AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಎಫೆಕ್ಟ್: ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿಯಲ್ಲಿ ಇಳಿಕೆ; ಇಲ್ಲಿದೆ ವಿವರ

‘ಬಿಗ್ ಬಾಸ್ ಕನ್ನಡ’ದ ಟಿಆರ್​ಪಿ ಉತ್ತಮವಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ 4.8 ಟಿಆರ್​ಪಿಯನ್ನು ಬಿಗ್ ಬಾಸ್ ಪಡೆದಿದೆ. ಶನಿವಾರ 5.7 ಹಾಗೂ ಭಾನುವಾರ 4.9 ಟಿಆರ್​ಪಿ ಬಿಗ್ ಬಾಸ್​ಗೆ ಸಿಕ್ಕಿದೆ. ಕಳೆದ ವಾರಕ್ಕೆ ಹೋಲಿಸಿದರೆ ಟಿಆರ್​ಪಿಯಲ್ಲಿ ಇಳಿಕೆ ಆಗಿದೆ.

ಬಿಗ್ ಬಾಸ್ ಎಫೆಕ್ಟ್: ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿಯಲ್ಲಿ ಇಳಿಕೆ; ಇಲ್ಲಿದೆ ವಿವರ
ಸೀತಾ ರಾಮ-ಬಿಗ್ ಬಾಸ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Nov 02, 2023 | 2:06 PM

‘ಬಿಗ್ ಬಾಸ್ ಕನ್ನಡ ಸೀಸನ್ 10’ ಆರಂಭ ಆಗಿ ಒಂದು ತಿಂಗಳು ಕಳೆದಿದೆ. ಸ್ಪರ್ಧಿಗಳ ಮಧ್ಯೆ ಟಫ್ ಸ್ಪರ್ಧೆ ಏರ್ಪಟ್ಟಿದೆ. ಮನೆಯಲ್ಲಿ ಮನರಂಜನೆಗಿಂತ ಕಿತ್ತಾಟವೇ ಜೋರಾಗಿದೆ. ಕಳೆದ ಸೀಸನ್​ಗಳಲ್ಲಿ ನಗು ಉಕ್ಕಿಸುವ ಘಟನೆಗಳು ನಡೆಯುತ್ತಿದ್ದವು. ಆದರೆ, ಈ ಬಾರಿ ಆ ರೀತಿ ಆಗುತ್ತಿಲ್ಲ. ದೊಡ್ಮನೆಯ ಯಾವುದೇ ಮೂಲೆಗೆ ಹೋದರೂ ಜಗಳ ಕೇಳುತ್ತದೆ. ಹಾಗಾದರೆ ಬಿಗ್ ಬಾಸ್ (Bigg Boss) ಎಷ್ಟು ಟಿಆರ್​ಪಿ ಪಡೆದಿದೆ? ಉಳಿದ ಧಾರಾವಾಹಿಗಳ ಪರಿಸ್ಥಿತಿ ಏನಾಗಿದೆ ಎಂಬ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್

‘ಬಿಗ್ ಬಾಸ್ ಕನ್ನಡ’ದ ಟಿಆರ್​ಪಿ ಉತ್ತಮವಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ 4.8 ಟಿಆರ್​ಪಿಯನ್ನು ಬಿಗ್ ಬಾಸ್ ಪಡೆದಿದೆ. ಶನಿವಾರ 5.7 ಹಾಗೂ ಭಾನುವಾರ 4.9 ಟಿಆರ್​ಪಿ ಬಿಗ್ ಬಾಸ್​ಗೆ ಸಿಕ್ಕಿದೆ. ಕಳೆದ ವಾರಕ್ಕೆ ಹೋಲಿಸಿದರೆ ಟಿಆರ್​ಪಿಯಲ್ಲಿ ಇಳಿಕೆ ಆಗಿದೆ.

ಹೊಸ ಧಾರಾವಾಹಿ ಕಥೆ ಏನು?

‘ಬೃಂದಾವನ’ ಧಾರಾವಾಹಿ ಇತ್ತೀಚೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಂಡಿದೆ. ಈ ಧಾರಾವಾಹಿ ಸಾಧಾರಣ ಟಿಆರ್​ಪಿ ಪಡೆದಿದೆ. ಈ ಧಾರಾವಾಹಿಗೆ 5.2 ಟಿಆರ್​ಪಿ ಸಿಕ್ಕಿದೆ.

ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ?

ಕಳೆದ ಕೆಲವು ತಿಂಗಳಿಂದ ಮೊದಲ ಸ್ಥಾನದಲ್ಲಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ 43ನೇ ವಾರವೂ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಗೆ ಎಲ್ಲಾ ಧಾರಾವಾಹಿಗಿಂತ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ. ಎರಡನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ. ಈ ಧಾರಾವಾಹಿ ಬಹುತೇಕ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಆದಾಗ್ಯೂ ಇದರ ಟಿಆರ್​ಪಿ ಕಡಿಮೆ ಆಗಿಲ್ಲ.

ಇದನ್ನೂ ಓದಿ: ‘ಒಂದು ವಾರ ಎಲ್ಲಿದ್ರಿ’; ಬಿಗ್ ಬಾಸ್ ಸ್ಪರ್ಧಿಗಳ ಪ್ರಶ್ನೆಗೆ ವರ್ತೂರು ಸಂತೋಷ್ ಉತ್ತರವೇನು?

ಮೂರನೇ ಸ್ಥಾನದಲ್ಲಿ ‘ಸತ್ಯ’, ನಾಲ್ಕನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಹಾಗೂ ‘ಅಮೃತಧಾರೆ’ ಧಾರಾವಾಹಿಗಳು ಇವೆ. ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಇದೆ. ಟಾಪ್​ ಐದರಿಂದ ‘ಸೀತಾ ರಾಮ’ ಧಾರಾವಾಹಿ ಹೊರಗೆ ಉಳಿದಿದೆ. ಇದಕ್ಕೆ ಬಿಗ್ ಬಾಸ್ ಕಾರಣ ಎಂದು ಹೇಳಲಾಗುತ್ತಿದೆ.  ‘ಸೀತಾ ರಾಮ’ ರಾತ್ರಿ 9:30ಕ್ಕೆ ಪ್ರಸಾರ ಕಾಣುತ್ತದೆ. ಬಿಗ್ ಬಾಸ್ ಪ್ರಸಾರದ ಸಮಯ ಕೂಡ ಇದೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ
ಸೋಮನಹಳ್ಳಿ ಟೋಲ್ ವಿರುದ್ಧ ರೈತರು, ಸ್ಥಳೀಯರಿಂದ ಹೋರಾಟ