AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಭಾವನೆಗೆ ಹರ್ಟ್​ ಮಾಡಬೇಡಿ: ಧ್ಯಾನದ ಬಗ್ಗೆ ಅನುಮಾನ ಎಂದಿದ್ದಕ್ಕೆ ಚೈತ್ರಾ ಕುಂದಾಪುರ ಗರಂ

ಜಗಳ ಬಿಟ್ಟರೆ ಬಿಗ್​ ಬಾಸ್​ನಲ್ಲಿ ಬೇರೆ ಏನೂ ಇಲ್ಲವೇ? ಮಾತು ಮಾತಿಗೂ ಚೈತ್ರಾ ಕುಂದಾಪುರ ಕಿರಿಕ್​ ಮಾಡಿಕೊಳ್ಳುತ್ತಿದ್ದಾರೆ. ನರಕವಾಸಿಗಳಾದ ಮಾನಸಾ ಮತ್ತು ಚೈತ್ರಾ ನಡುವೆ ಧ್ಯಾನದ ವಿಚಾರಕ್ಕೆ ಜಗಳ ಆಗಿದೆ. ಮೊದಲ ವಾರದಲ್ಲಿ ಕೆಲವು ಸ್ಪರ್ಧಿಗಳ ಸದ್ದು ಜೋರಾಗಿದೆ. ಜಗಳ ಮಾಡದೇ ಇರುವವರು ಬಿಗ್​ ಬಾಸ್​ ಮನೆಯಲ್ಲಿ ಹೈಲೈಟ್ ಆಗುತ್ತಲೇ ಇಲ್ಲ.

ನಮ್ಮ ಭಾವನೆಗೆ ಹರ್ಟ್​ ಮಾಡಬೇಡಿ: ಧ್ಯಾನದ ಬಗ್ಗೆ ಅನುಮಾನ ಎಂದಿದ್ದಕ್ಕೆ ಚೈತ್ರಾ ಕುಂದಾಪುರ ಗರಂ
ಚೈತ್ರಾ ಕುಂದಾಪುರ
ಮದನ್​ ಕುಮಾರ್​
|

Updated on: Oct 01, 2024 | 10:48 PM

Share

ಹೊರ ಜಗತ್ತಿನಲ್ಲಿ ಭಾರಿ ವಿವಾದ ಮಾಡಿಕೊಂಡಿದ್ದ ಚೈತ್ರಾ ಕುಂದಾಪುರ ಅವರು ಬಿಗ್​ ಬಾಸ್​ ಮನೆಯಲ್ಲೂ ವಿವಾದ ಮುಂದುವರಿಸಿದ್ದಾರೆ. ಅವರಿಗೆ ತಕ್ಕಂತೆಯೇ ಬಿಗ್​ ಬಾಸ್​ ಮನೆಯ ವಾತಾವರಣ ಇದೆ. ಈ ಸೀಸನ್​ನಲ್ಲಿ ಬಹುತೇಕರು ಅಗ್ರೆಸಿವ್ ಆಗಿವೇ ‘ಬಿಗ್​ ಬಾಸ್​ ಕನ್ನಡ ಸೀಸನ್ 11’ ಆಟ ಶುರು ಮಾಡಿದ್ದಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ಇಲ್ಲಿದೆ. ಒಂದು ಸಣ್ಣ ವಿಚಾರ ಕೂಡ ಜಗಳಕ್ಕೆ ಕಾರಣ ಆಗಿದೆ. ಧ್ಯಾನ ಮತ್ತು ಜಪದ ಬಗ್ಗೆ ಮಾತನಾಡುತ್ತಾ ಇರುವಾಗ ಮಾನಸಾ ಮತ್ತು ಚೈತ್ರಾ ಕುಂದಾಪುರ ಅವರು ಜಗಳ ಮಾಡಿಕೊಂಡಿದ್ದಾರೆ. ನಿಜಕ್ಕೂ ಈ ಜಗಳ ಬೇಕಿತ್ತಾ ಎಂಬ ಪ್ರಶ್ನೆ ವೀಕ್ಷಕರ ಮನಸ್ಸಿನಲ್ಲಿ ಮೂಡುವಂತಾಗಿದೆ.

ನಡೆದಿದ್ದು ಇಷ್ಟೇ.. ಚೈತ್ರಾ ಕುಂದಾಪುರ ಅವರ ಜೊತೆ ಮಾನಸಾ ಮಾತನಾಡುವಾಗ ‘ನನಗೆ ಧ್ಯಾನ ಮಾಡುವವರ ಬಗ್ಗೆ ಯಾವಾಗಲೂ ಅನುಮಾನ ಇದೆ. ಧ್ಯಾನ ಮಾಡುತ್ತಾರಾ ಅಥವಾ ನಿದ್ರೆ ಮಾಡುತ್ತಾರಾ ಗೊತ್ತಾಗುವುದಿಲ್ಲ’ ಎಂದು ಮಾನಸಾ ಹೇಳಿದರು. ಆಗ ಧ್ಯಾನ ಬೇರೆ, ಜಪ ಬೇರೆ ಎಂದು ಚೈತ್ರಾ ಹೇಳಿದರು. ಅಷ್ಟೇ.. ಜಗಳ ಶುರುವಾಯಿತು.

ಧ್ಯಾನ ಮತ್ತು ಜಪದ ನಡುವೆ ತಮಗೆ ವ್ಯತ್ಯಾಸ ಗೊತ್ತಿಲ್ಲ ಎಂದು ಮಾನಸಾ ಹೇಳಿದರು. ‘ವಿಷಯ ಗೊತ್ತಿಲ್ಲದೇ ಮಾತನಾಡಬೇಡಿ. ನಮ್ಮ ಭಾವನೆಗೆ ಹರ್ಟ್​ ಮಾಡಬೇಡಿ’ ಎಂದು ಚೈತ್ರಾ ಕುಂದಾಪುರ ಅವರು ಕೂಗಾಡಿದರು. ‘ಮಾತನಾಡುವುದು ನನ್ನಿಷ್ಟ. ಎಲ್ಲರೂ ಒಂದೇ ರೀತಿ ಇರೋಕೆ ಆಗಲ್ಲ’ ಎಂದು ಮಾನಸಾ ಕೂಡ ಧ್ವನಿ ಏರಿಸಿದರು. ಇಷ್ಟು ಚಿಕ್ಕ ವಿಚಾರಕ್ಕೆ ಜಗಳ ಆಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಇರುವವರಿಗೆ ಈ ತಂತ್ರ ಚೆನ್ನಾಗಿ ಅರ್ಥವಾದಂತಿದೆ. ಸುಮ್ಮನೆ ಕುಳಿತಿದ್ದರೆ ತಮ್ಮ ಮೇಲೆ ಕ್ಯಾಮೆರಾ ಫೋಕಸ್​ ಆಗುವುದಿಲ್ಲ. ಏನಾದರೂ ಗಲಾಟೆ ಮಾಡಿಕೊಂಡರೆ ಎಪಿಸೋಡ್​ನಲ್ಲಿ ಜಾಗ ಸಿಗುತ್ತದೆ. ಹಾಗಾಗಿ ಸಣ್ಣ ಸಣ್ಣ ವಿಚಾರಕ್ಕೂ ಕಿರಿಕ್ ಮಾಡಿಕೊಳ್ಳಲಾಗುತ್ತಿದೆ. ಅದನ್ನು ಹೊರತುಪಡಿಸಿ ಬಿಗ್​ ಬಾಸ್​ನಲ್ಲಿ ಏನೂ ಇಲ್ಲವೇನೋ ಎಂಬ ಭಾವನೆ ಮೂಡುವಂತಾಗಿದೆ.

ಇದನ್ನೂ ಓದಿ: ‘ಚೈತ್ರಾಗೆ ನೀನು ರನ್ನ, ಚಿನ್ನ, ಚಂದ್ರ ಅಂದ್ರೆ ಮುಗೀತು’: ಇದು ಗೋಲ್ಡ್ ಸುರೇಶ್ ಲೆಕ್ಕಾಚಾರ

ಶಿಶಿರ್​, ಯಮುನಾ ಶ್ರೀನಿಧಿ, ಭವ್ಯಾ ಗೌಡ, ಗೌತಮಿ ಜಾಧವ್, ಉಗ್ರಂ ಮಂಜು, ತ್ರಿವಿಕ್ರಮ್, ಲಾಯರ್​ ಜಗದೀಶ್​, ಚೈತ್ರಾ ಕುಂದಾಪುರ, ಮಾನಸಾ, ಧನರಾಜ್, ಗೋಲ್ಡ್​ ಸುರೇಶ್, ಅನುಷಾ ರೈ, ಐಶ್ವರ್ಯಾ, ಮೋಕ್ಷಿತಾ ಪೈ, ರಂಜಿತ್, ಹಂಸಾ, ಧರ್ಮ ಕೀರ್ತಿರಾಜ್​ ಅವರು ಬಿಗ್​ ಬಾಸ್​ನಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು