AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಬಿಗ್​ಬಾಸ್ ಮನೆಯಿಂದ ಹೊರ ಹೋಗಿದ್ಯಾರು?

Bigg Boss: ಈ ವಾರ ಡಬಲ್ ಎಲಿಮಿನೇಷನ್ ಆಗಲಿದೆ ಎಂಬ ಪುಕಾರು ಹಬ್ಬಿತ್ತು. ಅಂದಹಾಗೆ ಈ ವಾರ ಬಿಗ್​ಬಾಸ್ ಮನೆಯಿಂದ ಹೊರಗೆ ಹೋಗಿದ್ಯಾರು?

ಈ ವಾರ ಬಿಗ್​ಬಾಸ್ ಮನೆಯಿಂದ ಹೊರ ಹೋಗಿದ್ಯಾರು?
Follow us
ಮಂಜುನಾಥ ಸಿ.
|

Updated on: Dec 17, 2023 | 11:05 PM

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ರ ಮನೆಯಲ್ಲಿ ಪ್ರಸ್ತುತ ಹಲವು ಸ್ಪರ್ಧಿಗಳಿದ್ದಾರೆ. ಒಬ್ಬರಿಗಿಂತಲೂ ಒಬ್ಬರು ಚೆನ್ನಾಗಿ ಆಡುತ್ತಿದ್ದಾ. ಇನ್ನು ಮುಂದೆ ಪ್ರತಿವಾರ ಹೊರ ಹೋಗುವವರು ಒಳ್ಳೆಯ ಸ್ಪರ್ಧಿಗಳೇ ಆಗಿರುತ್ತಾರೆ. ಈ ವಾರ ಡಬಲ್ ಎಲಿಮಿನೇಷನ್ ಆಗುತ್ತದೆ ಎಂಬ ಪುಕಾರು ಮಾಧ್ಯಮಗಳಲ್ಲಿ ಹರಡಿತ್ತು, ಹಾಗಾಗಿ ಈ ಬಾರಿಯ ಎಲಿಮಿನೇಷನ್​ ಬಗ್ಗೆ ಕುತೂಹಲ ದುಪ್ಪಟ್ಟಾಗಿತ್ತು, ಅಂದಹಾಗೆ ಈ ವಾರ ಹೊರಗೆ ಹೋಗಿದ್ದು ಯಾರು?

ವಿನಯ್, ಸಂಗೀತಾ, ಡ್ರೋನ್ ಪ್ರತಾಪ್, ತನಿಷಾ, ಮೈಖಲ್, ಸಿರಿ, ಪವಿ ಅವರುಗಳು ಈ ವಾರ ನಾಮಿನೇಟ್ ಆಗಿದ್ದರು. ವಿನಯ್ ಅವರು ಸೇಫ್ ಆಗಿರುವುದಾಗಿ ಶನಿವಾರವೇ ಸುದೀಪ್ ಘೋಷಣೆ ಮಾಡಿದರು. ಅದಾದ ಬಳಿಕ ಭಾನುವಾರದ ಎಪಿಸೋಡ್​ನಲ್ಲಿ ಮೊದಲಿಗೆ ಸಂಗೀತಾರನ್ನು ಸೇಫ್ ಮಾಡಿದರು. ಅದಾದ ಬಳಿಕ ಡ್ರೋನ್ ಪ್ರತಾಪ್​ ಅವರನ್ನು ಸೇಫ್ ಮಾಡಿದರು. ಕೊನೆಗೆ ಉಳಿದಿದ್ದು ಮೈಖಲ್, ಸಿರಿ ಮತ್ತು ಪವಿ ಅವರುಗಳು.

ಇದನ್ನೂ ಓದಿ:ಬಿಗ್​ಬಾಸ್ ಮನೆಯಲ್ಲಿ ಪಾಸ್ ಯಾರು? ಫೇಲ್ ಯಾರು? ಜಸ್ಟ್ ಪಾಸ್ ಆದವರ್ಯಾರು?

ಬಳಿಕ ಸುದೀಪ್ ಅವರು ಮೈಖಲ್ ಅವರು ಸೇವ್ ಆಗಿರುವುದಾಗಿ ಹೇಳಿದರು. ಅಂತಿಮವಾಗಿ ಉಳಿದಿದ್ದು ಸಿರಿ ಮತ್ತು ಪವಿ. ಇಬ್ಬರಲ್ಲಿ ಈ ವಾರ ಪವಿ ಅವರು ಮನೆಗೆ ಹೋಗಲಿದ್ದಾರೆ ಎಂದರು. ಸಿರಿ ಅವರು ಈ ವಾರ ಮನೆಯಲ್ಲಿಯೇ ಉಳಿದರು. ಸಿರಿ ಅವರಿಗೆ ಈ ವಾರ ಮನೆಯಲ್ಲಿ ಶಿಸ್ತು ಕಾಪಾಡುವ ಜವಾಬ್ದಾರಿಯನ್ನು ಹೊರಿಸಿದ್ದಾರೆ. ಅದನ್ನು ಪೂರೈಸಲು ಒಂದು ವಾರ ಕಾಲಾವಕಾಶ ಸಿರಿ ಅವರಿಗೆ ದೊರೆತಂತಾಗಿದೆ.

ಎಲಿಮಿನೇಷನ್ ಜೊತೆಗೆ ಸುದೀಪ್ ಅವರು ಕ್ಯಾಪ್ಟನ್ಸಿ ಟಾಸ್ಕ್​ಗೂ ಚಾಲನೆ ನೀಡಿದರು. ಕ್ಯಾಪ್ಟನ್ ರೂಂಗೆ ನಾನೇ ಹಾಕಿಸಿದ್ದ ಬೀಗವನ್ನು ನಾನೇ ತೆಗೆಸುತ್ತಿದ್ದೇನೆ. ಈ ವಾರದಿಂದ ಕ್ಯಾಪ್ಟೆನ್ಸಿ ಟಾಸ್ಕ್​ಗೆ ಮತ್ತೆ ಚಾಲನೆ ಕೊಡುತ್ತಿದ್ದೇನೆ. ಮುಂದಿನ ವಾರ ಯಾರು ಕ್ಯಾಪ್ಟನ್ ಆಗುತ್ತಾರೆಯೋ ಅವರು ಕ್ಯಾಪ್ಟನ್ ರೂಂನ ಬೀಗ ತೆಗೆಯಬೇಕು. ಎಲ್ಲರೂ ಸಹ ಟಾಸ್ಕ್​ನಲ್ಲಿ ಗೆದ್ದು ಕ್ಯಾಪ್ಟನ್ ಆದ ವ್ಯಕ್ತಿಗೆ ಆ ಹುದ್ದೆಗೆ ಗೌರವ ನೀಡಬೇಕು ಎಂದು ಸಹ ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ