AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭ್ಯರ್ಥಿಗಳ ಲಿಸ್ಟ್​ ಅಲ್ಲ; ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಿಗೆ ಕಾಡ್ತಿದೆ ಈ ಪ್ರಶ್ನೆ

Bigg Boss Kannada: ‘ಬಿಗ್ ಬಾಸ್’ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಹೊಸ ಹೊಸ ಪ್ರೋಮೋ ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಈ ಬಾರಿ ದೊಡ್ಮನೆಗೆ ಜನಸಾಮಾನ್ಯರೂ ಹೋಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ‘ಬಿಗ್ ಬಾಸ್’ ಟೈಮಿಂಗ್ ಬಗ್ಗೆ ಚರ್ಚೆ ನಡೆಯುತ್ತಿದೆ. ಯಾವ ಧಾರಾವಾಹಿ ಕೊನೆಗೊಳ್ಳಲಿದೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಅಭ್ಯರ್ಥಿಗಳ ಲಿಸ್ಟ್​ ಅಲ್ಲ; ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಿಗೆ ಕಾಡ್ತಿದೆ ಈ ಪ್ರಶ್ನೆ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Sep 15, 2023 | 7:23 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (Bigg Boss) ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಹೊಸ ಹೊಸ ಪ್ರೋಮೋಗಳ ಮೂಲಕ ವೀಕ್ಷಕರನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಈ ಬಾರಿ ದಶಕದ ಸಂಭ್ರಮ ಆಗಿರುವುದರಿಂದ ಅದ್ದೂರಿಯಾಗಿ ‘ಬಿಗ್ ಬಾಸ್’ ಶೋನ ನಡೆಸಲು ವಾಹಿನಿ ಪ್ಲ್ಯಾನ್ ಮಾಡಿಕೊಂಡಿದೆ. ಈ ಮಧ್ಯೆ ದೊಡ್ಮನೆಗೆ ಬರೋರು ಯಾರು ಎನ್ನುವ ಪ್ರಶ್ನೆ ವೀಕ್ಷಕರಿಗೆ ಮೂಡಿದೆ. ಇದಕ್ಕೂ ದೊಡ್ಡ ಪ್ರಶ್ನೆಯೊಂದು ಕಾಡುತ್ತಿದೆ. ಅದೇನು ಎನ್ನುವ ಬಗ್ಗೆ ಇಲ್ಲಿದೆ ಉತ್ತರ.

‘ಬಿಗ್ ಬಾಸ್’ ಆರಂಭಕ್ಕೆ ಒಂದು ತಿಂಗಳು ಬಾಕಿ ಇರುವಾಗಲೇ ಹೊಸ ಹೊಸ ಪ್ರೋಮೋ ಹಂಚಿಕೊಳ್ಳುವ ಕೆಲಸ ಆಗುತ್ತಿದೆ. ಈ ಬಾರಿ ದೊಡ್ಮನೆಗೆ ಜನಸಾಮಾನ್ಯರೂ ಹೋಗುತ್ತಾರಾ ಎಂಬ ಪ್ರಶ್ನೆ ಮೂಡಿದೆ. ಇದೆಲ್ಲಕ್ಕಿಂತ ಹೆಚ್ಚಾಗಿ ‘ಬಿಗ್ ಬಾಸ್’ ಟೈಮಿಂಗ್ ಬಗ್ಗೆ ಚರ್ಚೆ ನಡೆಯುತ್ತಿದೆ. ಯಾವ ಧಾರಾವಾಹಿ ಕೊನೆಗೊಳ್ಳಲಿದೆ ಎನ್ನುವ ಪ್ರಶ್ನೆ ಕಾಡುತ್ತಿದೆ.

ಸಂಜೆ 6:30ಕ್ಕೆ ‘ಕೆಂಡಸಂಪಿಗೆ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಆ ಬಳಿಕ ‘ಭಾಗ್ಯಲಕ್ಷ್ಮಿ’ (7:00) ಹಾಗೂ ‘ಲಕ್ಷ್ಮಿ ಬಾರಮ್ಮ’ (7:30) ಧಾರಾವಾಹಿ ಇದೆ. 8 ಗಂಟೆಗೆ ‘ಗೀತಾ’, 8:30ಕ್ಕೆ ‘ಅಂತರಪಟ’, 9 ಗಂಟೆಗೆ ‘ರಾಮಾಚಾರಿ’, 9:30ಕ್ಕೆ ‘ತ್ರಿಪುರಾ ಸುಂದರಿ’ ಧಾರಾವಾಹಿ ಪ್ರಸಾರ ಕಾಣುತ್ತಿದೆ. 10 ಗಂಟೆಗೆ ‘ಕೆಂಡಸಂಪಿಗೆ’ ಧಾರಾವಾಹಿ ಇದೆ. ಯಾವ ಧಾರಾವಾಹಿ ಸಮಯ ಬದಲಾವಣೆ ಮಾಡಲಾಗುತ್ತದೆ ಎನ್ನುವ ಪ್ರಶ್ನೆ ಮೂಡಿದೆ.

ಭಾಗ್ಯಲಕ್ಷ್ಮಿ ಹಾಗೂ ಲಕ್ಷ್ಮಿ ಬಾರಮ್ಮ ಧಾರಾವಾಹಿಗಳು ಒಳ್ಳೆಯ ಟಿಆರ್​ಪಿ ಹೊಂದಿವೆ. ಹೀಗಾಗಿ ಈ ಧಾರಾವಾಹಿಗಳ ಸಮಯದಲ್ಲಿ ಯಾವುದೇ ವ್ಯತ್ಯಾಸ ಆಗೋದು ಅನುಮಾನ. ಇನ್ನು, ರಾತ್ರಿ 8 ಗಂಟೆ ಅಥವಾ 9 ಗಂಟೆಯಿಂದ ಬಿಗ್ ಬಾಸ್ ಆರಂಭ ಆಗಬಹುದು ಎನ್ನುವ ಊಹೆ ವೀಕ್ಷಕರದ್ದು.

ಇದನ್ನೂ ಓದಿ: ಚಿತ್ರರಂಗ ತೊರೆದು ಪೆಟ್ರೋಲ್ ಬಂಕ್​ನಲ್ಲಿ ಕೆಲಸ ಮಾಡಿದ್ದ ನಟನಿಗೆ ಬಿಗ್ ಬಾಸ್​ನಲ್ಲಿ ಚಾನ್ಸ್?

‘ಬಿಗ್ ಬಾಸ್’ ವೀಕ್ಷಕರ ವರ್ಗ ದೊಡ್ಡದಿದೆ. ಸಾಕಷ್ಟು ಜನರು ಈ ಶೋ ನೋಡುತ್ತಾರೆ. ಪ್ರೋಮೋಗಳ ಮೂಲಕ ವೀಕ್ಷಕರ ಗಮನ ಸೆಳೆಯುವ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾ (ಒಟಿಟಿ) ಬಿಗ್ ಬಾಸ್ ಪ್ರಸಾರ ಕಾಣಲಿದೆ. ಸುದೀಪ್ ಅವರು ಶೋನ ನಡೆಸಿಕೊಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು