AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ನಾಮಿನೇಟ್ ಆದವರ್ಯಾರು: ಹೊರ ಹೋಗುವುದ್ಯಾರು?

Bigg Boss: ಬಿಗ್​ಬಾಸ್ ಮನೆಯಿಂದ ಹೊರಗೆ ಹೋಗಲು ಈ ವಾರ ನಾಮಿನೇಟ್ ಮಾಡಿದವರು ಯಾರು? ಈ ವಾರ ಸೇಫ್ ಆಗಿದ್ಯಾರು?

ಈ ವಾರ ನಾಮಿನೇಟ್ ಆದವರ್ಯಾರು: ಹೊರ ಹೋಗುವುದ್ಯಾರು?
ಬಿಗ್​ಬಾಸ್
ಮಂಜುನಾಥ ಸಿ.
|

Updated on: Dec 12, 2023 | 11:33 PM

Share

ಬಿಗ್​ಬಾಸ್ (BiggBoss) ಮನೆಯಲ್ಲಿ ಕಳೆದ ವಾರ ನಡೆದ ಜಗಳ-ಕಿತ್ತಾಟದ ಬಿಸಿ ಇನ್ನೂ ಪೂರ್ಣವಾಗಿ ಆರಿಲ್ಲ. ಶಾಲೆಯ ವಾತಾವರಣ ಮರುಸೃಷ್ಟಿ ಮಾಡುವ ಟಾಸ್ಕ್ ನೀಡುವ ಮೂಲಕ ಮನೆಯ ವಾತಾವರಣವನ್ನು ತಿಳಿ ಗೊಳಿಸುವ ಪ್ರಯತ್ನವನ್ನು ಬಿಗ್​ಬಾಸ್ ಮಾಡಿದ್ದಾರಾದರೂ, ಆ ಟಾಸ್ಕ್​ಗೂ ಮುನ್ನ ನಡೆದ ನಾಮಿನೇಷನ್, ಕಳೆದ ವಾರ ನಡೆದ ಜಿದ್ದಾ-ಜಿದ್ದು ಸ್ಪರ್ಧಿಗಳ ಮನದಲ್ಲಿ ಹಾಗೆಯೇ ಇದೆ ಎಂಬುದಕ್ಕೆ ಸಾಕ್ಷಿಯಾಯಿತು. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಸ್ವಲ್ಪ ಕಡಿಮೆ ಮಂದಿ ನಾಮಿನೇಟ್ ಆಗಿದ್ದಾರೆ, ಆದರೆ ಕಳೆದ ವಾರ ಇದ್ದ ಮುಖಗಳು ಈ ವಾರವೂ ಕೆಲವು ಇವೆ.

ಕಳೆದ ಬಾರಿ ನಾಮಿನೇಷನ್​ನಿಂದ ಹೊರಗೆ ಉಳಿದಿದ್ದ ವೈಲ್ಡ್ ಕಾರ್ಡ್ ಎಂಟ್ರಿಗಳಾದ ಅವಿನಾಶ್ ಹಾಗೂ ಪವಿ ಅವರನ್ನು ಈ ಬಾರಿ ನಾಮಿನೇಟ್ ಮಾಡುವ ಅವಕಾಶ ಸ್ಪರ್ಧಿಗಳಿಗೆ ಇತ್ತು. ಬಹುತೇಕರು ವೈಲ್ಡ್ ಕಾರ್ಡ್ ಎಂಟ್ರಿಗಳನ್ನು ಹೊರಗೆ ಕಳಿಸುವ ಪ್ರಯತ್ನ ಮಾಡುತ್ತಾರೆ ಎಂಬ ನಿರೀಕ್ಷೆ ಇತ್ತು, ಅಂತೆಯೇ ಕೆಲವರು ವೈಲ್ಡ್ ಕಾರ್ಡ್ ಎಂಟ್ರಿ ಸದಸ್ಯರ ಹೆಸರು ತೆಗೆದುಕೊಂಡರಾದರೂ ನಾಮಿನೇಟ್ ಆಗಿದ್ದು ಒಬ್ಬರು ಮಾತ್ರ.

ಈ ಬಾರಿ ಸೀಕ್ರೆಟ್ ರೂಂನಲ್ಲಿ ನಾಮಿನೇಷನ್ ನಡೆಯಿತು, ಮೊದಲ ಹೋದ ನಮ್ರತಾ ಆರು ಮಂದಿಯ ಸ್ಪರ್ಧಿಗಳ ಚಿತ್ರವನ್ನು ತೂಗು ಹಾಕಿ ಆರು ಮಂದಿಯನ್ನು ನಾಮಿನೇಟ್ ಮಾಡಿದರು. ನಂತರ ಬಂದವರು ಇಬ್ಬರನ್ನು ನಾಮಿನೇಟ್ ಮಾಡಬೇಕಾಗಿತ್ತು. ನಾಮಿನೇಟ್ ಮಾಡಬೇಕಾದವರ ಚಿತ್ರಗಳನ್ನು ಅದೇ ಗೋಡೆಯ ಮೇಲೆ ತೂಗು ಹಾಕಬೇಕಿತ್ತು. ಅಂತೆಯೇ ಎಲ್ಲ ಸ್ಪರ್ಧಿಗಳು ಬಂದು ತಾವು ನಾಮಿನೇಟ್ ಮಾಡಲು ಇಚ್ಛಿಸಿದವರ ಫೋಟೊಗಳನ್ನು ಗೋಡೆಗೆ ತೂಗು ಹಾಕಿದರು.

ಇದನ್ನೂ ಓದಿ:ಬಿಗ್​ಬಾಸ್ ಕ್ಯಾಪ್ಟನ್ ಮನೆಗೆ ಬೀಗ ಹಾಕಿಸಿದ ಕಿಚ್ಚ ಸುದೀಪ್: ಕಾರಣವೇನು?

ಕಾರ್ತಿಕ್, ವಿನಯ್​ ಹೆಸರನ್ನು ನಾಮಿನೇಟ್ ಮಾಡಿದ್ದು, ವರ್ತೂರು ಅವರು ಕಾರ್ತಿಕ್ ಹಾಗೂ ತನಿಷಾ ಹೆಸರನ್ನು ನಾಮಿನೇಟ್ ಮಾಡಿದ್ದು ಆಶ್ಚರ್ಯಕಾರಿಯಾಗಿತ್ತು. ಸಿರಿ ಅವರು ತುಕಾಲಿಯನ್ನು, ಪವಿಯನ್ನು ಮುಖ್ಯವಾಗಿ ನಾಮಿನೇಟ್ ಮಾಡಿದರು. ಸಂಗೀತಾ ಅವರು ತುಕಾಲಿಯನ್ನು, ನಮ್ರತಾ ಹಾಗೂ ವಿನಯ್​ ಅನ್ನು ನಾಮಿನೇಟ್ ಮಾಡಿದರು ತುಕಾಲಿ ಸಂತು, ಸಂಗೀತಾ, ಡ್ರೋನ್ ಪ್ರತಾಪ್ ಅವರನ್ನು ನಾಮಿನೇಟ್ ಮಾಡಿದರು.

ಕೊನೆಯದಾಗಿ ವಿನಯ್, ಸಂಗೀತಾ, ಪವಿ, ಡ್ರೋನ್ ಪ್ರತಾಪ್, ಮೈಖಲ್, ಸಿರಿ ಅವರುಗಳು ಈ ವಾರ ಮನೆಯಿಂದ ಹೊರಗೆ ಹೋಗಲು ನಾಮಿನೇಟ್ ಆದರು. ಕಳೆದ ವಾರ ನಾಮಿನೇಟ್ ಆಗಿದ್ದ ತುಕಾಲಿ, ನಮ್ರತಾ, ಕಾರ್ತಿಕ್ ಅವರುಗಳು ಸೇಫ್ ಆಗಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ