ಈ ವಾರ ಬಿಗ್​ಬಾಸ್ ಮನೆಯಿಂದ ಹೊರ ಹೋಗಿದ್ಯಾರು?

Bigg Boss: ಈ ವಾರ ಡಬಲ್ ಎಲಿಮಿನೇಷನ್ ಆಗಲಿದೆ ಎಂಬ ಪುಕಾರು ಹಬ್ಬಿತ್ತು. ಅಂದಹಾಗೆ ಈ ವಾರ ಬಿಗ್​ಬಾಸ್ ಮನೆಯಿಂದ ಹೊರಗೆ ಹೋಗಿದ್ಯಾರು?

ಈ ವಾರ ಬಿಗ್​ಬಾಸ್ ಮನೆಯಿಂದ ಹೊರ ಹೋಗಿದ್ಯಾರು?
Follow us
|

Updated on: Dec 17, 2023 | 11:05 PM

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ರ ಮನೆಯಲ್ಲಿ ಪ್ರಸ್ತುತ ಹಲವು ಸ್ಪರ್ಧಿಗಳಿದ್ದಾರೆ. ಒಬ್ಬರಿಗಿಂತಲೂ ಒಬ್ಬರು ಚೆನ್ನಾಗಿ ಆಡುತ್ತಿದ್ದಾ. ಇನ್ನು ಮುಂದೆ ಪ್ರತಿವಾರ ಹೊರ ಹೋಗುವವರು ಒಳ್ಳೆಯ ಸ್ಪರ್ಧಿಗಳೇ ಆಗಿರುತ್ತಾರೆ. ಈ ವಾರ ಡಬಲ್ ಎಲಿಮಿನೇಷನ್ ಆಗುತ್ತದೆ ಎಂಬ ಪುಕಾರು ಮಾಧ್ಯಮಗಳಲ್ಲಿ ಹರಡಿತ್ತು, ಹಾಗಾಗಿ ಈ ಬಾರಿಯ ಎಲಿಮಿನೇಷನ್​ ಬಗ್ಗೆ ಕುತೂಹಲ ದುಪ್ಪಟ್ಟಾಗಿತ್ತು, ಅಂದಹಾಗೆ ಈ ವಾರ ಹೊರಗೆ ಹೋಗಿದ್ದು ಯಾರು?

ವಿನಯ್, ಸಂಗೀತಾ, ಡ್ರೋನ್ ಪ್ರತಾಪ್, ತನಿಷಾ, ಮೈಖಲ್, ಸಿರಿ, ಪವಿ ಅವರುಗಳು ಈ ವಾರ ನಾಮಿನೇಟ್ ಆಗಿದ್ದರು. ವಿನಯ್ ಅವರು ಸೇಫ್ ಆಗಿರುವುದಾಗಿ ಶನಿವಾರವೇ ಸುದೀಪ್ ಘೋಷಣೆ ಮಾಡಿದರು. ಅದಾದ ಬಳಿಕ ಭಾನುವಾರದ ಎಪಿಸೋಡ್​ನಲ್ಲಿ ಮೊದಲಿಗೆ ಸಂಗೀತಾರನ್ನು ಸೇಫ್ ಮಾಡಿದರು. ಅದಾದ ಬಳಿಕ ಡ್ರೋನ್ ಪ್ರತಾಪ್​ ಅವರನ್ನು ಸೇಫ್ ಮಾಡಿದರು. ಕೊನೆಗೆ ಉಳಿದಿದ್ದು ಮೈಖಲ್, ಸಿರಿ ಮತ್ತು ಪವಿ ಅವರುಗಳು.

ಇದನ್ನೂ ಓದಿ:ಬಿಗ್​ಬಾಸ್ ಮನೆಯಲ್ಲಿ ಪಾಸ್ ಯಾರು? ಫೇಲ್ ಯಾರು? ಜಸ್ಟ್ ಪಾಸ್ ಆದವರ್ಯಾರು?

ಬಳಿಕ ಸುದೀಪ್ ಅವರು ಮೈಖಲ್ ಅವರು ಸೇವ್ ಆಗಿರುವುದಾಗಿ ಹೇಳಿದರು. ಅಂತಿಮವಾಗಿ ಉಳಿದಿದ್ದು ಸಿರಿ ಮತ್ತು ಪವಿ. ಇಬ್ಬರಲ್ಲಿ ಈ ವಾರ ಪವಿ ಅವರು ಮನೆಗೆ ಹೋಗಲಿದ್ದಾರೆ ಎಂದರು. ಸಿರಿ ಅವರು ಈ ವಾರ ಮನೆಯಲ್ಲಿಯೇ ಉಳಿದರು. ಸಿರಿ ಅವರಿಗೆ ಈ ವಾರ ಮನೆಯಲ್ಲಿ ಶಿಸ್ತು ಕಾಪಾಡುವ ಜವಾಬ್ದಾರಿಯನ್ನು ಹೊರಿಸಿದ್ದಾರೆ. ಅದನ್ನು ಪೂರೈಸಲು ಒಂದು ವಾರ ಕಾಲಾವಕಾಶ ಸಿರಿ ಅವರಿಗೆ ದೊರೆತಂತಾಗಿದೆ.

ಎಲಿಮಿನೇಷನ್ ಜೊತೆಗೆ ಸುದೀಪ್ ಅವರು ಕ್ಯಾಪ್ಟನ್ಸಿ ಟಾಸ್ಕ್​ಗೂ ಚಾಲನೆ ನೀಡಿದರು. ಕ್ಯಾಪ್ಟನ್ ರೂಂಗೆ ನಾನೇ ಹಾಕಿಸಿದ್ದ ಬೀಗವನ್ನು ನಾನೇ ತೆಗೆಸುತ್ತಿದ್ದೇನೆ. ಈ ವಾರದಿಂದ ಕ್ಯಾಪ್ಟೆನ್ಸಿ ಟಾಸ್ಕ್​ಗೆ ಮತ್ತೆ ಚಾಲನೆ ಕೊಡುತ್ತಿದ್ದೇನೆ. ಮುಂದಿನ ವಾರ ಯಾರು ಕ್ಯಾಪ್ಟನ್ ಆಗುತ್ತಾರೆಯೋ ಅವರು ಕ್ಯಾಪ್ಟನ್ ರೂಂನ ಬೀಗ ತೆಗೆಯಬೇಕು. ಎಲ್ಲರೂ ಸಹ ಟಾಸ್ಕ್​ನಲ್ಲಿ ಗೆದ್ದು ಕ್ಯಾಪ್ಟನ್ ಆದ ವ್ಯಕ್ತಿಗೆ ಆ ಹುದ್ದೆಗೆ ಗೌರವ ನೀಡಬೇಕು ಎಂದು ಸಹ ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ