AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಶಿರ್ ಎಲಿಮಿನೇಷನ್​ಗೆ ಕಾರಣ ಆಗಿದ್ದು ಐಶ್ವರ್ಯಾ? ಮೂಡಿದೆ ಅನುಮಾನ

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಶಿಶಿರ್ ಹೊರಗುಳಿದ ನಂತರ ಐಶ್ವರ್ಯಾ ಮತ್ತು ಭವ್ಯಾ ನಡುವೆ ಜಗಳ ಶುರುವಾಗಿದೆ. ಐಶ್ವರ್ಯಾ ಅವರೇ ಶಿಶಿರ್ ಅವರನ್ನು ಟಾರ್ಗೆಟ್ ಮಾಡಿ ಹೊರಕ್ಕೆ ಕಳುಹಿಸಿದ್ದಾರೆ ಎಂದು ಭವ್ಯಾ ಆರೋಪಿಸಿದ್ದಾರೆ. ಶಿಶಿರ್ ನ ನಿರ್ಗಮನದಿಂದ ಐಶ್ವರ್ಯಾ ತುಂಬಾ ದುಃಖಿತರಾಗಿದ್ದಾರೆ ಮತ್ತು ಮನೆಯ ಸದಸ್ಯರ ಮೇಲೆ ಕೋಪವನ್ನು ವ್ಯಕ್ತಪಡಿಸುತ್ತಿದ್ದಾರೆ.

ಶಿಶಿರ್ ಎಲಿಮಿನೇಷನ್​ಗೆ ಕಾರಣ ಆಗಿದ್ದು ಐಶ್ವರ್ಯಾ? ಮೂಡಿದೆ ಅನುಮಾನ
ಐಶ್ವರ್ಯಾ-ಶಿಶಿರ್
TV9 Web
| Edited By: |

Updated on: Dec 17, 2024 | 7:02 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ ಕೊನೆಯ ಹಂತಕ್ಕೆ ಬಂದಿದೆ. ಇನ್ನು ಕೆಲವೇ ವಾರಗಳಲ್ಲಿ ಶೋ ಪೂರ್ಣಗೊಳ್ಳಲಿದೆ. ಸದ್ಯ ಬಿಗ್ ಬಾಸ್ ಮನೆಯಲ್ಲಿ ಸಂಖ್ಯೆ 10ಕ್ಕೆ ಇಳಿಕೆ ಆಗಿದೆ. ಸ್ಪರ್ಧಿಗಳ ಮಧ್ಯೆ ಆಟ ಜೋರಾಗಿದೆ. ಕಳೆದ ವಾರ ಶಿಶಿರ್ ದೊಡ್ಮನೆಯಿಂದ ಔಟ್ ಆಗಿದ್ದರು. ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗಲು ಐಶ್ವರ್ಯಾ ಅವರು ಕಾರಣವಾ? ಇಂಥದ್ದೊಂದು ಪ್ರಶ್ನೆ ದೊಡ್ಮನೆಯಲ್ಲಿ ಮೂಡಿದೆ. ಇದಕ್ಕೆ ಭವ್ಯಾ ಆಡಿದ ಮಾತೇ ಕಾರಣ.

ಶಿಶಿರ್ ಹಾಗೂ ಐಶ್ವರ್ಯಾ ತುಂಬಾನೇ ಆಪ್ತವಾಗಿದ್ದರು. ಇಬ್ಬರ ಮಧ್ಯೆ  ಒಳ್ಳೆಯ ಬಾಂಡಿಂಗ್ ಬೆಳೆದಿತ್ತು. ಈಗ ಶಿಶಿರ್ ಎಲಿಮಿನೇಟ್ ಆಗುವ ಮೂಲಕ ಅವರು ಸಾಕಷ್ಟು ಬೇಸರಗೊಂಡಿದ್ದಾರೆ. ಅವರು ತಮ್ಮ ಕೋಪವನ್ನು ಇಡೀ ಮನೆಯವರ ಮೇಲೆಲ್ಲ ತೋರಿಸಿದ್ದಾರೆ. ಶಿಶಿರ್​ನ ನಾಮಿನೇಟ್ ಮಾಡಿದವರ ಮೇಲೆ, ತಮ್ಮ ಬಗ್ಗೆ ಹೇಳಿಕೊಂಡವರ ಬಗ್ಗೆ ಕೂಗಾಡಿದ್ದಾರೆ.

ಶಿಶಿರ್ ಹೊರ ಹೋಗುತ್ತಿದ್ದಂತೆ ಐಶ್ವರ್ಯಾ ಅವರು ಜೋರಾಗಿ ಅರಚೋಕೆ ಆರಂಭಿಸಿದರು. ‘ಶಿಶಿರ್ ಮೇಲೆ ಇಲ್ಲದಿರೋ ಅಪವಾದ ಎಲ್ಲ ಹಾಕಿದ್ದೀಯಾ. ನೀನೇ ಟಾರ್ಗೆಟ್ ಮಾಡಿದ್ದು’ ಎಂದು ಐಶ್ವರ್ಯಾ ಅವರು ಭವ್ಯಾ ಎದುರು ಬಂದು ಹೇಳಿಕೊಂಡರು. ಇದಕ್ಕೆ ಸಿಟ್ಟಾದ ಭವ್ಯಾ, ‘ನೀನೆ ಶಿಶಿರ್​ನ ಟಾರ್ಗೆಟ್ ಮಾಡಿ ಗೇಟ್ ಎದುರು ತಂದು ನಿಲ್ಲಿಸಿದ್ದು’ ಎಂದು ಭವ್ಯಾ ಆರೋಪಿಸಿದರು.

ಭವ್ಯಾ ಗೌಡ ಈ ರೀತಿ ಹೇಳುವುದಕ್ಕೂ ಒಂದು ಕಾರಣ ಇದೆ. ಮನೆಯಲ್ಲಿ ಟಾರ್ಗೆಟ್ ಮಾಡಿ ನಾಮಿನೇಷನ್ ಮಾಡಬೇಕು ಎಂಬ ವಾಕ್ಯವನ್ನು ಐಶ್ವರ್ಯಾ ಹೇಳಿದ್ದರು. ಅದರಂತೆ ಐಶ್ವರ್ಯಾ, ಮೋಕ್ಷಿತಾ ಅವರು ತ್ರಿವಿಕ್ರಂ ಹಾಗೂ ಭವ್ಯಾ ಅವರನ್ನು ಟಾರ್ಗೆಟ್ ಮಾಡಿ ನಾಮಿನೇಟ್ ಮಾಡಿದ್ದರು. ಈ ಕಾರಣಕ್ಕೆ ಭವ್ಯಾ ಟಾಂಟ್ ಹೊಡೆದಿದ್ದಾರೆ.

ಶಿಶಿರ್ ಇಲ್ಲದೆ ಐಶ್ವರ್ಯಾ ಕಂಗಾಲಾಗಿದ್ದಾರೆ. ಏನು ಮಾಡಬೇಕು ಎಂಬುದು ಅವರಿಗೆ ತಿಳಿಯುತ್ತಿಲ್ಲ. ಪದೇ ಪದೇ ಅವರು ಇಡೀ ಮನೆಯ ಸದಸ್ಯರ ಮೇಲೆ ಕೂಗಾಟ ನಡೆಸುತ್ತಾ ಇದ್ದಾರೆ. ಅವರು ಈ ಮೊದಲು ಎಲಿಮಿನೇಷನ್​ನಿಂದ ಬಚಾವ್ ಆಗಿದ್ದರು. ಆ ಬಳಿಕ ಅವರು ಸಿಟ್ಟಾಗಿದ್ದಾರೆ.

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!
ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಮನೆ ಎಲ್ಲ ದೋಚಿದ ಖದೀಮರು!