದು ಬೆಂಗಳೂರು, ಲಾಸ್​ ಎಂಜಲೀಸ್​ ಮತ್ತು ದುಬೈನಲ್ಲಿ. ಬಳಿಕ ಬಿಗ್​ ಬಾಸ್​ಗೆ ಹೋಗಬೇಕು ಎಂದು ಅವರು ತೀರ್ಮಾನಿಸಿದರು. ಹೈಸ್ಕೂಲ್​ನಲ್ಲಿ ಇದ್ದಾಗಲೇ ಸಂಗೀತದ ಬಗ್ಗೆ ಆಸಕ್ತಿ ಬೆಳೆಸಿಕೊಂಡ ಅವರು ನಂತರ ರ‍್ಯಾಪ್​ ಸಿಂಗರ್​ ಆಗಿ ಬೆಳೆದರು. ಬಿಗ್​ ಬಾಸ್​ ವೇದಿಕೆಯಲ್ಲಿ 83 ಪರ್ಸೆಂಟ್​ ಓಟ್​ ಪಡೆದ ಅವರಿಗೆ ದೊಡ್ಮನೆ ಒಳಗೆ ಪ್ರವೇಶ ಮಾಡುವ ಅವಕಾಶ ಸಿಕ್ಕಿದೆ.

ಇದನ್ನೂ ಓದಿ: Namratha Gowda: ‘ಬಿಗ್​ ಬಾಸ್​ ಕನ್ನಡ ಸೀಸನ್​ 10’ ಮೊದಲ ಸ್ಪರ್ಧಿ ನಮ್ರತಾ ಗೌಡ; ನಟಿಯ ಪರಿಚಯ ಇಲ್ಲಿದೆ..

ಅಪ್ಪ-ಅಮ್ಮನನ್ನು ಬಿಟ್ಟು ಬಿಗ್​ ಬಾಸ್​ ಮನೆಯೊಳಗೆ ಹೋಗಲಾರದೇ ಈಶಾನಿ ಅವರು ವೇದಿಕೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತರು. ಸಿಕ್ಕಾಪಟ್ಟೆ ಎಮೋಷನಲ್​ ಆದ ಅವರನ್ನು ಆತ್ಮೀಯವಾಗಿ ಬಿಗ್​ ಬಾಸ್​ ಮನೆಗೆ ಕಳಿಸಿಕೊಡಲಾಯಿತು. ಈಶಾನಿ ಅವರು ವಿದೇಶದಲ್ಲಿ ಬೆಳೆದವರ ಆದ್ದರಿಂದ ಬಿಗ್​ ಬಾಸ್​ ಮನೆಯಲ್ಲಿ ಹೇಗೆ ಹೊಂದಿಕೊಳ್ಳುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ