AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಬಿಗ್ ಬಾಸ್​ಗೆ ಹೊಸ ಮನೆ; ಹೊಸ ಲೇಔಟ್, ಹೊಸ ಲುಕ್

‘ಬಿಗ್ ಬಾಸ್’ ಮನೆ ಇಷ್ಟು ದಿನ ಇನೋವೇಟಿವ್ ಫಿಲ್ಮ್​ ಸಿಟಿಯಲ್ಲಿ ಇತ್ತು. ಆದರೆ, ಈಗ ಇದನ್ನು ಸ್ಥಳಾಂತರಿಸಲಾಗಿದೆ. ಇದರ ಕೆಲಸಗಳು ಹೇಗೆ ನಡೆದವು ಎಂಬ ಬಗ್ಗೆ ಮೇಕಿಂಗ್ ವಿಡಿಯೋದಲ್ಲಿ ತೋರಿಸಲಾಗಿದೆ. ನಾಲ್ಕು ತಿಂಗಳ ಕಾಲ ಹಗಲು-ರಾತ್ರಿ ಶ್ರಮ ಹಾಕಿ ಈ ಮನೆ ನಿರ್ಮಾಣ ಮಾಡಲಾಗಿದೆ.

ಈ ಬಾರಿಯ ಬಿಗ್ ಬಾಸ್​ಗೆ ಹೊಸ ಮನೆ; ಹೊಸ ಲೇಔಟ್, ಹೊಸ ಲುಕ್
ಬಿಗ್ ಬಾಸ್ ಮನೆ
ರಾಜೇಶ್ ದುಗ್ಗುಮನೆ
|

Updated on: Oct 03, 2023 | 1:09 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (Bigg Boss Kannada Season 10) ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಸುದೀಪ್ ನೇತೃತ್ವದಲ್ಲಿ 10ನೇ ಸೀಸನ್ ನಡೆಯಲಿದೆ. ಈ ಸೀಸನ್ ಹಲವು ಹೊಸತನಕ್ಕೆ ಸಾಕ್ಷಿ ಆಗಲಿದೆ. ಇಂದು (ಅಕ್ಟೋಬರ್ 03) ಬಿಗ್ ಬಾಸ್​ಗೆ ಸಂಬಂಧಿಸಿ ಸುದ್ದಿಗೋಷ್ಠಿ ಆಯೋಜನೆ ಮಾಡಲಾಯಿತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪ್ರಶಾಂತ್ ನಾಯಕ್ ಮಾತನಾಡಿದರು. ಹೊಸ ಮನೆಯ ನಿರ್ಮಾಣದ ವಿಚಾರವನ್ನೂ ತಿಳಿಸಲಾಗಿದೆ.

‘ಬಿಗ್ ಬಾಸ್’ ಮನೆ ಇಷ್ಟು ದಿನ ಇನೋವೇಟಿವ್ ಫಿಲ್ಮ್​ ಸಿಟಿಯಲ್ಲಿ ಇತ್ತು. ಆದರೆ, ಈಗ ಇದನ್ನು ಸ್ಥಳಾಂತರಿಸಲಾಗಿದೆ. ಇದರ ಕೆಲಸಗಳು ಹೇಗೆ ನಡೆದವು ಎಂಬ ಬಗ್ಗೆ ಮೇಕಿಂಗ್ ವಿಡಿಯೋದಲ್ಲಿ ತೋರಿಸಲಾಗಿದೆ. ನಾಲ್ಕು ತಿಂಗಳ ಕಾಲ ಹಗಲು-ರಾತ್ರಿ ಶ್ರಮ ಹಾಕಿ ಈ ಮನೆ ನಿರ್ಮಾಣ ಮಾಡಲಾಗಿದೆ. ಈ ಬಾರಿಯ ಬಿಗ್ ಬಾಸ್​ ಮನೆಗೆ ಹೊಸ ರೀತಿಯ ಲೇಔಟ್ ನೀಡಲಾಗಿದೆ. ಲುಕ್ ಕೂಡ ಹೊಸದಾಗಿದೆ.

ಭಾರತದಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಪ್ರತಿ ಭಾಷೆಗೂ ಬೇರೆ ಬೇರೆ ಮನೆ ಇದೆ. ವಿಶೇಷ ಎಂದರೆ, ಈಗ ಕನ್ನಡದಲ್ಲಿ ನಿರ್ಮಾಣ ಆಗಿರೋದು ಭಾರತದಲ್ಲಿ ಇರುವ ಅತಿದೊಡ್ಡ ‘ಬಿಗ್ ಬಾಸ್’ ಮನೆ ಎನ್ನುವ ಖ್ಯಾತಿ ಇದಕ್ಕೆ ಸಿಕ್ಕಿದೆ. ಈ ಕುರಿತು ಪ್ರಶಾಂತ್ ನಾಯಕ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ಗೆ ಕಾಲಿಡೋ ಸ್ಪರ್ಧಿಗಳ ಸಂಭಾವ್ಯ ಪಟ್ಟಿ ಬಗ್ಗೆ ಇಲ್ಲಿದೆ ಮಾಹಿತಿ..

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ 10ನೇ ಸೀಸನ್’ ನಡೆಸಿಕೊಡೋಕೆ ಎಗ್ಸೈಟ್ ಆಗಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ನಿರೂಪಣೆಗೂ ಅವರು ಆದ್ಯತೆ ನೀಡುತ್ತಾರೆ. ದೊಡ್ಮನೆಯ ಲೇಔಟ್ ಯಾವ ರೀತಿಯಲ್ಲಿ ಇರಲಿದೆ ಎಂಬುದನ್ನು ಮೊದಲ ದಿನ ಸುದೀಪ್ ವಿವರಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!