AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಬಿಗ್​ಬಾಸ್ ಮನೆಯಿಂದ ಹೊರ ಹೋಗಿದ್ಯಾರು?

Bigg Boss: ಈ ವಾರ ಡಬಲ್ ಎಲಿಮಿನೇಷನ್ ಆಗಲಿದೆ ಎಂಬ ಪುಕಾರು ಹಬ್ಬಿತ್ತು. ಅಂದಹಾಗೆ ಈ ವಾರ ಬಿಗ್​ಬಾಸ್ ಮನೆಯಿಂದ ಹೊರಗೆ ಹೋಗಿದ್ಯಾರು?

ಈ ವಾರ ಬಿಗ್​ಬಾಸ್ ಮನೆಯಿಂದ ಹೊರ ಹೋಗಿದ್ಯಾರು?
ಮಂಜುನಾಥ ಸಿ.
|

Updated on: Dec 17, 2023 | 11:05 PM

Share

ಬಿಗ್​ಬಾಸ್ (BiggBoss) ಕನ್ನಡ ಸೀಸನ್ 10ರ ಮನೆಯಲ್ಲಿ ಪ್ರಸ್ತುತ ಹಲವು ಸ್ಪರ್ಧಿಗಳಿದ್ದಾರೆ. ಒಬ್ಬರಿಗಿಂತಲೂ ಒಬ್ಬರು ಚೆನ್ನಾಗಿ ಆಡುತ್ತಿದ್ದಾ. ಇನ್ನು ಮುಂದೆ ಪ್ರತಿವಾರ ಹೊರ ಹೋಗುವವರು ಒಳ್ಳೆಯ ಸ್ಪರ್ಧಿಗಳೇ ಆಗಿರುತ್ತಾರೆ. ಈ ವಾರ ಡಬಲ್ ಎಲಿಮಿನೇಷನ್ ಆಗುತ್ತದೆ ಎಂಬ ಪುಕಾರು ಮಾಧ್ಯಮಗಳಲ್ಲಿ ಹರಡಿತ್ತು, ಹಾಗಾಗಿ ಈ ಬಾರಿಯ ಎಲಿಮಿನೇಷನ್​ ಬಗ್ಗೆ ಕುತೂಹಲ ದುಪ್ಪಟ್ಟಾಗಿತ್ತು, ಅಂದಹಾಗೆ ಈ ವಾರ ಹೊರಗೆ ಹೋಗಿದ್ದು ಯಾರು?

ವಿನಯ್, ಸಂಗೀತಾ, ಡ್ರೋನ್ ಪ್ರತಾಪ್, ತನಿಷಾ, ಮೈಖಲ್, ಸಿರಿ, ಪವಿ ಅವರುಗಳು ಈ ವಾರ ನಾಮಿನೇಟ್ ಆಗಿದ್ದರು. ವಿನಯ್ ಅವರು ಸೇಫ್ ಆಗಿರುವುದಾಗಿ ಶನಿವಾರವೇ ಸುದೀಪ್ ಘೋಷಣೆ ಮಾಡಿದರು. ಅದಾದ ಬಳಿಕ ಭಾನುವಾರದ ಎಪಿಸೋಡ್​ನಲ್ಲಿ ಮೊದಲಿಗೆ ಸಂಗೀತಾರನ್ನು ಸೇಫ್ ಮಾಡಿದರು. ಅದಾದ ಬಳಿಕ ಡ್ರೋನ್ ಪ್ರತಾಪ್​ ಅವರನ್ನು ಸೇಫ್ ಮಾಡಿದರು. ಕೊನೆಗೆ ಉಳಿದಿದ್ದು ಮೈಖಲ್, ಸಿರಿ ಮತ್ತು ಪವಿ ಅವರುಗಳು.

ಇದನ್ನೂ ಓದಿ:ಬಿಗ್​ಬಾಸ್ ಮನೆಯಲ್ಲಿ ಪಾಸ್ ಯಾರು? ಫೇಲ್ ಯಾರು? ಜಸ್ಟ್ ಪಾಸ್ ಆದವರ್ಯಾರು?

ಬಳಿಕ ಸುದೀಪ್ ಅವರು ಮೈಖಲ್ ಅವರು ಸೇವ್ ಆಗಿರುವುದಾಗಿ ಹೇಳಿದರು. ಅಂತಿಮವಾಗಿ ಉಳಿದಿದ್ದು ಸಿರಿ ಮತ್ತು ಪವಿ. ಇಬ್ಬರಲ್ಲಿ ಈ ವಾರ ಪವಿ ಅವರು ಮನೆಗೆ ಹೋಗಲಿದ್ದಾರೆ ಎಂದರು. ಸಿರಿ ಅವರು ಈ ವಾರ ಮನೆಯಲ್ಲಿಯೇ ಉಳಿದರು. ಸಿರಿ ಅವರಿಗೆ ಈ ವಾರ ಮನೆಯಲ್ಲಿ ಶಿಸ್ತು ಕಾಪಾಡುವ ಜವಾಬ್ದಾರಿಯನ್ನು ಹೊರಿಸಿದ್ದಾರೆ. ಅದನ್ನು ಪೂರೈಸಲು ಒಂದು ವಾರ ಕಾಲಾವಕಾಶ ಸಿರಿ ಅವರಿಗೆ ದೊರೆತಂತಾಗಿದೆ.

ಎಲಿಮಿನೇಷನ್ ಜೊತೆಗೆ ಸುದೀಪ್ ಅವರು ಕ್ಯಾಪ್ಟನ್ಸಿ ಟಾಸ್ಕ್​ಗೂ ಚಾಲನೆ ನೀಡಿದರು. ಕ್ಯಾಪ್ಟನ್ ರೂಂಗೆ ನಾನೇ ಹಾಕಿಸಿದ್ದ ಬೀಗವನ್ನು ನಾನೇ ತೆಗೆಸುತ್ತಿದ್ದೇನೆ. ಈ ವಾರದಿಂದ ಕ್ಯಾಪ್ಟೆನ್ಸಿ ಟಾಸ್ಕ್​ಗೆ ಮತ್ತೆ ಚಾಲನೆ ಕೊಡುತ್ತಿದ್ದೇನೆ. ಮುಂದಿನ ವಾರ ಯಾರು ಕ್ಯಾಪ್ಟನ್ ಆಗುತ್ತಾರೆಯೋ ಅವರು ಕ್ಯಾಪ್ಟನ್ ರೂಂನ ಬೀಗ ತೆಗೆಯಬೇಕು. ಎಲ್ಲರೂ ಸಹ ಟಾಸ್ಕ್​ನಲ್ಲಿ ಗೆದ್ದು ಕ್ಯಾಪ್ಟನ್ ಆದ ವ್ಯಕ್ತಿಗೆ ಆ ಹುದ್ದೆಗೆ ಗೌರವ ನೀಡಬೇಕು ಎಂದು ಸಹ ಹೇಳಿದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ