AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ 100 ದಿನಕ್ಕೆ ಮುಗಿಯಲ್ಲ ಬಿಗ್ ಬಾಸ್; ವೀಕ್ಷಕರಿಗೆ ಇದೆ ಸರ್​ಪ್ರೈಸ್

ಬಿಗ್ ಬಾಸ್ ಎಂದಾಗ ತಕ್ಷಣಕ್ಕೆ ನೆನಪಿಗೆ ಬರೋದು ನೂರು ದಿನಗಳ ಆಟ ಎಂಬುದು. ಕೆಲವು ಸೀಸನ್​ಗಳು ಕೇವಲ 98ನೇ ದಿನಕ್ಕೆ ಪೂರ್ಣಗೊಂಡ ಉದಾಹರಣೆ ಇದೆ. ಈ ಬಾರಿ ಸರ್​ಪ್ರೈಸ್ ಇದೆ.

ಈ ಬಾರಿ 100 ದಿನಕ್ಕೆ ಮುಗಿಯಲ್ಲ ಬಿಗ್ ಬಾಸ್; ವೀಕ್ಷಕರಿಗೆ ಇದೆ ಸರ್​ಪ್ರೈಸ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 28, 2023 | 3:06 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಈಗಾಗಲೇ 80 ದಿನಗಳನ್ನು ಪೂರೈಸಿದೆ. ದೊಡ್ಮನೆ ಆಟ ಇನ್ನು ಕೇವಲ 20 ದಿನ ಉಳಿದಿರೋದು ಅನ್ನೋದು ಅನೇಕರ ಭಾವನೆ. ಮನೆಯಲ್ಲಿ ಇರುವ ಸ್ಪರ್ಧಿಗಳು ಕೂಡ ಇದನ್ನೇ ಅಂದುಕೊಂಡಿದ್ದಾರೆ. ಆದರೆ, ಬಿಗ್ ಬಾಸ್ (Bigg Boss) ಈ ಬಾರಿ 100 ದಿನಕ್ಕೆ ಪೂರ್ಣಗೊಳ್ಳುತ್ತಿಲ್ಲ ಎನ್ನುತ್ತಿವೆ ಮೂಲಗಳು. ಈ ವಿಚಾರ ಕೇಳಿ ವೀಕ್ಷಕರು ಖುಷಿಪಟ್ಟಿದ್ದಾರೆ.

ಬಿಗ್ ಬಾಸ್ ಎಂದಾಗ ತಕ್ಷಣಕ್ಕೆ ನೆನಪಿಗೆ ಬರೋದು ನೂರು ದಿನಗಳ ಆಟ ಎಂಬುದು. ಕೆಲವು ಸೀಸನ್​ಗಳು ಕೇವಲ 98ನೇ ದಿನಕ್ಕೆ ಪೂರ್ಣಗೊಂಡ ಉದಾಹರಣೆ ಇದೆ. ಎಂಟನೇ ಸೀಸನ್ 117 ದಿನಗಳ ಕಾಲ ಇತ್ತು. ಏಳನೇ ಸೀಸನ್ 112 ದಿನ ನಡೆದಿತ್ತು. ಟಿಆರ್​ಪಿ ಉತ್ತಮವಾಗಿದ್ದಾಗ ಹೆಚ್ಚುವರಿಯಾಗಿ ಎರಡು ವಾರ ಬಿಗ್ ಬಾಸ್ ಶೋನ ನಡೆಸಲಾಗುತ್ತದೆ. ಈ ಸೀಸನ್​ನಲ್ಲೂ ಎರಡು ವಾರ ಹೆಚ್ಚುವರಿಯಾಗಿ ನಡೆಸಲು ವಾಹಿನಿ ನಿರ್ಧರಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಬಿಗ್ ಬಾಸ್ ಬಾಗಿಲು ತೆಗೆಯಿರಿ’; ತಂದೆ-ತಾಯಿ ನೋಡಿ ಗಳಗಳನೆ ಅತ್ತ ಪ್ರತಾಪ್

ಈ ಬಾರಿ ಬಿಗ್ ಬಾಸ್ ಟಿಆರ್​ಪಿ ಉತ್ತಮವಾಗಿ ಬರುತ್ತಿದೆ. ಕಳೆದ ವಾರ ಬಂದ ಟಿಆರ್​ಪಿ ಪ್ರಕಾರ ವೀಕೆಂಡ್ ಎಪಿಸೋಡ್​ನಲ್ಲಿ ಬಿಗ್ ಬಾಸ್ 9 ಟಿವಿಆರ್ ಪಡೆದಿದೆ. ಇದು ವಾಹಿನಿಯವರ ಖುಷಿ ಹೆಚ್ಚಿಸಿದೆ. ಇತ್ತೀಚಿನ ವರ್ಷಗಳಲ್ಲಿ ಬಿಗ್ ಬಾಸ್​ಗೆ ಈ ಮಟ್ಟದ ಟಿಆರ್​ಪಿ ಸಿಕ್ಕಿರಲಿಲ್ಲ. ಈ ಕಾರಣದಿಂದ 14 ದಿನ ಹೆಚ್ಚುವರಿಯಾಗಿ ಶೋ ನಡೆಸಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Bigg Boss Kannada: ‘ಬಿಗ್ ಬಾಸ್’ ಕೊಡ್ತಿರೋ ಕಾಟಕ್ಕೆ ಸ್ಪರ್ಧಿಗಳು ಸುಸ್ತೋ ಸುಸ್ತು

ಈ ಬಾರಿಯ ಬಿಗ್ ಬಾಸ್​ನಲ್ಲಿ ವಿವಾದಗಳು ಸಾಕಷ್ಟಿದ್ದವು. ವಿನಯ್ ಗೌಡ ಅವರು ಸಾಕಷ್ಟು ಕೂಗಾಟ ನಡೆಸಿದ್ದರು. ಕೆಲವರ ಕಣ್ಣಿಗೆ ಹಾನಿ ಆಯಿತು. ಬಳೆಯ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಈ ಎಲ್ಲಾ ಕಾರಣದಿಂದ ಬಿಗ್ ಬಾಸ್ ವೀಕ್ಷಕರ ಸಂಖ್ಯೆ ಹೆಚ್ಚಿದೆ. ಈ ಬಾರಿಯ ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ನೊಡುವ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು