Drone Prathap: ಅಭಿಮಾನಿಯ ಆಟೋ ಓಡಿಸಿ ಗಮನ ಸೆಳೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್

ಡ್ರೋನ್ ಪ್ರತಾಪ್ ಆಟೋ ಓಡಿಸುವಾಗ ಶಂಕರ್​ನಾಗ್​ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ಡ್ರೋನ್ ಪ್ರತಾಪ್ ಓಡಿಸಿದ್ದು ಅವರ ಅಭಿಮಾನಿಯ ಆಟೋ ಎನ್ನಲಾಗಿದೆ. ಆಟೋ ಚಲಾಯಿಸಿದ ಬಳಿಕ ಅವರು ಸಮಸ್ತ ಕರ್ನಾಟಕದ ಆಟೋ ಚಾಲಕರಿಗೆ ಹಾರೈಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

Drone Prathap: ಅಭಿಮಾನಿಯ ಆಟೋ ಓಡಿಸಿ ಗಮನ ಸೆಳೆದ ‘ಬಿಗ್ ಬಾಸ್’ ಡ್ರೋನ್ ಪ್ರತಾಪ್
Follow us
| Updated By: ರಾಜೇಶ್ ದುಗ್ಗುಮನೆ

Updated on:Feb 13, 2024 | 12:46 PM

‘ಬಿಗ್ ಬಾಸ್ ಕನ್ನಡ ಸೀಸನ್ 10’ರ (BBK 10) ರನ್ನರ್​ಅಪ್ ಡ್ರೋನ್ ಪ್ರತಾಪ್ ಅವರು ಈಗ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಬಿಗ್ ಬಾಸ್ ಮುಗಿದು ಹಲವು ದಿನಗಳು ಕಳೆದಿದ್ದರೂ ಅವರ ಬಗ್ಗೆ ನಡೆಯುತ್ತಿರುವ ಚರ್ಚೆಗಳು ನಿಂತಿಲ್ಲ. ‘ಬಿಗ್ ಬಾಸ್​’ನಿಂದ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಅವರು ಹೋದಲ್ಲೆಲ್ಲ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಈಗ ಡ್ರೋನ್ ಪ್ರತಾಪ್ ಅವರು ಆಟೋ ಓಡಿಸಿ ಗಮನ ಸೆಳೆದಿದ್ದಾರೆ. ಆಟೋ ಚಾಲಕರಿಗೆ ಅವರು ವಿಶ್ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ.

ಡ್ರೋನ್ ಪ್ರತಾಪ್ ಅವರು ‘ಬಿಗ್ ಬಾಸ್​’ಗೆ ಬರುವುದಕ್ಕೂ ಮೊದಲು ಅವರ ಮೇಲೆ ಸಾಕಷ್ಟು ಆರೋಪ ಇತ್ತು. ಅವರನ್ನು ಏಕೆ ದೊಡ್ಮನೆಗೆ ಕರೆತರಲಾಯಿತು ಎನ್ನುವ ಅಭಿಪ್ರಾಯ ಅನೇಕರಲ್ಲಿತ್ತು. ಆದರೆ, ಬಹುತೇಕರಿಗೆ ಈ ಅಭಿಪ್ರಾಯ ಬದಲಾಗಿದೆ. ಅವರ ಮೇಲೆ ಸಿಂಪತಿ ಮೂಡಿದೆ. ಇದಕ್ಕೆ ವಿನಯ್ ಗೌಡ ಹಾಗೂ ಅವರ ಗ್ಯಾಂಗ್ ನಡೆದುಕೊಂಡಿದ್ದೂ ಒಂದು ಕಾರಣ. ಬಿಗ್ ಬಾಸ್​ ಜರ್ನಿ ಪ್ರತಾಪ್​ಗೆ ಅನೇಕ ವಿಚಾರಗಳನ್ನು ಮರಳಿ ನೀಡಿದೆ. ಇದರಿಂದ ಅವರು ಖುಷಿಯಾಗಿದ್ದಾರೆ. ಮತ್ತೆ ಕುಟುಂಬದ ಜೊತೆ ಸೇರಿದ್ದಾರೆ.

ಶಂಕರ್ ನಾಗ್ ಅವರು ‘ಆಟೋ ರಾಜ’ ಎಂದೇ ಫೇಮಸ್. ಡ್ರೋನ್ ಪ್ರತಾಪ್ ಕೂಡ ಆಟೋ ಓಡಿಸುವಾಗ ಶಂಕರ್​ನಾಗ್​ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ಡ್ರೋನ್ ಪ್ರತಾಪ್ ಓಡಿಸಿದ್ದು ಅವರ ಅಭಿಮಾನಿಯ ಆಟೋ ಎನ್ನಲಾಗಿದೆ. ಆಟೋ ಓಡಿಸಿದ ಬಳಿಕ ಅವರು ಸಮಸ್ತ ಕರ್ನಾಟಕದ ಆಟೋ ಚಾಲಕರಿಗೆ ಹಾರೈಸಿದ್ದಾರೆ. ಈ ವಿಡಿಯೋ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

ಆಟೋ ಓಡಿಸಿದ ಡ್ರೋನ್ ಪ್ರತಾಪ್

ಡ್ರೋನ್ ಪ್ರತಾಪ್ ಅವರು ‘ಬಿಗ್ ಬಾಸ್​’ ಮನೆಗೆ ಕಾಲಿಟ್ಟ ಬಳಿಕ ಸಾಕಷ್ಟು ಸುದ್ದಿ ಆದರು. ಅವರು ಒಮ್ಮೆ ಕಣ್ಣಿಗೆ ಹಾನಿ ಮಾಡಿಕೊಂಡು ಆಸ್ಪತ್ರೆ ಸೇರಿದ್ದರು. ಅಷ್ಟೇ ಅಲ್ಲದೆ ಅವರು ಹಸಿವಿನಿಂದ ಹಾಗೆಯೇ ಇದ್ದ ಕಾರಣ ಅನಾರೋಗ್ಯ ಉಂಟಾಗಿತ್ತು. ಈ ಕಾರಣಕ್ಕೂ ಅವರು ಆಸ್ಪತ್ರೆ ಸೇರಬೇಕಾಗಿ ಬಂದಿತ್ತು. ಬಿಗ್ ಬಾಸ್ ಮುಗಿದ ಬಳಿಕ ‘ಕಲರ್ಸ್ ಕನ್ನಡ’ದಲ್ಲಿ ಪ್ರಸಾರ ಆಗುವ ‘ಗಿಚ್ಚಿ ಗಿಲಿಗಿಲಿ 3’ ಶೋನಲ್ಲೂ ಅವರು ಭಾಗಿ ಆಗುತ್ತಿದ್ದಾರೆ.

ಇದನ್ನೂ ಓದಿ: ರೆಸ್ಟೊರೆಂಟ್​ನಲ್ಲಿ ರೊಚ್ಚಿಗೆದ್ದ ಬಿಗ್ ಬಾಸ್ ವಿನ್ನರ್; ನಡೆದೋಯ್ತು ರಾದ್ಧಾಂತ

ಬಿಗ್ ಬಾಸ್ ಪೂರ್ಣಗೊಂಡ ಬಳಿಕ ಅವರು ಊರಿಗೆ ಮರಳಿದ್ದಾರೆ. ಅಲ್ಲಿಂದ ಡ್ರೋನ್ ಪ್ರತಾಪ್ ಅವರು ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಅವರನ್ನು ನೋಡಲು ಅಭಿಮಾನಿಗಳ ದಂಡೇ ನೆರೆದಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಫ್ಯಾನ್ಸ್ ಆಗಮಿಸಿ ಪ್ರತಾಪ್ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ ಹಿಂಬಾಲಕ ಸಂಖ್ಯೆ ಹೆಚ್ಚಿದೆ. ಲಕ್ಷಾಂತರ ಮಂದಿ ಅವರನ್ನು ಫಾಲೋ ಮಾಡುತ್ತಿದ್ದಾರೆ. ಇನ್ನೂ ಕೆಲವರು ಡ್ರೋನ್ ಪ್ರತಾಪ್ ಅವರು ಜನರ ಕಣ್ಣಿಗ ಮಣ್ಣೆರೆಚಿದ್ದಾರೆ ಎನ್ನುವ ಆರೋಪ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:45 pm, Tue, 13 February 24

ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ದೇವರ ಮುಂದೆ ಕಣ್ಣೀರು ಹಾಕಿದ್ರೆ ಏನಾಗುತ್ತೆ ಗೊತ್ತಾ?
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ಬದುಕು ಬದಲಿಸಿದ ‘ಕೆಜಿಎಫ್’: ಪ್ರಶಾಂತ್ ನೀಲ್​ಗೆ ಗರುಡ ರಾಮ್ ಧನ್ಯವಾದ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ತುಂಗಭದ್ರಾ ಪೈಪ್‌ಲೈನ್ ಒಡೆದು 50 ಎಕರೆ ಬೆಳೆ ಮುಳುಗಡೆ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
ಕಟ್ಟಡ ಕುಸಿತ: ಅಧಿಕಾರಿಗಳನ್ನ ತರಾಟೆಗೆ ತಗೊಂಡ್ರು ಲೋಕಾಯುಕ್ತ ನ್ಯಾಯಮೂರ್ತಿ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
‘ಬಘೀರ’ದಲ್ಲಿ ಹೇಗಿದೆ ಗರುಡಾ ರಾಮ್ ಪಾತ್ರ? ಕಥೆ ಬಗ್ಗೆ ಸುಳಿವು ನೀಡಿದ ನಟ
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ನಾಮಪತ್ರ ಸಲ್ಲಿಕೆಗೆ ಸಿದ್ದರಾಮಯ್ಯ, ಶಿವಕುಮಾರ್ ಬರಲಿದ್ದಾರೆ: ಯೋಗೇಶ್ವರ್
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಕುಮಾರಸ್ವಾಮಿ ಸೂಚಿಸುವ ಅಭ್ಯರ್ಥಿಗೆ ಎನ್​ಡಿಎ ಒಮ್ಮತದ ಬೆಂಬಲ: ವಿಜಯೇಂದ್ರ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಬಿಗ್​ಬಾಸ್​ನಲ್ಲಿ ಶುರುವಾಯ್ತು ಪಕ್ಷ ರಾಜಕೀಯ, ಸ್ಪರ್ಧಿಗಳ ನಡುವೆ ಗಲಾಟೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಭಾರತ- ಪಾಕಿಸ್ತಾನದ ನಡುವೆ ರಾಜಿಯಾಗಬೇಕು; ಮೆಹಬೂಬಾ ಮುಫ್ತಿ ಹೇಳಿಕೆ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ
ಎನ್​ಡಿಎ ಅಭ್ಯರ್ಥಿ ಗೆಲ್ಲಿಸಲು ಕುಮಾರಸ್ವಾಮಿ ಶ್ರಮಿಸಬೇಕು: ಪ್ರೀತಂ ಗೌಡ