AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಂದೆಯ ಹೆಸರು ದುರುಪಯೋಗ ಮಾಡಿಕೊಳ್ಳಬೇಡಿ’: ಬುಲೆಟ್​ ಪ್ರಕಾಶ್​ ಮಗ ರಕ್ಷಕ್​ಗೆ ಸುದೀಪ್​ ಎಚ್ಚರಿಕೆ

ಕಿಚ್ಚ ಸುದೀಪ್ ಅವರು ರಕ್ಷಕ್​ಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಯಾಗಿದ್ದು, ನಂತರ ಎಲಿಮಿನೇಟ್​ ಆದ ರಕ್ಷಕ್​ ಅವರು ಆಡಿದ ಕೆಲವು ಮಾತುಗಳನ್ನು ಸುದೀಪ್​ ಅವರು ತೀವ್ರವಾಗಿ ಖಂಡಿಸಿದ್ದಾರೆ. ಜನವರಿ 20ರ ಸಂಚಿಕೆಯಲ್ಲಿ ಅವರು ಒಂದು ಎಚ್ಚರಿಕೆ ನೀಡಿದ್ದಾರೆ.

‘ತಂದೆಯ ಹೆಸರು ದುರುಪಯೋಗ ಮಾಡಿಕೊಳ್ಳಬೇಡಿ’: ಬುಲೆಟ್​ ಪ್ರಕಾಶ್​ ಮಗ ರಕ್ಷಕ್​ಗೆ ಸುದೀಪ್​ ಎಚ್ಚರಿಕೆ
ಬುಲೆಟ್​ ಪ್ರಕಾಶ್​, ರಕ್ಷಕ್​, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jan 20, 2024 | 10:43 PM

Share

ಕಿಚ್ಚ ಸುದೀಪ್​ ಅವರು ಮೊದಲ ಸೀಸನ್​ನಿಂದ 10ನೇ ಸೀಸನ್​ನ ತನಕ ಬಿಗ್​ ಬಾಸ್​ (Bigg Boss Kannada) ಶೋ ನಿರೂಪಣೆ ಮಾಡುತ್ತಾ ಬಂದಿದ್ದಾರೆ. ಅನೇಕ ಬಗೆಯ ಸ್ಪರ್ಧಿಗಳನ್ನು ಅವರು ನೋಡಿದ್ದಾರೆ. ಕೆಲವರು ಬಿಗ್​ ಬಾಸ್​ ಮನೆ ಒಳಗೆ ಇದ್ದಾಗ ಬಹಳ ವಿನಮ್ರವಾಗಿ ನಡೆದುಕೊಳ್ಳುತ್ತಾರೆ. ದೊಡ್ಮನೆಯಿಂದ ಹೊರಗೆ ಹೋದ ಬಳಿಕ ಬಿಗ್​ ಬಾಸ್​ ಶೋ ವಿರುದ್ಧವೇ ಮಾತನಾಡುತ್ತಾರೆ. ಅಂಥ ವರ್ತನೆಯನ್ನು ಸುದೀಪ್​ ಅವರು ಎಂದಿಗೂ ಸಹಿಸುವುದಿಲ್ಲ. ಈಗ ಅವರು ರಕ್ಷಕ್​ಗೆ ಕ್ಲಾಸ್​ ತೆಗೆದುಕೊಂಡಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್ 10’ ಶೋನಲ್ಲಿ ಸ್ಪರ್ಧಿಯಾಗಿದ್ದು, ನಂತರ ಎಲಿಮಿನೇಟ್​ ಆದ ರಕ್ಷಕ್​ (Rakshak Bullet) ಅವರು ಆಡಿದ ಕೆಲವು ಮಾತುಗಳನ್ನು ಸುದೀಪ್​ (Kichcha Sudeep) ಅವರು ತೀವ್ರವಾಗಿ ಖಂಡಿಸಿದ್ದಾರೆ. ಜನವರಿ 20ರ ಸಂಚಿಕೆಯಲ್ಲಿ ಅವರು ಒಂದು ಎಚ್ಚರಿಕೆ ನೀಡಿದ್ದಾರೆ.

‘ರಕ್ಷಕ್​ ಅವರು ಬುಲೆಟ್​ ಪ್ರಕಾಶ್​ ಮಗ ತಾನೇ? ಅವರಿಗೆ ವಯಸ್ಸು ಎಷ್ಟಿರಬಹುದು? 11 ಅಥವಾ 12? ಇಪ್ಪತ್ತೆರಡಾ? ನಿಮ್ಮ ತಂದೆ ಬಹಳ ಹೆಸರು ಮಾಡಿದ್ದ ಕಲಾವಿದ. ಅವರ ಮಗನಾಗಿದ್ದಕ್ಕೆ ಸಮಾಜ ನಿಮಗೆ ಕೊಡುವ ಗೌರವವನ್ನು ದುರುಪಯೋಗ ಮಾಡಿಕೊಳ್ಳಬೇಡಿ. ಬಿಗ್​ ಬಾಸ್ ಮನೆಯಿಂದ ಹೊರಗೆ ಹೋದ ಬಳಿಕ ನಿಮ್ಮ ಸಂದರ್ಶನ, ಬಿಗ್​ ಬಾಸ್​ ಬಗ್ಗೆ ನೀವು ಕೊಟ್ಟ ಹೇಳಿಕೆ.. ಎಲ್ಲವೂ ತಿಳಿದಿದೆ. ದೇವರು ನಿಮ್ಮನ್ನು ಚೆನ್ನಾಗಿ ಇಟ್ಟಿರಲಿ’ ಎಂದು ಕಿಚ್ಚ ಸುದೀಪ್​ ಅವರು ಹೇಳಿದ್ದಾರೆ.

ರಕ್ಷಕ್​ ಬುಲೆಟ್​ ಮಾಡಿದ ತಪ್ಪೇನು?

ಬಿಗ್​ ಬಾಸ್​ ಮನೆಯಿಂದ ರಕ್ಷಕ್​ ಬುಲೆಟ್​ ಅವರು ಹೊರಬಂದ ಬಳಿಕ ಅನೇಕ ಮಾಧ್ಯಮಗಳಿಗೆ ಸಂದರ್ಶನ ನೀಡಿದರು. ಆಗ ಅವರು ಸುದೀಪ್​ ಬಗ್ಗೆ ಆಕ್ಷೇಪಾರ್ಹವಾಗಿ ಹೇಳಿಕೆಗಳನ್ನು ನೀಡಿದ್ದರು. ಅದಕ್ಕೆ ಸುದೀಪ್​ ಅಭಿಮಾನಿಗಳಿಂದ ವಿರೋಧ ವ್ಯಕ್ತವಾಯ್ತು. ಬಳಿಕ ರಕ್ಷಕ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಕ್ಷಮೆಯನ್ನೂ ಕೇಳಿದರು. ಅಷ್ಟಕ್ಕೇ ರಕ್ಷಕ್​ ಸುಮ್ಮನಾಗಲಿಲ್ಲ. ಅತಿಥಿಯಾಗಿ ಬಿಗ್​ ಬಾಸ್​ ಮನೆಯೊಳಗೆ ಬಂದಾಗ ಡ್ರೋನ್​ ಪ್ರತಾಪ್​ರನ್ನು ಟಾರ್ಗೆಟ್​ ಮಾಡಿ ಇಲ್ಲಸಲ್ಲದ ಮಾತನಾಡಿದರು. ಅದು ಸುದೀಪ್​ ಅವರಿಗೆ ಸರಿ ಎನಿಸಿಲ್ಲ. ಹಾಗಾಗಿ ಸುದೀಪ್​ ಅವರು ಖಡಕ್​ ಮಾತುಗಳಲ್ಲಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುದೀಪ್​ ನಟನೆಯ ‘ಮ್ಯಾಕ್ಸ್​’ ಸಿನಿಮಾ ಹೆಸರಿನಲ್ಲಿ ಅಭಿಮಾನಿಗಳಿಂದ ಆಂಬ್ಯುಲೆನ್ಸ್ ಸೇವೆ ಆರಂಭ

ಸೋಶಿಯಲ್​ ಮೀಡಿಯಾದಲ್ಲಿ ರಕ್ಷಕ್​ ಅವರಿಗೆ ಟ್ರೋಲ್​ ಹೊಸದೇನಲ್ಲ. ಹಲವು ಕಾರಣಗಳಿಗಾಗಿ ಅವರು ಈಗಾಗಲೇ ಟ್ರೋಲ್​ ಆಗಿದ್ದಾರೆ. ಈಗ ಸುದೀಪ್​ ಮತ್ತು ಬಿಗ್​ ಬಾಸ್​ ಬಗ್ಗೆ ಅವರು ಆಡಿದ ಮಾತುಗಳು ಟೀಕೆಗೆ ಗುರಿಯಾಗಿವೆ. ಕಿಚ್ಚ ಸುದೀಪ್​ ಅವರು ಎಚ್ಚರಿಕೆ ನೀಡಿದ್ದಕ್ಕೆ ರಕ್ಷಕ್​ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು. ಅತಿಥಿಯಾಗಿ ಬಂದ ಸ್ನೇಹಿತ್​ ಗೌಡ ಮತ್ತು ಈಶಾನಿ ಅವರು ಆಡಿದ ಮಾತುಗಳ ಬಗ್ಗೆಯೂ ಸುದೀಪ್​ ಅವರು ಆಕ್ಷೇಪ ಎತ್ತಿದ್ದಾರೆ. ಆ ಮೂಲಕ ಬಿಗ್​ ಬಾಸ್​ ಮನೆಯೊಳಗೆ ಇರುವ ಸ್ಪರ್ಧಿಗಳಿಗೆ ಅವರು ಧೈರ್ಯ ತುಂಬಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್