AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಬಿಗ್ ಬಾಸ್​ಗೆ ಹೊಸ ಮನೆ; ಹೊಸ ಲೇಔಟ್, ಹೊಸ ಲುಕ್

‘ಬಿಗ್ ಬಾಸ್’ ಮನೆ ಇಷ್ಟು ದಿನ ಇನೋವೇಟಿವ್ ಫಿಲ್ಮ್​ ಸಿಟಿಯಲ್ಲಿ ಇತ್ತು. ಆದರೆ, ಈಗ ಇದನ್ನು ಸ್ಥಳಾಂತರಿಸಲಾಗಿದೆ. ಇದರ ಕೆಲಸಗಳು ಹೇಗೆ ನಡೆದವು ಎಂಬ ಬಗ್ಗೆ ಮೇಕಿಂಗ್ ವಿಡಿಯೋದಲ್ಲಿ ತೋರಿಸಲಾಗಿದೆ. ನಾಲ್ಕು ತಿಂಗಳ ಕಾಲ ಹಗಲು-ರಾತ್ರಿ ಶ್ರಮ ಹಾಕಿ ಈ ಮನೆ ನಿರ್ಮಾಣ ಮಾಡಲಾಗಿದೆ.

ಈ ಬಾರಿಯ ಬಿಗ್ ಬಾಸ್​ಗೆ ಹೊಸ ಮನೆ; ಹೊಸ ಲೇಔಟ್, ಹೊಸ ಲುಕ್
ಬಿಗ್ ಬಾಸ್ ಮನೆ
Follow us
ರಾಜೇಶ್ ದುಗ್ಗುಮನೆ
|

Updated on: Oct 03, 2023 | 1:09 PM

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (Bigg Boss Kannada Season 10) ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಸುದೀಪ್ ನೇತೃತ್ವದಲ್ಲಿ 10ನೇ ಸೀಸನ್ ನಡೆಯಲಿದೆ. ಈ ಸೀಸನ್ ಹಲವು ಹೊಸತನಕ್ಕೆ ಸಾಕ್ಷಿ ಆಗಲಿದೆ. ಇಂದು (ಅಕ್ಟೋಬರ್ 03) ಬಿಗ್ ಬಾಸ್​ಗೆ ಸಂಬಂಧಿಸಿ ಸುದ್ದಿಗೋಷ್ಠಿ ಆಯೋಜನೆ ಮಾಡಲಾಯಿತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪ್ರಶಾಂತ್ ನಾಯಕ್ ಮಾತನಾಡಿದರು. ಹೊಸ ಮನೆಯ ನಿರ್ಮಾಣದ ವಿಚಾರವನ್ನೂ ತಿಳಿಸಲಾಗಿದೆ.

‘ಬಿಗ್ ಬಾಸ್’ ಮನೆ ಇಷ್ಟು ದಿನ ಇನೋವೇಟಿವ್ ಫಿಲ್ಮ್​ ಸಿಟಿಯಲ್ಲಿ ಇತ್ತು. ಆದರೆ, ಈಗ ಇದನ್ನು ಸ್ಥಳಾಂತರಿಸಲಾಗಿದೆ. ಇದರ ಕೆಲಸಗಳು ಹೇಗೆ ನಡೆದವು ಎಂಬ ಬಗ್ಗೆ ಮೇಕಿಂಗ್ ವಿಡಿಯೋದಲ್ಲಿ ತೋರಿಸಲಾಗಿದೆ. ನಾಲ್ಕು ತಿಂಗಳ ಕಾಲ ಹಗಲು-ರಾತ್ರಿ ಶ್ರಮ ಹಾಕಿ ಈ ಮನೆ ನಿರ್ಮಾಣ ಮಾಡಲಾಗಿದೆ. ಈ ಬಾರಿಯ ಬಿಗ್ ಬಾಸ್​ ಮನೆಗೆ ಹೊಸ ರೀತಿಯ ಲೇಔಟ್ ನೀಡಲಾಗಿದೆ. ಲುಕ್ ಕೂಡ ಹೊಸದಾಗಿದೆ.

ಭಾರತದಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಪ್ರತಿ ಭಾಷೆಗೂ ಬೇರೆ ಬೇರೆ ಮನೆ ಇದೆ. ವಿಶೇಷ ಎಂದರೆ, ಈಗ ಕನ್ನಡದಲ್ಲಿ ನಿರ್ಮಾಣ ಆಗಿರೋದು ಭಾರತದಲ್ಲಿ ಇರುವ ಅತಿದೊಡ್ಡ ‘ಬಿಗ್ ಬಾಸ್’ ಮನೆ ಎನ್ನುವ ಖ್ಯಾತಿ ಇದಕ್ಕೆ ಸಿಕ್ಕಿದೆ. ಈ ಕುರಿತು ಪ್ರಶಾಂತ್ ನಾಯಕ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ಗೆ ಕಾಲಿಡೋ ಸ್ಪರ್ಧಿಗಳ ಸಂಭಾವ್ಯ ಪಟ್ಟಿ ಬಗ್ಗೆ ಇಲ್ಲಿದೆ ಮಾಹಿತಿ..

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ 10ನೇ ಸೀಸನ್’ ನಡೆಸಿಕೊಡೋಕೆ ಎಗ್ಸೈಟ್ ಆಗಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ನಿರೂಪಣೆಗೂ ಅವರು ಆದ್ಯತೆ ನೀಡುತ್ತಾರೆ. ದೊಡ್ಮನೆಯ ಲೇಔಟ್ ಯಾವ ರೀತಿಯಲ್ಲಿ ಇರಲಿದೆ ಎಂಬುದನ್ನು ಮೊದಲ ದಿನ ಸುದೀಪ್ ವಿವರಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ