AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆಯ ಹೆಸರು ದುರುಪಯೋಗ ಮಾಡಿಕೊಳ್ಳಬೇಡಿ’: ಬುಲೆಟ್​ ಪ್ರಕಾಶ್​ ಮಗ ರಕ್ಷಕ್​ಗೆ ಸುದೀಪ್​ ಎಚ್ಚರಿಕೆ

ಕಿಚ್ಚ ಸುದೀಪ್ ಅವರು ರಕ್ಷಕ್​ಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಯಾಗಿದ್ದು, ನಂತರ ಎಲಿಮಿನೇಟ್​ ಆದ ರಕ್ಷಕ್​ ಅವರು ಆಡಿದ ಕೆಲವು ಮಾತುಗಳನ್ನು ಸುದೀಪ್​ ಅವರು ತೀವ್ರವಾಗಿ ಖಂಡಿಸಿದ್ದಾರೆ. ಜನವರಿ 20ರ ಸಂಚಿಕೆಯಲ್ಲಿ ಅವರು ಒಂದು ಎಚ್ಚರಿಕೆ ನೀಡಿದ್ದಾರೆ.

‘ತಂದೆಯ ಹೆಸರು ದುರುಪಯೋಗ ಮಾಡಿಕೊಳ್ಳಬೇಡಿ’: ಬುಲೆಟ್​ ಪ್ರಕಾಶ್​ ಮಗ ರಕ್ಷಕ್​ಗೆ ಸುದೀಪ್​ ಎಚ್ಚರಿಕೆ
ಬುಲೆಟ್​ ಪ್ರಕಾಶ್​, ರಕ್ಷಕ್​, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jan 20, 2024 | 10:43 PM

Share

ಕಿಚ್ಚ ಸುದೀಪ್​ ಅವರು ಮೊದಲ ಸೀಸನ್​ನಿಂದ 10ನೇ ಸೀಸನ್​ನ ತನಕ ಬಿಗ್​ ಬಾಸ್​ (Bigg Boss Kannada) ಶೋ ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಅನೇಕ ಬಗೆಯ ಸ್ಪರ್ಧಿಗಳನ್ನು ಅವರು ನೋಡಿದ್ದಾರೆ. ಕೆಲವರು ಬಿಗ್​ ಬಾಸ್​ ಮನೆ ಒಳಗೆ ಇದ್ದಾಗ ಬಹಳ ವಿನಮ್ರವಾಗಿ ನಡೆದುಕೊಳ್ಳುತ್ತಾರೆ. ದೊಡ್ಮನೆಯಿಂದ ಹೊರಗೆ ಹೋದ ಬಳಿಕ ಬಿಗ್​ ಬಾಸ್​ ಶೋ ವಿರುದ್ಧವೇ ಮಾತನಾಡುತ್ತಾರೆ. ಅಂಥ ವರ್ತನೆಯನ್ನು ಸುದೀಪ್​ ಅವರು ಎಂದಿಗೂ ಸಹಿಸುವುದಿಲ್ಲ. ಈಗ ಅವರು ರಕ್ಷಕ್​ಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಯಾಗಿದ್ದು, ನಂತರ ಎಲಿಮಿನೇಟ್​ ಆದ ರಕ್ಷಕ್​ (Rakshak Bullet) ಅವರು ಆಡಿದ ಕೆಲವು ಮಾತುಗಳನ್ನು ಸುದೀಪ್​ (Kichcha Sudeep) ಅವರು ತೀವ್ರವಾಗಿ ಖಂಡಿಸಿದ್ದಾರೆ. ಜನವರಿ 20ರ ಸಂಚಿಕೆಯಲ್ಲಿ ಅವರು ಒಂದು ಎಚ್ಚರಿಕೆ ನೀಡಿದ್ದಾರೆ.

‘ರಕ್ಷಕ್​ ಅವರು ಬುಲೆಟ್​ ಪ್ರಕಾಶ್​ ಮಗ ತಾನೇ? ಅವರಿಗೆ ವಯಸ್ಸು ಎಷ್ಟಿರಬಹುದು? 11 ಅಥವಾ 12? ಇಪ್ಪತ್ತೆರಡಾ? ನಿಮ್ಮ ತಂದೆ ಬಹಳ ಹೆಸರು ಮಾಡಿದ್ದ ಕಲಾವಿದ. ಅವರ ಮಗನಾಗಿದ್ದಕ್ಕೆ ಸಮಾಜ ನಿಮಗೆ ಕೊಡುವ ಗೌರವವನ್ನು ದುರುಪಯೋಗ ಮಾಡಿಕೊಳ್ಳಬೇಡಿ. ಬಿಗ್​ ಬಾಸ್ ಮನೆಯಿಂದ ಹೊರಗೆ ಹೋದ ಬಳಿಕ ನಿಮ್ಮ ಸಂದರ್ಶನ, ಬಿಗ್​ ಬಾಸ್​ ಬಗ್ಗೆ ನೀವು ಕೊಟ್ಟ ಹೇಳಿಕೆ.. ಎಲ್ಲವೂ ತಿಳಿದಿದೆ. ದೇವರು ನಿಮ್ಮನ್ನು ಚೆನ್ನಾಗಿ ಇಟ್ಟಿರಲಿ’ ಎಂದು ಕಿಚ್ಚ ಸುದೀಪ್​ ಅವರು ಹೇಳಿದ್ದಾರೆ.

ರಕ್ಷಕ್​ ಬುಲೆಟ್​ ಮಾಡಿದ ತಪ್ಪೇನು?

ಬಿಗ್​ ಬಾಸ್​ ಮನೆಯಿಂದ ರಕ್ಷಕ್​ ಬುಲೆಟ್​ ಅವರು ಹೊರಬಂದ ಬಳಿಕ ಅನೇಕ ಮಾಧ್ಯಮಗಳಿಗೆ ಸಂದರ್ಶನ ನೀಡಿದರು. ಆಗ ಅವರು ಸುದೀಪ್​ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆಗಳನ್ನು ನೀಡಿದ್ದರು. ಅದಕ್ಕೆ ಸುದೀಪ್​ ಅಭಿಮಾನಿಗಳಿಂದ ವಿರೋಧ ವ್ಯಕ್ತವಾಯ್ತು. ಬಳಿಕ ರಕ್ಷಕ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಕ್ಷಮೆಯನ್ನೂ ಕೇಳಿದರು. ಅಷ್ಟಕ್ಕೇ ರಕ್ಷಕ್​ ಸುಮ್ಮನಾಗಲಿಲ್ಲ. ಅತಿಥಿಯಾಗಿ ಬಿಗ್​ ಬಾಸ್​ ಮನೆಯೊಳಗೆ ಬಂದಾಗ ಡ್ರೋನ್​ ಪ್ರತಾಪ್​ರನ್ನು ಟಾರ್ಗೆಟ್​ ಮಾಡಿ ಇಲ್ಲಸಲ್ಲದ ಮಾತನಾಡಿದರು. ಅದು ಸುದೀಪ್​ ಅವರಿಗೆ ಸರಿ ಎನಿಸಿಲ್ಲ. ಹಾಗಾಗಿ ಸುದೀಪ್​ ಅವರು ಖಡಕ್​ ಮಾತುಗಳಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುದೀಪ್​ ನಟನೆಯ ‘ಮ್ಯಾಕ್ಸ್​’ ಸಿನಿಮಾ ಹೆಸರಿನಲ್ಲಿ ಅಭಿಮಾನಿಗಳಿಂದ ಆಂಬ್ಯುಲೆನ್ಸ್ ಸೇವೆ ಆರಂಭ

ಸೋಶಿಯಲ್​ ಮೀಡಿಯಾದಲ್ಲಿ ರಕ್ಷಕ್​ ಅವರಿಗೆ ಟ್ರೋಲ್​ ಹೊಸದೇನಲ್ಲ. ಹಲವು ಕಾರಣಗಳಿಗಾಗಿ ಅವರು ಈಗಾಗಲೇ ಟ್ರೋಲ್​ ಆಗಿದ್ದಾರೆ. ಈಗ ಸುದೀಪ್​ ಮತ್ತು ಬಿಗ್​ ಬಾಸ್​ ಬಗ್ಗೆ ಅವರು ಆಡಿದ ಮಾತುಗಳು ಟೀಕೆಗೆ ಗುರಿಯಾಗಿವೆ. ಕಿಚ್ಚ ಸುದೀಪ್​ ಅವರು ಎಚ್ಚರಿಕೆ ನೀಡಿದ್ದಕ್ಕೆ ರಕ್ಷಕ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು. ಅತಿಥಿಯಾಗಿ ಬಂದ ಸ್ನೇಹಿತ್​ ಗೌಡ ಮತ್ತು ಈಶಾನಿ ಅವರು ಆಡಿದ ಮಾತುಗಳ ಬಗ್ಗೆಯೂ ಸುದೀಪ್​ ಅವರು ಆಕ್ಷೇಪ ಎತ್ತಿದ್ದಾರೆ. ಆ ಮೂಲಕ ಬಿಗ್​ ಬಾಸ್​ ಮನೆಯೊಳಗೆ ಇರುವ ಸ್ಪರ್ಧಿಗಳಿಗೆ ಅವರು ಧೈರ್ಯ ತುಂಬಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ