AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಕನ್ನಡ ಸೀಸನ್ 10 ಗೆದ್ದ ಕಾರ್ತಿಕ್ ಮಹೇಶ್, ಡ್ರೋನ್ ಪ್ರತಾಪ್​ ರನ್ನರ್ ಅಪ್

Bigg Boss Finale: ಬಿಗ್​ಬಾಸ್ ಕನ್ನಡ ಸೀಸನ್ 10 ಮುಗಿದಿದ್ದು, ಕಠಿಣ ಸ್ಪರ್ಧೆಯ ನಡುವೆ ಕಾರ್ತಿಕ್ ಮಹೇಶ್ ಗೆಲುವು ಸಾಧಿಸಿದ್ದಾರೆ.

ಬಿಗ್​ಬಾಸ್ ಕನ್ನಡ ಸೀಸನ್ 10 ಗೆದ್ದ ಕಾರ್ತಿಕ್ ಮಹೇಶ್, ಡ್ರೋನ್ ಪ್ರತಾಪ್​ ರನ್ನರ್ ಅಪ್
ಮಂಜುನಾಥ ಸಿ.
|

Updated on: Jan 29, 2024 | 12:09 AM

Share

112 ದಿನಗಳ ಸುದೀರ್ಘ ಪಯಣ ಇಂದು ಅಂತ್ಯವಾಗಿದೆ. ಬಿಗ್​ಬಾಸ್ (BiggBoss) ಗೆಲ್ಲಲು 16 ಮಂದಿಯಿಂದ ಪ್ರಾರಂಭವಾದ ಓಟದಲ್ಲಿ ಕೊನೆಯದಾಗಿ ಗೆಲುವು ಕಂಡಿರುವುದು ಕಾರ್ತಿಕ್ ಮಹೇಶ್. ಕೊನೆಯ ಕ್ಷಣದಲ್ಲಿ ಬಿಗ್​ಬಾಸ್​ ಮನೆಗೆ ಬರಲು ತೆಗೆದುಕೊಂಡ ನಿರ್ಣಯ ಅವರ ಕೈಹಿಡಿದಿದೆ. ಹಲವು ಏಳು-ಬೀಳುಗಳಿದ್ದ ಪಯಣದಲ್ಲಿ ಕಾರ್ತಿಕ್ ಮಹೇಶ್ ಗಮ್ಯ ತಲುಪಿದ್ದಾರೆ. ಅವರಿಗೆ ಬರೋಬ್ಬರಿ 2,97,39,904 ಮತ ಗಳಿಸಿದ್ದಾರೆ. ಹಲವು ಏಳು-ಬೀಳು, ನೋವು, ಬೇಸರ, ಖುಷಿಗಳನ್ನು ಸಹ ಕಂಡಿದ್ದ ಡ್ರೋನ್ ಪ್ರತಾಪ್ ರನ್ನರ್ ಅಪ್ ಆಗಿದ್ದಾರೆ.

ಸ್ವತಃ ಕಾರ್ತಿಕ್ ಮಹೇಶ್ ಹೇಳಿಕೊಂಡಿರುವಂತೆ ಬಿಗ್​ಬಾಸ್​ಗೆ ಬರುವ ನಿರ್ಧಾರವನ್ನು ಒಂದೇ ದಿನದಲ್ಲಿ ತೆಗೆದುಕೊಂಡು ಅವರು ಬಿಗ್​ಬಾಸ್​ಗೆ ಬಂದರಂತೆ. ಆ ಆತುರದ ನಿರ್ಧಾರ ಅವರಿಗೆ ಗೆಲುವು ತಂದುಕೊಟ್ಟಿದೆ. ಆರನೇ ಕಂಟೆಸ್ಟೆಂಟ್ ಆಗಿ ಕಷ್ಟದಲ್ಲೇ ಕಾರ್ತಿಕ್ ಮಹೇಶ್ ಫಿನಾಲೆ ವಾರಕ್ಕೆ ಬಂದಿದ್ದರು. ಫಿನಾಲೆ ವಾರದಲ್ಲಿ ಯಾರು ಮನೆಯಿಂದ ಹೊರಗೆ ಹೋಗುತ್ತಾರೆ ಎಂದಾಗ ಬಹುತೇಕರು ಹೇಳಿದ್ದಿದ್ದು ಕಾರ್ತಿಕ್ ಹೆಸರನ್ನು ಆದರೆ ಅದೆಲ್ಲವೂ ಸುಳ್ಳಾಗಿದೆ.

ಕಾರ್ತಿಕ್​ರ ಬಿಗ್​ಬಾಸ್ ಜರ್ನಿ ಹಲವು ಏರು-ಪೇರುಗಳನ್ನು ಒಳಗೊಂಡಿತ್ತು. ಆರಂಭದಲ್ಲಿ ಅವರು ಅಸಮರ್ಥರಾಗಿ ಮನೆಗೆ ಎಂಟ್ರಿ ಕೊಟ್ಟರು. ಆರಂಭದಲ್ಲಿ ಸಂಗೀತಾ ಜೊತೆ ಗೆಳೆತನ ಮಾಡಿ ಬೆನ್ನೆಲುಬಾಗಿದ್ದರು. ಸಂಗೀತಾ ಹಾಗೂ ಕಾರ್ತಿಕ್ ಒಳ್ಳೆಯ ಬಾಂಧವ್ಯ ಹೊಂದಿದ್ದರು. ಜೊತೆಗೆ ತನಿಷಾ ಸಹ ಕಾರ್ತಿಕ್​ಗೆ ಒಳ್ಳೆಯ ಗೆಳೆಯರಾಗಿದ್ದರು. ಆರಂಭದ ಹಲವು ದಿನ ಮನೆಯ ಗಟ್ಟಿ ಸ್ಪರ್ಧಿಯಾಗಿದ್ದ ವಿನಯ್​ಗೆ ಪ್ರಬಲ ಎದುರಾಳಿಯಾಗಿ ಆಡಿದ್ದರು ಕಾರ್ತಿಕ್. ವಿನಯ್ ‘ಗ್ಯಾಂಗ್’ ಅನ್ನು ಸಂಗೀತಾ ಪ್ರಬಲವಾಗಿ ಎದುರಿಸಲು ಕಾರ್ತಿಕ್ ಸಹ ಕಾರಣವಾಗಿದ್ದರು.

ಇದನ್ನೂ ಓದಿ:ಬಿಗ್​ಬಾಸ್ ಮನೆಯಲ್ಲಿ ರಾಜನಾದ ತುಕಾಲಿ, ಪ್ರತಾಪ್ ಖುಷಿಗೆ ಪಾರವೇ ಇಲ್ಲ

ಆದರೆ ಬರಬರುತ್ತಾ ಸಂಗೀತಾ ಕಾರ್ತಿಕ್​ರಿಂದ ದೂರಾದರು. ಕಾರ್ತಿಕ್ ವಿರುದ್ಧ ನಂಬಿಕೆ ದ್ರೋಹದ ಆರೋಪವೂ ಬಂತು. ಜೊತೆಗಿದ್ದ ತನಿಷಾ ಸಹ ದೂರಾದರು. ನಮ್ರತಾ ಜೊತೆ ಹತ್ತಿರವಾದರಾದರೂ ಅವರ ಸ್ನೇಹ ಸಂಬಂಧವೂ ಮುರಿದುಬಿತ್ತು. ಮನೆಯಲ್ಲಿ ಒಂಟಿಯಾಗಿದ್ದ ಕಾರ್ತಿಕ್ ಕೆಲ ವಾರ ತುಸು ಲೋ ಆಗಿದ್ದರು.

ಸುದೀಪ್ ಅವರು ಸಹ ಕಾರ್ತಿಕ್​ಗೆ ಈ ಬಗ್ಗೆ ಎಚ್ಚರಿಕೆ ನೀಡಿದ್ದರು. ಅದಾದ ಬಳಿಕ ಆಟ ಸುಧಾರಿಸಿಕೊಂಡ ಕಾರ್ತಿಕ್ ಫಿನಾಲೆ ವಾರಕ್ಕೆ ಮುನ್ನ ಮತ್ತೆ ಚಿಗುರಿ ನಿಂತು ವಿನ್ನರ್ ಎನಿಸಿಕೊಂಡಿದ್ದಾರೆ. ತನ್ನ ತಾಯಿಗಾಗಿ ಒಂದು ಮನೆ ಕಟ್ಟಿಕೊಡಬೇಕು ಎಂಬ ಆಸೆಯನ್ನು ಕಾರ್ತಿಕ್ ಹೇಳಿಕೊಂಡಿದ್ದರು. ಅಂತೆಯೇ ಈಗ 50 ಲಕ್ಷ ಗೆದ್ದಿದ್ದಾರೆ. ಜೊತೆಗೆ ಒಂದು ಬ್ರಿಜಾ ಕಾರು ಸಹ ಗೆದ್ದಿದ್ದಾರೆ. ಆರಂಭದಿಂದಲೂ ಚೆನ್ನಾಗಿಯೇ ಆಡಿಕೊಂಡು ಬಂದಿದ್ದ ಡ್ರೋನ್ ಪ್ರತಾಪ್ ಎರಡನೇ ಸ್ಥಾನ ಪಡೆದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ