AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಯ ಮೆಟ್ಟಿಲಲ್ಲಿ ಎಡವಿದ ಭವ್ಯಾ, ಬಿಗ್​ಬಾಸ್ ಮನೆಯಿಂದ ಹೊರಕ್ಕೆ

Bigg Boss Kannada season 11: ಬಿಗ್​ಬಾಸ್ ಕನ್ನಡ ಸೀಸನ್ 11 ರ ಫಿನಾಲೆ ನಡೆಯುತ್ತಿದೆ. ಶನಿವಾರ ಮತ್ತು ಭಾನುವಾರ ಫಿನಾಲೆ ನಡೆಯಲಿದ್ದು, ಶನಿವಾರದ ಎಪಿಸೋಡ್​ನಲ್ಲಿ ಇಬ್ಬರು ಎಲಿಮಿನೇಟ್ ಆಗಲಿದ್ದಾರೆ. ಅವರಲ್ಲಿ ಭವ್ಯಾ ಗೌಡ ಸಹ ಒಬ್ಬರು. ಆದರೆ ಬಿಗ್​ಬಾಸ್ ಕಪ್​ಗೆ ಹತ್ತಿರವಾಗಿದ್ದಾಗ

ಕೊನೆಯ ಮೆಟ್ಟಿಲಲ್ಲಿ ಎಡವಿದ ಭವ್ಯಾ, ಬಿಗ್​ಬಾಸ್ ಮನೆಯಿಂದ ಹೊರಕ್ಕೆ
Bhavya Gowda
ಮಂಜುನಾಥ ಸಿ.
|

Updated on:Jan 25, 2025 | 10:33 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಫಿನಾಲೆ ಚಾಲ್ತಿಯಲ್ಲಿದೆ. ಶನಿವಾರದ ಫಿನಾಲೆ ಎಪಿಸೋಡ್​ಗೆ ಅದ್ಧೂರಿಯಾಗಿ ವೇದಿಕೆಗೆ ಎಂಟ್ರಿ ಕೊಟ್ಟ ಸುದೀಪ್ ತಮ್ಮ ಎಂದಿನ ಜೋಷ್​ನಲ್ಲಿ ಫಿನಾಲೆ ನಡೆಸುತ್ತಿದ್ದಾರೆ. ಫಿನಾಲೆ ವಾರದಲ್ಲಿ ಆರು ಮಂದಿ ಮನೆಯಲ್ಲಿದ್ದರು. ರಜತ್, ಭವ್ಯಾ ಗೌಡ, ಉಗ್ರಂ ಮಂಜು, ಮೋಕ್ಷಿತಾ ಮತ್ತು ತ್ರಿವಿಕ್ರಮ್ ಅವರುಗಳು ಕೊನೆಯಲ್ಲಿ ಉಳಿದುಕೊಂಡಿದ್ದರು. ಇವರಲ್ಲಿ ಇಬ್ಬರು ಶನಿವಾರ ಎಲಿಮಿನೇಟ್ ಆದರೆ ಉಳಿದ ನಾಲ್ವರಲ್ಲಿ ಭಾನುವಾರ ಹೊರ ಹೋಗುವುದು ಯಾರು ಎಂಬುದು ಪ್ರಶ್ನೆಯಾಗಿತ್ತು.

ಶನಿವಾರದ ಎಪಿಸೋಡ್​ನಲ್ಲಿ ಭವ್ಯಾ ಗೌಡ ಬಿಗ್​ಬಾಸ್ ಮನೆಯಿಂದ ಹೊರ ಬಿದ್ದಿದ್ದಾರೆ. ಫಿನಾಲೆ ವರೆಗೆ ಅದ್ಭುತವಾಗಿ ಆಡುತ್ತಾ ಬಂದಿದ್ದ ಭವ್ಯಾ ಗೌಡ ಟ್ರೋಫಿ ಹಿಡಿಯಲು ಇನ್ನೊಂದು ಮೆಟ್ಟಿಲಷ್ಟೆ ಇರುವಾಗ ಬಿಗ್​ಬಾಸ್ ಮನೆಯಿಂದ ಹೊರಬಿದ್ದಿದ್ದಾರೆ. ಶನಿವಾರದ ಫಿನಾಲೆ ಎಪಿಸೋಡ್​ನಲ್ಲಿ ಭವ್ಯಾ ಗೌಡ ಎಲಿಮಿನೇಟ್ ಆಗಿದ್ದಾರೆ.

ಆರಂಭದಿಂದಲೂ ಉತ್ತಮವಾಗಿ ಆಡಿಕೊಂಡು ಬಂದಿದ್ದ ಭವ್ಯಾ, ತ್ರಿವಿಕ್ರಮ್ ಜೊತೆಗೆ ಆಪ್ತವಾಗಿದ್ದರು. ಆದರೆ ಕೆಲವು ಸಂದರ್ಭದಲ್ಲಿ ಅದೇ ಅವರಿಗೆ ಮುಳುವಾಯ್ತು. ಕೊನೆ-ಕೊನೆಗೆ ತ್ರಿವಿಕ್ರಮ್ ಜೊತೆಗೂ ಜಗಳ ಮಾಡಿಕೊಂಡರು. ಒಂಟಿಯಾಗಿ ಆಡಲು ಮುಂದಾದರು. ಮೋಕ್ಷಿತಾ ಜೊತೆಗೂ ಕೈ ಜೋಡಿಸಿದರು. ಒಟ್ಟಾರೆಯಾಗಿ ಒಳ್ಳೆಯ ಹೋರಾಟವನ್ನೇ ನೀಡಿದ ಭವ್ಯಾ ಬಿಗ್​ಬಾಸ್ ಮನೆಯಿಂದ ಹೊರಗೆ ಬಂದಿದ್ದಾರೆ.

ಆರು ಮಂದಿ ಫಿನಾಲೆ ಸ್ಪರ್ಧಿಗಳಲ್ಲಿ ಮೊದಲಿಗರಾಗಿ ಭವ್ಯಾ ಗೌಡ ಹೊರಗೆ ಬಂದಿದ್ದಾರೆ. ಅವರಿಗೆ 64 ಲಕ್ಷಕ್ಕೂ ಹೆಚ್ಚು ಮತಗಳು ಲಭಿಸಿವೆ. ಫಿನಾಲೆ ರೇಸ್​ನಲ್ಲಿದ್ದ ಆರು ಮಂದಿಯಲ್ಲಿ ಭವ್ಯಾ ಅವರಿಗೆ ಅತ್ಯಂತ ಕಡಿಮೆ ಮತಗಳು ಬಂದಿವೆ ಹಾಗಾಗಿ ಭವ್ಯಾ ಗೌಡ ಎವಿಕ್ಟ್ ಆಗಿದ್ದಾರೆ. ಭವ್ಯಾ ಎವಿಕ್ಷನ್​ ಇಂದಾಗಿ ಈಗ ಮನೆಯಲ್ಲಿ ರಜತ್, ಮೋಕ್ಷಿತಾ, ಉಗ್ರಂ ಮಂಜು, ಹನುಮಂತು ಮತ್ತು ತ್ರಿವಿಕ್ರಮ್ ಅವರು ಮಾತ್ರವೇ ಉಳಿದಂತಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:28 pm, Sat, 25 January 25

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ