AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್: ಸ್ಪರ್ಧಿಗಳ ವಿಚಾರಣೆ ಶುರುವಿಟ್ಟುಕೊಂಡ ಕಿಚ್ಚ ಸುದೀಪ್

Bigg Boss: ಈ ವಾರ ಮನೆಯ ಹಲವು ಸ್ಪರ್ಧಿಗಳು ಮಾನವೀಯತೆ ಮೀರಿ ವರ್ತಿಸಿದ್ದಾರೆ, ಅವರ ವರ್ತನೆಯನ್ನು ಸುದೀಪ್ ಹೇಗೆ ವಿಮರ್ಶಿಸುತ್ತಾರೆ, ಯಾರನ್ನು ಟೀಕಿಸುತ್ತಾರೆ, ಯಾರಿಗೆ ಭೇಷ್ ಎನ್ನುತ್ತಾರೆ. ನ್ಯಾಯ ವಿತರಣೆ ಹೇಗೆ ಮಾಡುತ್ತಾರೆ ಎಂದು ನೋಡಲು ಕಾದಿದ್ದರು. ಅಂತೆಯೇ ವಾರಾಂತ್ಯದ ಪಂಚಾಯ್ತಿಗೆ ಬಂದ ಸುದೀಪ್ ತುಸುವೂ ತಡ ಮಾಡದೆ ಸ್ಪರ್ಧಿಗಳ ವಿಚಾರಣೆ ಆರಂಭಿಸಿದ್ದಾರೆ.

ಬಿಗ್​ಬಾಸ್: ಸ್ಪರ್ಧಿಗಳ ವಿಚಾರಣೆ ಶುರುವಿಟ್ಟುಕೊಂಡ ಕಿಚ್ಚ ಸುದೀಪ್
ಮಂಜುನಾಥ ಸಿ.
|

Updated on: Dec 09, 2023 | 9:44 PM

Share

ಈ ವಾರಾಂತ್ಯದ ಕಿಚ್ಚನ ಪಂಚಾಯ್ತಿಗಾಗಿ ಎಲ್ಲ ಬಿಗ್​ಬಾಸ್ (Bigg Boss) ವೀಕ್ಷಕರು ಎದುರು ನೋಡುತ್ತಿದ್ದರು. ಈ ವಾರ ಮನೆಯ ಹಲವು ಸ್ಪರ್ಧಿಗಳು ಮಾನವೀಯತೆ ಮೀರಿ ವರ್ತಿಸಿದ್ದಾರೆ, ಅವರ ವರ್ತನೆಯನ್ನು ಸುದೀಪ್ ಹೇಗೆ ವಿಮರ್ಶಿಸುತ್ತಾರೆ, ಯಾರನ್ನು ಟೀಕಿಸುತ್ತಾರೆ, ಯಾರಿಗೆ ಭೇಷ್ ಎನ್ನುತ್ತಾರೆ. ನ್ಯಾಯ ವಿತರಣೆ ಹೇಗೆ ಮಾಡುತ್ತಾರೆ ಎಂದು ನೋಡಲು ಕಾದಿದ್ದರು. ಅಂತೆಯೇ ವಾರಾಂತ್ಯದ ಪಂಚಾಯ್ತಿಗೆ ಬಂದ ಸುದೀಪ್ ತುಸುವೂ ತಡ ಮಾಡದೆ ಸ್ಪರ್ಧಿಗಳ ವಿಚಾರಣೆ ಆರಂಭಿಸಿದ್ದಾರೆ.

ಹಾಲ್​ನ ಮಧ್ಯೆ ಪ್ರತ್ಯೇಕವಾಗಿ ಕುರ್ಚಿಯೊಂದನ್ನು ಹಾಕಿಸಿ, ಪ್ರತಿಯೊಬ್ಬ ಸ್ಪರ್ಧಿಯನ್ನೂ ಕುರ್ಚಿಗೆ ಕರೆದು ಈ ವಾರ ಮನೆಯಲ್ಲಿ ನಡೆದ ಘಟನೆಗಳ ಬಗ್ಗೆ ಅವರವರ ಅಭಿಪ್ರಾಯ ಕೇಳಿದ್ದಾರೆ. ‘ಈ ದಿನ ಮೊದಲಿಗೆ ನಾನು ಮಾತನಾಡುವುದಿಲ್ಲ, ನಿಮ್ಮ ಮಾತುಗಳನ್ನು ಕೇಳುತ್ತೇನೆ’ ಎಂದು, ಸಾಲಾಗಿ ಎಲ್ಲ ಸ್ಪರ್ಧಿಗಳನ್ನೂ ಕರೆದು ಅವರವರ ದೃಷ್ಟಿಕೋನದಲ್ಲಿ ವಾರದ ಕತೆಯನ್ನು ಕೇಳಿದ್ದಾರೆ.

ಮೊದಲಿಗೆ ಕಾರ್ತಿಕ್ ಅನ್ನು ಕರೆದರು ಸುದೀಪ್, ಕುರ್ಚಿಯಲ್ಲಿ ಕುಳಿತ ಕಾರ್ತಿಕ್, ತಮ್ಮ ಪ್ರಕಾರ ನಡೆದ ಘಟನೆಗಳನ್ನು ವಿವರಿಸಿದರು. ತಾನು ವಿನಯ್​ಗೆ ಸಿಕ್ಕಿದ್ದ ಆನೆಯನ್ನು ಡಸ್ಟ್​ಬೀನ್​ಗೆ ಹಾಕಿದ್ದೆ ಅದು ಟಾಸ್ಕ್​ನ ಭಾಗವಾಗಿತ್ತು, ಆದರೆ ಟಾಸ್ಕ್ ಮುಗಿದ ಕೂಡಲೇ ನಾನೇ ಅದನ್ನು ತೊಳೆದು ಟೇಬಲ್​ ಮೇಲಿಟ್ಟೆ ಎಂದರು. ಬಳಿಕ ತಮಗೂ ವಿನಯ್​ಗೂ ಆದ ಜಗಳ ಹಾಗೂ ತನ್ನ ತಪ್ಪಿಲ್ಲದಿದ್ದರೂ ವಿನಯ್ ಉದ್ದೇಶಪೂರ್ವಕವಾಗಿ ಜಗಳ ಮಾಡಿದರು. ನಾನು ಆಡದ ಮಾತನ್ನು ಆಡಿದ್ದೀಯ ಎಂದು ನನ್ನ ಕುಟುಂಬ ಸದಸ್ಯರನ್ನು ಎಳೆದು ತಂದರು ಎಂದರು.

ಇದನ್ನೂ ಓದಿ:ಈ ವಾರ ಬಿಗ್​ಬಾಸ್ ಮನೆಯಲ್ಲಿ ಅತಿ ಹೆಚ್ಚು ಮತ ಗಳಿಸಿರುವುದು ಯಾರು? ಡ್ರೋನ್ ಪ್ರತಾಪ್​ಗೆ ಎಷ್ಟನೆ ಸ್ಥಾನ?

ಬಳಿಕ ಬಂದ ವಿನಯ್, ಕಾರ್ತಿಕ್ ಹೇಳಿದ ಮಾತುಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ತಿಕ್ ಮಾಡಿದ ಆರೋಪಗಳಿಗೆ ಸ್ಪಷ್ಟನೆ ಕೊಟ್ಟರು. ತನ್ನದು ತಪ್ಪಿಲ್ಲವೆಂದು, ಕಾರ್ತಿಕ್ ಬೇಕೆಂದೇ ನನ್ನನ್ನು ಪ್ರವೋಕ್ ಮಾಡಿ, ನನ್ನಿಂದ ಮಾಡಿಸಿದರು. ನನ್ನ ಆನೆಯನ್ನು ಹಾಳು ಮಾಡಿದರು ಎಂದು ಆರೋಪ ಮಾಡಿದರು.

ಬಳಿಕ ಬಂದ ತುಕಾಲಿ ಸಂತೋಷ್, ಬಹುತೇಕ ತಮ್ಮ ತಂಡದ ಪರವಾಗಿಯೇ ಮಾತನಾಡಿದರು. ಕಾರ್ತಿಕ್ ಹಾಗೂ ಅವರ ತಂಡದ್ದೇ ತಪ್ಪು ಎನ್ನುವಂತೆ ಮಾತನಾಡಿದರು. ತುಕಾಲಿ, ಮಾತನಾಡಿದ ಬಳಿಕ ಮಾತನಾಡಿದ ಸುದೀಪ್, ನಿಮಗೆ ಮಾತನಾಡಲು ಅವಕಾಶ ಕೊಟ್ಟಿದ್ದು ಸೂಕ್ಷ್ಮಗಳನ್ನು ಹೇಳುತ್ತೀರೆಂದೇ ಹೊರತು, ನಡೆದ ಘಟನೆಗಳನ್ನು ಹೇಳಲೋ ಅಥವಾ ಯಾರದ್ದು ತಪ್ಪು, ಯಾರದ್ದು ಸರಿಯೋ ಎಂದು ನನಗೆ ಒಪ್ಪಿಸಿ ಎಂದಲ್ಲ ಎಂದರು. ತುಕಾಲಿ ಸಂತು, ತಮ್ಮ ತಪ್ಪಿನ ಅರಿವಾಗಿ ಕ್ಷಮೆ ಕೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!