AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭ್ಯರ್ಥಿಗಳ ಲಿಸ್ಟ್​ ಅಲ್ಲ; ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಿಗೆ ಕಾಡ್ತಿದೆ ಈ ಪ್ರಶ್ನೆ

Bigg Boss Kannada: ‘ಬಿಗ್ ಬಾಸ್’ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಹೊಸ ಹೊಸ ಪ್ರೋಮೋ ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಈ ಬಾರಿ ದೊಡ್ಮನೆಗೆ ಜನಸಾಮಾನ್ಯರೂ ಹೋಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ‘ಬಿಗ್ ಬಾಸ್’ ಟೈಮಿಂಗ್ ಬಗ್ಗೆ ಚರ್ಚೆ ನಡೆಯುತ್ತಿದೆ. ಯಾವ ಧಾರಾವಾಹಿ ಕೊನೆಗೊಳ್ಳಲಿದೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಅಭ್ಯರ್ಥಿಗಳ ಲಿಸ್ಟ್​ ಅಲ್ಲ; ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಿಗೆ ಕಾಡ್ತಿದೆ ಈ ಪ್ರಶ್ನೆ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Sep 15, 2023 | 7:23 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (Bigg Boss) ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಹೊಸ ಹೊಸ ಪ್ರೋಮೋಗಳ ಮೂಲಕ ವೀಕ್ಷಕರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಈ ಬಾರಿ ದಶಕದ ಸಂಭ್ರಮ ಆಗಿರುವುದರಿಂದ ಅದ್ದೂರಿಯಾಗಿ ‘ಬಿಗ್ ಬಾಸ್’ ಶೋನ ನಡೆಸಲು ವಾಹಿನಿ ಪ್ಲ್ಯಾನ್ ಮಾಡಿಕೊಂಡಿದೆ. ಈ ಮಧ್ಯೆ ದೊಡ್ಮನೆಗೆ ಬರೋರು ಯಾರು ಎನ್ನುವ ಪ್ರಶ್ನೆ ವೀಕ್ಷಕರಿಗೆ ಮೂಡಿದೆ. ಇದಕ್ಕೂ ದೊಡ್ಡ ಪ್ರಶ್ನೆಯೊಂದು ಕಾಡುತ್ತಿದೆ. ಅದೇನು ಎನ್ನುವ ಬಗ್ಗೆ ಇಲ್ಲಿದೆ ಉತ್ತರ.

‘ಬಿಗ್ ಬಾಸ್’ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಹೊಸ ಹೊಸ ಪ್ರೋಮೋ ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಈ ಬಾರಿ ದೊಡ್ಮನೆಗೆ ಜನಸಾಮಾನ್ಯರೂ ಹೋಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ‘ಬಿಗ್ ಬಾಸ್’ ಟೈಮಿಂಗ್ ಬಗ್ಗೆ ಚರ್ಚೆ ನಡೆಯುತ್ತಿದೆ. ಯಾವ ಧಾರಾವಾಹಿ ಕೊನೆಗೊಳ್ಳಲಿದೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಸಂಜೆ 6:30ಕ್ಕೆ ‘ಕೆಂಡಸಂಪಿಗೆ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಆ ಬಳಿಕ ‘ಭಾಗ್ಯಲಕ್ಷ್ಮಿ’ (7:00) ಹಾಗೂ ‘ಲಕ್ಷ್ಮಿ ಬಾರಮ್ಮ’ (7:30) ಧಾರಾವಾಹಿ ಇದೆ. 8 ಗಂಟೆಗೆ ‘ಗೀತಾ’, 8:30ಕ್ಕೆ ‘ಅಂತರಪಟ’, 9 ಗಂಟೆಗೆ ‘ರಾಮಾಚಾರಿ’, 9:30ಕ್ಕೆ ‘ತ್ರಿಪುರಾ ಸುಂದರಿ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. 10 ಗಂಟೆಗೆ ‘ಕೆಂಡಸಂಪಿಗೆ’ ಧಾರಾವಾಹಿ ಇದೆ. ಯಾವ ಧಾರಾವಾಹಿ ಸಮಯ ಬದಲಾವಣೆ ಮಾಡಲಾಗುತ್ತದೆ ಎನ್ನುವ ಪ್ರಶ್ನೆ ಮೂಡಿದೆ.

ಭಾಗ್ಯಲಕ್ಷ್ಮಿ ಹಾಗೂ ಲಕ್ಷ್ಮಿ ಬಾರಮ್ಮ ಧಾರಾವಾಹಿಗಳು ಒಳ್ಳೆಯ ಟಿಆರ್​ಪಿ ಹೊಂದಿವೆ. ಹೀಗಾಗಿ ಈ ಧಾರಾವಾಹಿಗಳ ಸಮಯದಲ್ಲಿ ಯಾವುದೇ ವ್ಯತ್ಯಾಸ ಆಗೋದು ಅನುಮಾನ. ಇನ್ನು, ರಾತ್ರಿ 8 ಗಂಟೆ ಅಥವಾ 9 ಗಂಟೆಯಿಂದ ಬಿಗ್ ಬಾಸ್ ಆರಂಭ ಆಗಬಹುದು ಎನ್ನುವ ಊಹೆ ವೀಕ್ಷಕರದ್ದು.

ಇದನ್ನೂ ಓದಿ: ಚಿತ್ರರಂಗ ತೊರೆದು ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡಿದ್ದ ನಟನಿಗೆ ಬಿಗ್ ಬಾಸ್​ನಲ್ಲಿ ಚಾನ್ಸ್?

‘ಬಿಗ್ ಬಾಸ್’ ವೀಕ್ಷಕರ ವರ್ಗ ದೊಡ್ಡದಿದೆ. ಸಾಕಷ್ಟು ಜನರು ಈ ಶೋ ನೋಡುತ್ತಾರೆ. ಪ್ರೋಮೋಗಳ ಮೂಲಕ ವೀಕ್ಷಕರ ಗಮನ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾ (ಒಟಿಟಿ) ಬಿಗ್ ಬಾಸ್ ಪ್ರಸಾರ ಕಾಣಲಿದೆ. ಸುದೀಪ್ ಅವರು ಶೋನ ನಡೆಸಿಕೊಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ