AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಮೆಟ್ಟಿಲಲ್ಲಿ ಎಡವಿದ ಭವ್ಯಾ, ಬಿಗ್​ಬಾಸ್ ಮನೆಯಿಂದ ಹೊರಕ್ಕೆ

Bigg Boss Kannada season 11: ಬಿಗ್​ಬಾಸ್ ಕನ್ನಡ ಸೀಸನ್ 11 ರ ಫಿನಾಲೆ ನಡೆಯುತ್ತಿದೆ. ಶನಿವಾರ ಮತ್ತು ಭಾನುವಾರ ಫಿನಾಲೆ ನಡೆಯಲಿದ್ದು, ಶನಿವಾರದ ಎಪಿಸೋಡ್​ನಲ್ಲಿ ಇಬ್ಬರು ಎಲಿಮಿನೇಟ್ ಆಗಲಿದ್ದಾರೆ. ಅವರಲ್ಲಿ ಭವ್ಯಾ ಗೌಡ ಸಹ ಒಬ್ಬರು. ಆದರೆ ಬಿಗ್​ಬಾಸ್ ಕಪ್​ಗೆ ಹತ್ತಿರವಾಗಿದ್ದಾಗ

ಕೊನೆಯ ಮೆಟ್ಟಿಲಲ್ಲಿ ಎಡವಿದ ಭವ್ಯಾ, ಬಿಗ್​ಬಾಸ್ ಮನೆಯಿಂದ ಹೊರಕ್ಕೆ
Bhavya Gowda
ಮಂಜುನಾಥ ಸಿ.
|

Updated on:Jan 25, 2025 | 10:33 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಫಿನಾಲೆ ಚಾಲ್ತಿಯಲ್ಲಿದೆ. ಶನಿವಾರದ ಫಿನಾಲೆ ಎಪಿಸೋಡ್​ಗೆ ಅದ್ಧೂರಿಯಾಗಿ ವೇದಿಕೆಗೆ ಎಂಟ್ರಿ ಕೊಟ್ಟ ಸುದೀಪ್ ತಮ್ಮ ಎಂದಿನ ಜೋಷ್​ನಲ್ಲಿ ಫಿನಾಲೆ ನಡೆಸುತ್ತಿದ್ದಾರೆ. ಫಿನಾಲೆ ವಾರದಲ್ಲಿ ಆರು ಮಂದಿ ಮನೆಯಲ್ಲಿದ್ದರು. ರಜತ್, ಭವ್ಯಾ ಗೌಡ, ಉಗ್ರಂ ಮಂಜು, ಮೋಕ್ಷಿತಾ ಮತ್ತು ತ್ರಿವಿಕ್ರಮ್ ಅವರುಗಳು ಕೊನೆಯಲ್ಲಿ ಉಳಿದುಕೊಂಡಿದ್ದರು. ಇವರಲ್ಲಿ ಇಬ್ಬರು ಶನಿವಾರ ಎಲಿಮಿನೇಟ್ ಆದರೆ ಉಳಿದ ನಾಲ್ವರಲ್ಲಿ ಭಾನುವಾರ ಹೊರ ಹೋಗುವುದು ಯಾರು ಎಂಬುದು ಪ್ರಶ್ನೆಯಾಗಿತ್ತು.

ಶನಿವಾರದ ಎಪಿಸೋಡ್​ನಲ್ಲಿ ಭವ್ಯಾ ಗೌಡ ಬಿಗ್​ಬಾಸ್ ಮನೆಯಿಂದ ಹೊರ ಬಿದ್ದಿದ್ದಾರೆ. ಫಿನಾಲೆ ವರೆಗೆ ಅದ್ಭುತವಾಗಿ ಆಡುತ್ತಾ ಬಂದಿದ್ದ ಭವ್ಯಾ ಗೌಡ ಟ್ರೋಫಿ ಹಿಡಿಯಲು ಇನ್ನೊಂದು ಮೆಟ್ಟಿಲಷ್ಟೆ ಇರುವಾಗ ಬಿಗ್​ಬಾಸ್ ಮನೆಯಿಂದ ಹೊರಬಿದ್ದಿದ್ದಾರೆ. ಶನಿವಾರದ ಫಿನಾಲೆ ಎಪಿಸೋಡ್​ನಲ್ಲಿ ಭವ್ಯಾ ಗೌಡ ಎಲಿಮಿನೇಟ್ ಆಗಿದ್ದಾರೆ.

ಆರಂಭದಿಂದಲೂ ಉತ್ತಮವಾಗಿ ಆಡಿಕೊಂಡು ಬಂದಿದ್ದ ಭವ್ಯಾ, ತ್ರಿವಿಕ್ರಮ್ ಜೊತೆಗೆ ಆಪ್ತವಾಗಿದ್ದರು. ಆದರೆ ಕೆಲವು ಸಂದರ್ಭದಲ್ಲಿ ಅದೇ ಅವರಿಗೆ ಮುಳುವಾಯ್ತು. ಕೊನೆ-ಕೊನೆಗೆ ತ್ರಿವಿಕ್ರಮ್ ಜೊತೆಗೂ ಜಗಳ ಮಾಡಿಕೊಂಡರು. ಒಂಟಿಯಾಗಿ ಆಡಲು ಮುಂದಾದರು. ಮೋಕ್ಷಿತಾ ಜೊತೆಗೂ ಕೈ ಜೋಡಿಸಿದರು. ಒಟ್ಟಾರೆಯಾಗಿ ಒಳ್ಳೆಯ ಹೋರಾಟವನ್ನೇ ನೀಡಿದ ಭವ್ಯಾ ಬಿಗ್​ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ.

ಆರು ಮಂದಿ ಫಿನಾಲೆ ಸ್ಪರ್ಧಿಗಳಲ್ಲಿ ಮೊದಲಿಗರಾಗಿ ಭವ್ಯಾ ಗೌಡ ಹೊರಗೆ ಬಂದಿದ್ದಾರೆ. ಅವರಿಗೆ 64 ಲಕ್ಷಕ್ಕೂ ಹೆಚ್ಚು ಮತಗಳು ಲಭಿಸಿವೆ. ಫಿನಾಲೆ ರೇಸ್​ನಲ್ಲಿದ್ದ ಆರು ಮಂದಿಯಲ್ಲಿ ಭವ್ಯಾ ಅವರಿಗೆ ಅತ್ಯಂತ ಕಡಿಮೆ ಮತಗಳು ಬಂದಿವೆ ಹಾಗಾಗಿ ಭವ್ಯಾ ಗೌಡ ಎವಿಕ್ಟ್ ಆಗಿದ್ದಾರೆ. ಭವ್ಯಾ ಎವಿಕ್ಷನ್​ ಇಂದಾಗಿ ಈಗ ಮನೆಯಲ್ಲಿ ರಜತ್, ಮೋಕ್ಷಿತಾ, ಉಗ್ರಂ ಮಂಜು, ಹನುಮಂತು ಮತ್ತು ತ್ರಿವಿಕ್ರಮ್ ಅವರು ಮಾತ್ರವೇ ಉಳಿದಂತಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Sat, 25 January 25

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?