AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್: ಸ್ಪರ್ಧಿಗಳ ವಿಚಾರಣೆ ಶುರುವಿಟ್ಟುಕೊಂಡ ಕಿಚ್ಚ ಸುದೀಪ್

Bigg Boss: ಈ ವಾರ ಮನೆಯ ಹಲವು ಸ್ಪರ್ಧಿಗಳು ಮಾನವೀಯತೆ ಮೀರಿ ವರ್ತಿಸಿದ್ದಾರೆ, ಅವರ ವರ್ತನೆಯನ್ನು ಸುದೀಪ್ ಹೇಗೆ ವಿಮರ್ಶಿಸುತ್ತಾರೆ, ಯಾರನ್ನು ಟೀಕಿಸುತ್ತಾರೆ, ಯಾರಿಗೆ ಭೇಷ್ ಎನ್ನುತ್ತಾರೆ. ನ್ಯಾಯ ವಿತರಣೆ ಹೇಗೆ ಮಾಡುತ್ತಾರೆ ಎಂದು ನೋಡಲು ಕಾದಿದ್ದರು. ಅಂತೆಯೇ ವಾರಾಂತ್ಯದ ಪಂಚಾಯ್ತಿಗೆ ಬಂದ ಸುದೀಪ್ ತುಸುವೂ ತಡ ಮಾಡದೆ ಸ್ಪರ್ಧಿಗಳ ವಿಚಾರಣೆ ಆರಂಭಿಸಿದ್ದಾರೆ.

ಬಿಗ್​ಬಾಸ್: ಸ್ಪರ್ಧಿಗಳ ವಿಚಾರಣೆ ಶುರುವಿಟ್ಟುಕೊಂಡ ಕಿಚ್ಚ ಸುದೀಪ್
ಮಂಜುನಾಥ ಸಿ.
|

Updated on: Dec 09, 2023 | 9:44 PM

Share

ಈ ವಾರಾಂತ್ಯದ ಕಿಚ್ಚನ ಪಂಚಾಯ್ತಿಗಾಗಿ ಎಲ್ಲ ಬಿಗ್​ಬಾಸ್ (Bigg Boss) ವೀಕ್ಷಕರು ಎದುರು ನೋಡುತ್ತಿದ್ದರು. ಈ ವಾರ ಮನೆಯ ಹಲವು ಸ್ಪರ್ಧಿಗಳು ಮಾನವೀಯತೆ ಮೀರಿ ವರ್ತಿಸಿದ್ದಾರೆ, ಅವರ ವರ್ತನೆಯನ್ನು ಸುದೀಪ್ ಹೇಗೆ ವಿಮರ್ಶಿಸುತ್ತಾರೆ, ಯಾರನ್ನು ಟೀಕಿಸುತ್ತಾರೆ, ಯಾರಿಗೆ ಭೇಷ್ ಎನ್ನುತ್ತಾರೆ. ನ್ಯಾಯ ವಿತರಣೆ ಹೇಗೆ ಮಾಡುತ್ತಾರೆ ಎಂದು ನೋಡಲು ಕಾದಿದ್ದರು. ಅಂತೆಯೇ ವಾರಾಂತ್ಯದ ಪಂಚಾಯ್ತಿಗೆ ಬಂದ ಸುದೀಪ್ ತುಸುವೂ ತಡ ಮಾಡದೆ ಸ್ಪರ್ಧಿಗಳ ವಿಚಾರಣೆ ಆರಂಭಿಸಿದ್ದಾರೆ.

ಹಾಲ್​ನ ಮಧ್ಯೆ ಪ್ರತ್ಯೇಕವಾಗಿ ಕುರ್ಚಿಯೊಂದನ್ನು ಹಾಕಿಸಿ, ಪ್ರತಿಯೊಬ್ಬ ಸ್ಪರ್ಧಿಯನ್ನೂ ಕುರ್ಚಿಗೆ ಕರೆದು ಈ ವಾರ ಮನೆಯಲ್ಲಿ ನಡೆದ ಘಟನೆಗಳ ಬಗ್ಗೆ ಅವರವರ ಅಭಿಪ್ರಾಯ ಕೇಳಿದ್ದಾರೆ. ‘ಈ ದಿನ ಮೊದಲಿಗೆ ನಾನು ಮಾತನಾಡುವುದಿಲ್ಲ, ನಿಮ್ಮ ಮಾತುಗಳನ್ನು ಕೇಳುತ್ತೇನೆ’ ಎಂದು, ಸಾಲಾಗಿ ಎಲ್ಲ ಸ್ಪರ್ಧಿಗಳನ್ನೂ ಕರೆದು ಅವರವರ ದೃಷ್ಟಿಕೋನದಲ್ಲಿ ವಾರದ ಕತೆಯನ್ನು ಕೇಳಿದ್ದಾರೆ.

ಮೊದಲಿಗೆ ಕಾರ್ತಿಕ್ ಅನ್ನು ಕರೆದರು ಸುದೀಪ್, ಕುರ್ಚಿಯಲ್ಲಿ ಕುಳಿತ ಕಾರ್ತಿಕ್, ತಮ್ಮ ಪ್ರಕಾರ ನಡೆದ ಘಟನೆಗಳನ್ನು ವಿವರಿಸಿದರು. ತಾನು ವಿನಯ್​ಗೆ ಸಿಕ್ಕಿದ್ದ ಆನೆಯನ್ನು ಡಸ್ಟ್​ಬೀನ್​ಗೆ ಹಾಕಿದ್ದೆ ಅದು ಟಾಸ್ಕ್​ನ ಭಾಗವಾಗಿತ್ತು, ಆದರೆ ಟಾಸ್ಕ್ ಮುಗಿದ ಕೂಡಲೇ ನಾನೇ ಅದನ್ನು ತೊಳೆದು ಟೇಬಲ್​ ಮೇಲಿಟ್ಟೆ ಎಂದರು. ಬಳಿಕ ತಮಗೂ ವಿನಯ್​ಗೂ ಆದ ಜಗಳ ಹಾಗೂ ತನ್ನ ತಪ್ಪಿಲ್ಲದಿದ್ದರೂ ವಿನಯ್ ಉದ್ದೇಶಪೂರ್ವಕವಾಗಿ ಜಗಳ ಮಾಡಿದರು. ನಾನು ಆಡದ ಮಾತನ್ನು ಆಡಿದ್ದೀಯ ಎಂದು ನನ್ನ ಕುಟುಂಬ ಸದಸ್ಯರನ್ನು ಎಳೆದು ತಂದರು ಎಂದರು.

ಇದನ್ನೂ ಓದಿ:ಈ ವಾರ ಬಿಗ್​ಬಾಸ್ ಮನೆಯಲ್ಲಿ ಅತಿ ಹೆಚ್ಚು ಮತ ಗಳಿಸಿರುವುದು ಯಾರು? ಡ್ರೋನ್ ಪ್ರತಾಪ್​ಗೆ ಎಷ್ಟನೆ ಸ್ಥಾನ?

ಬಳಿಕ ಬಂದ ವಿನಯ್, ಕಾರ್ತಿಕ್ ಹೇಳಿದ ಮಾತುಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ತಿಕ್ ಮಾಡಿದ ಆರೋಪಗಳಿಗೆ ಸ್ಪಷ್ಟನೆ ಕೊಟ್ಟರು. ತನ್ನದು ತಪ್ಪಿಲ್ಲವೆಂದು, ಕಾರ್ತಿಕ್ ಬೇಕೆಂದೇ ನನ್ನನ್ನು ಪ್ರವೋಕ್ ಮಾಡಿ, ನನ್ನಿಂದ ಮಾಡಿಸಿದರು. ನನ್ನ ಆನೆಯನ್ನು ಹಾಳು ಮಾಡಿದರು ಎಂದು ಆರೋಪ ಮಾಡಿದರು.

ಬಳಿಕ ಬಂದ ತುಕಾಲಿ ಸಂತೋಷ್, ಬಹುತೇಕ ತಮ್ಮ ತಂಡದ ಪರವಾಗಿಯೇ ಮಾತನಾಡಿದರು. ಕಾರ್ತಿಕ್ ಹಾಗೂ ಅವರ ತಂಡದ್ದೇ ತಪ್ಪು ಎನ್ನುವಂತೆ ಮಾತನಾಡಿದರು. ತುಕಾಲಿ, ಮಾತನಾಡಿದ ಬಳಿಕ ಮಾತನಾಡಿದ ಸುದೀಪ್, ನಿಮಗೆ ಮಾತನಾಡಲು ಅವಕಾಶ ಕೊಟ್ಟಿದ್ದು ಸೂಕ್ಷ್ಮಗಳನ್ನು ಹೇಳುತ್ತೀರೆಂದೇ ಹೊರತು, ನಡೆದ ಘಟನೆಗಳನ್ನು ಹೇಳಲೋ ಅಥವಾ ಯಾರದ್ದು ತಪ್ಪು, ಯಾರದ್ದು ಸರಿಯೋ ಎಂದು ನನಗೆ ಒಪ್ಪಿಸಿ ಎಂದಲ್ಲ ಎಂದರು. ತುಕಾಲಿ ಸಂತು, ತಮ್ಮ ತಪ್ಪಿನ ಅರಿವಾಗಿ ಕ್ಷಮೆ ಕೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ