AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಎಫೆಕ್ಟ್: ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿಯಲ್ಲಿ ಇಳಿಕೆ; ಇಲ್ಲಿದೆ ವಿವರ

‘ಬಿಗ್ ಬಾಸ್ ಕನ್ನಡ’ದ ಟಿಆರ್​ಪಿ ಉತ್ತಮವಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ 4.8 ಟಿಆರ್​ಪಿಯನ್ನು ಬಿಗ್ ಬಾಸ್ ಪಡೆದಿದೆ. ಶನಿವಾರ 5.7 ಹಾಗೂ ಭಾನುವಾರ 4.9 ಟಿಆರ್​ಪಿ ಬಿಗ್ ಬಾಸ್​ಗೆ ಸಿಕ್ಕಿದೆ. ಕಳೆದ ವಾರಕ್ಕೆ ಹೋಲಿಸಿದರೆ ಟಿಆರ್​ಪಿಯಲ್ಲಿ ಇಳಿಕೆ ಆಗಿದೆ.

ಬಿಗ್ ಬಾಸ್ ಎಫೆಕ್ಟ್: ‘ಸೀತಾ ರಾಮ’ ಧಾರಾವಾಹಿ ಟಿಆರ್​ಪಿಯಲ್ಲಿ ಇಳಿಕೆ; ಇಲ್ಲಿದೆ ವಿವರ
ಸೀತಾ ರಾಮ-ಬಿಗ್ ಬಾಸ್
TV9 Web
| Edited By: |

Updated on: Nov 02, 2023 | 2:06 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 10’ ಆರಂಭ ಆಗಿ ಒಂದು ತಿಂಗಳು ಕಳೆದಿದೆ. ಸ್ಪರ್ಧಿಗಳ ಮಧ್ಯೆ ಟಫ್ ಸ್ಪರ್ಧೆ ಏರ್ಪಟ್ಟಿದೆ. ಮನೆಯಲ್ಲಿ ಮನರಂಜನೆಗಿಂತ ಕಿತ್ತಾಟವೇ ಜೋರಾಗಿದೆ. ಕಳೆದ ಸೀಸನ್​ಗಳಲ್ಲಿ ನಗು ಉಕ್ಕಿಸುವ ಘಟನೆಗಳು ನಡೆಯುತ್ತಿದ್ದವು. ಆದರೆ, ಈ ಬಾರಿ ಆ ರೀತಿ ಆಗುತ್ತಿಲ್ಲ. ದೊಡ್ಮನೆಯ ಯಾವುದೇ ಮೂಲೆಗೆ ಹೋದರೂ ಜಗಳ ಕೇಳುತ್ತದೆ. ಹಾಗಾದರೆ ಬಿಗ್ ಬಾಸ್ (Bigg Boss) ಎಷ್ಟು ಟಿಆರ್​ಪಿ ಪಡೆದಿದೆ? ಉಳಿದ ಧಾರಾವಾಹಿಗಳ ಪರಿಸ್ಥಿತಿ ಏನಾಗಿದೆ ಎಂಬ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್

‘ಬಿಗ್ ಬಾಸ್ ಕನ್ನಡ’ದ ಟಿಆರ್​ಪಿ ಉತ್ತಮವಾಗಿದೆ. ಸೋಮವಾರದಿಂದ ಶುಕ್ರವಾರದವರೆಗೆ 4.8 ಟಿಆರ್​ಪಿಯನ್ನು ಬಿಗ್ ಬಾಸ್ ಪಡೆದಿದೆ. ಶನಿವಾರ 5.7 ಹಾಗೂ ಭಾನುವಾರ 4.9 ಟಿಆರ್​ಪಿ ಬಿಗ್ ಬಾಸ್​ಗೆ ಸಿಕ್ಕಿದೆ. ಕಳೆದ ವಾರಕ್ಕೆ ಹೋಲಿಸಿದರೆ ಟಿಆರ್​ಪಿಯಲ್ಲಿ ಇಳಿಕೆ ಆಗಿದೆ.

ಹೊಸ ಧಾರಾವಾಹಿ ಕಥೆ ಏನು?

‘ಬೃಂದಾವನ’ ಧಾರಾವಾಹಿ ಇತ್ತೀಚೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಂಡಿದೆ. ಈ ಧಾರಾವಾಹಿ ಸಾಧಾರಣ ಟಿಆರ್​ಪಿ ಪಡೆದಿದೆ. ಈ ಧಾರಾವಾಹಿಗೆ 5.2 ಟಿಆರ್​ಪಿ ಸಿಕ್ಕಿದೆ.

ಯಾವ ಧಾರಾವಾಹಿಗೆ ಎಷ್ಟನೇ ಸ್ಥಾನ?

ಕಳೆದ ಕೆಲವು ತಿಂಗಳಿಂದ ಮೊದಲ ಸ್ಥಾನದಲ್ಲಿರುವ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ 43ನೇ ವಾರವೂ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿಗೆ ಎಲ್ಲಾ ಧಾರಾವಾಹಿಗಿಂತ ಹೆಚ್ಚಿನ ಟಿಆರ್​ಪಿ ಸಿಕ್ಕಿದೆ. ಎರಡನೇ ಸ್ಥಾನದಲ್ಲಿ ‘ಗಟ್ಟಿಮೇಳ’ ಧಾರಾವಾಹಿ ಇದೆ. ಈ ಧಾರಾವಾಹಿ ಬಹುತೇಕ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಆದಾಗ್ಯೂ ಇದರ ಟಿಆರ್​ಪಿ ಕಡಿಮೆ ಆಗಿಲ್ಲ.

ಇದನ್ನೂ ಓದಿ: ‘ಒಂದು ವಾರ ಎಲ್ಲಿದ್ರಿ’; ಬಿಗ್ ಬಾಸ್ ಸ್ಪರ್ಧಿಗಳ ಪ್ರಶ್ನೆಗೆ ವರ್ತೂರು ಸಂತೋಷ್ ಉತ್ತರವೇನು?

ಮೂರನೇ ಸ್ಥಾನದಲ್ಲಿ ‘ಸತ್ಯ’, ನಾಲ್ಕನೇ ಸ್ಥಾನದಲ್ಲಿ ‘ಶ್ರೀರಸ್ತು ಶುಭಮಸ್ತು’ ಹಾಗೂ ‘ಅಮೃತಧಾರೆ’ ಧಾರಾವಾಹಿಗಳು ಇವೆ. ಐದನೇ ಸ್ಥಾನದಲ್ಲಿ ‘ಭಾಗ್ಯಲಕ್ಷ್ಮಿ’ ಧಾರಾವಾಹಿ ಇದೆ. ಟಾಪ್​ ಐದರಿಂದ ‘ಸೀತಾ ರಾಮ’ ಧಾರಾವಾಹಿ ಹೊರಗೆ ಉಳಿದಿದೆ. ಇದಕ್ಕೆ ಬಿಗ್ ಬಾಸ್ ಕಾರಣ ಎಂದು ಹೇಳಲಾಗುತ್ತಿದೆ.  ‘ಸೀತಾ ರಾಮ’ ರಾತ್ರಿ 9:30ಕ್ಕೆ ಪ್ರಸಾರ ಕಾಣುತ್ತದೆ. ಬಿಗ್ ಬಾಸ್ ಪ್ರಸಾರದ ಸಮಯ ಕೂಡ ಇದೇ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!