AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ 100 ದಿನಕ್ಕೆ ಮುಗಿಯಲ್ಲ ಬಿಗ್ ಬಾಸ್; ವೀಕ್ಷಕರಿಗೆ ಇದೆ ಸರ್​ಪ್ರೈಸ್

ಬಿಗ್ ಬಾಸ್ ಎಂದಾಗ ತಕ್ಷಣಕ್ಕೆ ನೆನಪಿಗೆ ಬರೋದು ನೂರು ದಿನಗಳ ಆಟ ಎಂಬುದು. ಕೆಲವು ಸೀಸನ್​ಗಳು ಕೇವಲ 98ನೇ ದಿನಕ್ಕೆ ಪೂರ್ಣಗೊಂಡ ಉದಾಹರಣೆ ಇದೆ. ಈ ಬಾರಿ ಸರ್​ಪ್ರೈಸ್ ಇದೆ.

ಈ ಬಾರಿ 100 ದಿನಕ್ಕೆ ಮುಗಿಯಲ್ಲ ಬಿಗ್ ಬಾಸ್; ವೀಕ್ಷಕರಿಗೆ ಇದೆ ಸರ್​ಪ್ರೈಸ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Dec 28, 2023 | 3:06 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಈಗಾಗಲೇ 80 ದಿನಗಳನ್ನು ಪೂರೈಸಿದೆ. ದೊಡ್ಮನೆ ಆಟ ಇನ್ನು ಕೇವಲ 20 ದಿನ ಉಳಿದಿರೋದು ಅನ್ನೋದು ಅನೇಕರ ಭಾವನೆ. ಮನೆಯಲ್ಲಿ ಇರುವ ಸ್ಪರ್ಧಿಗಳು ಕೂಡ ಇದನ್ನೇ ಅಂದುಕೊಂಡಿದ್ದಾರೆ. ಆದರೆ, ಬಿಗ್ ಬಾಸ್ (Bigg Boss) ಈ ಬಾರಿ 100 ದಿನಕ್ಕೆ ಪೂರ್ಣಗೊಳ್ಳುತ್ತಿಲ್ಲ ಎನ್ನುತ್ತಿವೆ ಮೂಲಗಳು. ಈ ವಿಚಾರ ಕೇಳಿ ವೀಕ್ಷಕರು ಖುಷಿಪಟ್ಟಿದ್ದಾರೆ.

ಬಿಗ್ ಬಾಸ್ ಎಂದಾಗ ತಕ್ಷಣಕ್ಕೆ ನೆನಪಿಗೆ ಬರೋದು ನೂರು ದಿನಗಳ ಆಟ ಎಂಬುದು. ಕೆಲವು ಸೀಸನ್​ಗಳು ಕೇವಲ 98ನೇ ದಿನಕ್ಕೆ ಪೂರ್ಣಗೊಂಡ ಉದಾಹರಣೆ ಇದೆ. ಎಂಟನೇ ಸೀಸನ್ 117 ದಿನಗಳ ಕಾಲ ಇತ್ತು. ಏಳನೇ ಸೀಸನ್ 112 ದಿನ ನಡೆದಿತ್ತು. ಟಿಆರ್​ಪಿ ಉತ್ತಮವಾಗಿದ್ದಾಗ ಹೆಚ್ಚುವರಿಯಾಗಿ ಎರಡು ವಾರ ಬಿಗ್ ಬಾಸ್ ಶೋನ ನಡೆಸಲಾಗುತ್ತದೆ. ಈ ಸೀಸನ್​ನಲ್ಲೂ ಎರಡು ವಾರ ಹೆಚ್ಚುವರಿಯಾಗಿ ನಡೆಸಲು ವಾಹಿನಿ ನಿರ್ಧರಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಬಿಗ್ ಬಾಸ್ ಬಾಗಿಲು ತೆಗೆಯಿರಿ’; ತಂದೆ-ತಾಯಿ ನೋಡಿ ಗಳಗಳನೆ ಅತ್ತ ಪ್ರತಾಪ್

ಈ ಬಾರಿ ಬಿಗ್ ಬಾಸ್ ಟಿಆರ್​ಪಿ ಉತ್ತಮವಾಗಿ ಬರುತ್ತಿದೆ. ಕಳೆದ ವಾರ ಬಂದ ಟಿಆರ್​ಪಿ ಪ್ರಕಾರ ವೀಕೆಂಡ್ ಎಪಿಸೋಡ್​ನಲ್ಲಿ ಬಿಗ್ ಬಾಸ್ 9 ಟಿವಿಆರ್ ಪಡೆದಿದೆ. ಇದು ವಾಹಿನಿಯವರ ಖುಷಿ ಹೆಚ್ಚಿಸಿದೆ. ಇತ್ತೀಚಿನ ವರ್ಷಗಳಲ್ಲಿ ಬಿಗ್ ಬಾಸ್​ಗೆ ಈ ಮಟ್ಟದ ಟಿಆರ್​ಪಿ ಸಿಕ್ಕಿರಲಿಲ್ಲ. ಈ ಕಾರಣದಿಂದ 14 ದಿನ ಹೆಚ್ಚುವರಿಯಾಗಿ ಶೋ ನಡೆಸಲು ನಿರ್ಧರಿಸಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Bigg Boss Kannada: ‘ಬಿಗ್ ಬಾಸ್’ ಕೊಡ್ತಿರೋ ಕಾಟಕ್ಕೆ ಸ್ಪರ್ಧಿಗಳು ಸುಸ್ತೋ ಸುಸ್ತು

ಈ ಬಾರಿಯ ಬಿಗ್ ಬಾಸ್​ನಲ್ಲಿ ವಿವಾದಗಳು ಸಾಕಷ್ಟಿದ್ದವು. ವಿನಯ್ ಗೌಡ ಅವರು ಸಾಕಷ್ಟು ಕೂಗಾಟ ನಡೆಸಿದ್ದರು. ಕೆಲವರ ಕಣ್ಣಿಗೆ ಹಾನಿ ಆಯಿತು. ಬಳೆಯ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಈ ಎಲ್ಲಾ ಕಾರಣದಿಂದ ಬಿಗ್ ಬಾಸ್ ವೀಕ್ಷಕರ ಸಂಖ್ಯೆ ಹೆಚ್ಚಿದೆ. ಈ ಬಾರಿಯ ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ನೊಡುವ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ