AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿಯ ಬಿಗ್ ಬಾಸ್​ಗೆ ಹೊಸ ಮನೆ; ಹೊಸ ಲೇಔಟ್, ಹೊಸ ಲುಕ್

‘ಬಿಗ್ ಬಾಸ್’ ಮನೆ ಇಷ್ಟು ದಿನ ಇನೋವೇಟಿವ್ ಫಿಲ್ಮ್​ ಸಿಟಿಯಲ್ಲಿ ಇತ್ತು. ಆದರೆ, ಈಗ ಇದನ್ನು ಸ್ಥಳಾಂತರಿಸಲಾಗಿದೆ. ಇದರ ಕೆಲಸಗಳು ಹೇಗೆ ನಡೆದವು ಎಂಬ ಬಗ್ಗೆ ಮೇಕಿಂಗ್ ವಿಡಿಯೋದಲ್ಲಿ ತೋರಿಸಲಾಗಿದೆ. ನಾಲ್ಕು ತಿಂಗಳ ಕಾಲ ಹಗಲು-ರಾತ್ರಿ ಶ್ರಮ ಹಾಕಿ ಈ ಮನೆ ನಿರ್ಮಾಣ ಮಾಡಲಾಗಿದೆ.

ಈ ಬಾರಿಯ ಬಿಗ್ ಬಾಸ್​ಗೆ ಹೊಸ ಮನೆ; ಹೊಸ ಲೇಔಟ್, ಹೊಸ ಲುಕ್
ಬಿಗ್ ಬಾಸ್ ಮನೆ
ರಾಜೇಶ್ ದುಗ್ಗುಮನೆ
|

Updated on: Oct 03, 2023 | 1:09 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (Bigg Boss Kannada Season 10) ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಸುದೀಪ್ ನೇತೃತ್ವದಲ್ಲಿ 10ನೇ ಸೀಸನ್ ನಡೆಯಲಿದೆ. ಈ ಸೀಸನ್ ಹಲವು ಹೊಸತನಕ್ಕೆ ಸಾಕ್ಷಿ ಆಗಲಿದೆ. ಇಂದು (ಅಕ್ಟೋಬರ್ 03) ಬಿಗ್ ಬಾಸ್​ಗೆ ಸಂಬಂಧಿಸಿ ಸುದ್ದಿಗೋಷ್ಠಿ ಆಯೋಜನೆ ಮಾಡಲಾಯಿತು. ಈ ವೇಳೆ ಹಲವು ವಿಚಾರಗಳ ಬಗ್ಗೆ ಕಲರ್ಸ್ ಕನ್ನಡ ವಾಹಿನಿಯ ಬಿಸ್ನೆಸ್ ಹೆಡ್ ಪ್ರಶಾಂತ್ ನಾಯಕ್ ಮಾತನಾಡಿದರು. ಹೊಸ ಮನೆಯ ನಿರ್ಮಾಣದ ವಿಚಾರವನ್ನೂ ತಿಳಿಸಲಾಗಿದೆ.

‘ಬಿಗ್ ಬಾಸ್’ ಮನೆ ಇಷ್ಟು ದಿನ ಇನೋವೇಟಿವ್ ಫಿಲ್ಮ್​ ಸಿಟಿಯಲ್ಲಿ ಇತ್ತು. ಆದರೆ, ಈಗ ಇದನ್ನು ಸ್ಥಳಾಂತರಿಸಲಾಗಿದೆ. ಇದರ ಕೆಲಸಗಳು ಹೇಗೆ ನಡೆದವು ಎಂಬ ಬಗ್ಗೆ ಮೇಕಿಂಗ್ ವಿಡಿಯೋದಲ್ಲಿ ತೋರಿಸಲಾಗಿದೆ. ನಾಲ್ಕು ತಿಂಗಳ ಕಾಲ ಹಗಲು-ರಾತ್ರಿ ಶ್ರಮ ಹಾಕಿ ಈ ಮನೆ ನಿರ್ಮಾಣ ಮಾಡಲಾಗಿದೆ. ಈ ಬಾರಿಯ ಬಿಗ್ ಬಾಸ್​ ಮನೆಗೆ ಹೊಸ ರೀತಿಯ ಲೇಔಟ್ ನೀಡಲಾಗಿದೆ. ಲುಕ್ ಕೂಡ ಹೊಸದಾಗಿದೆ.

ಭಾರತದಲ್ಲಿ ಬೇರೆ ಬೇರೆ ಭಾಷೆಗಳಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಪ್ರತಿ ಭಾಷೆಗೂ ಬೇರೆ ಬೇರೆ ಮನೆ ಇದೆ. ವಿಶೇಷ ಎಂದರೆ, ಈಗ ಕನ್ನಡದಲ್ಲಿ ನಿರ್ಮಾಣ ಆಗಿರೋದು ಭಾರತದಲ್ಲಿ ಇರುವ ಅತಿದೊಡ್ಡ ‘ಬಿಗ್ ಬಾಸ್’ ಮನೆ ಎನ್ನುವ ಖ್ಯಾತಿ ಇದಕ್ಕೆ ಸಿಕ್ಕಿದೆ. ಈ ಕುರಿತು ಪ್ರಶಾಂತ್ ನಾಯಕ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್​ಗೆ ಕಾಲಿಡೋ ಸ್ಪರ್ಧಿಗಳ ಸಂಭಾವ್ಯ ಪಟ್ಟಿ ಬಗ್ಗೆ ಇಲ್ಲಿದೆ ಮಾಹಿತಿ..

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ 10ನೇ ಸೀಸನ್’ ನಡೆಸಿಕೊಡೋಕೆ ಎಗ್ಸೈಟ್ ಆಗಿದ್ದಾರೆ. ಸಿನಿಮಾ ಕೆಲಸಗಳ ಮಧ್ಯೆ ನಿರೂಪಣೆಗೂ ಅವರು ಆದ್ಯತೆ ನೀಡುತ್ತಾರೆ. ದೊಡ್ಮನೆಯ ಲೇಔಟ್ ಯಾವ ರೀತಿಯಲ್ಲಿ ಇರಲಿದೆ ಎಂಬುದನ್ನು ಮೊದಲ ದಿನ ಸುದೀಪ್ ವಿವರಿಸಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ