AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBK 11: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಸ್ಪರ್ಧಿಗಳ ಫೋಟೋ ಲೀಕ್

Bigg Boss Kannada Season 11 Contestant List: ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆಗಮನಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್ 29ರಂದು ಬಿಗ್ ಬಾಸ್​ಗೆ ಅದ್ದೂರಿ ಓಪನಿಂಗ್ ಸಿಗಲಿದೆ. ಈ ಬಾರಿಯೂ 17 ಸ್ಪರ್ಧಿಗಳು ಮನೆ ಸೇರುವ ನಿರೀಕ್ಷೆ ಇದೆ. ಅದಕ್ಕೂ ಮೊದಲು ಸ್ಪರ್ಧಿಗಳ ಮುಖವನ್ನು ಬ್ಲರ್ ಆಗಿ ತೋರಿಸಲಾಗಿದೆ.

BBK 11: ‘ಬಿಗ್ ಬಾಸ್ ಕನ್ನಡ ಸೀಸನ್ 11’ ಸ್ಪರ್ಧಿಗಳ ಫೋಟೋ ಲೀಕ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Sep 26, 2024 | 12:50 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರಂಭಕ್ಕೆ ಇನ್ನು ಉಳಿದಿರೋದು ಮೂರು ದಿನಗಳು ಮಾತ್ರ. ಈ ಬಾರಿ ಯಾವೆಲ್ಲ ಕ್ಷೇತ್ರದ, ಯಾವೆಲ್ಲಾ ಸ್ಪರ್ಧಿಗಳು ಭಾಗವಹಿಸುತ್ತಾರೆ ಎನ್ನುವ ಕುತೂಹಲ ಮೂಡಿದೆ. ಹೀಗಿರುವಾಗಲೇ ಸ್ಪರ್ಧಿಗಳ ಫೋಟೋಗಳು ಲೀಕ್ ಆಗಿವೆ. ಇದನ್ನು ಮಾಡಿದ್ದು ಬೇರಾರೂ ಅಲ್ಲ, ಸ್ವತಃ ಕಲರ್ಸ್​ ಕನ್ನಡದವರೇ. ಅವರು ಕೆಲವು ಸ್ಪರ್ಧಿಗಳ ಬ್ಲರ್ ಫೋಟೋಗಳನ್ನು ಹಂಚಿಕೊಂಡಿದ್ದು, ವೀಕ್ಷಕರ ತಲೆಗೆ ಹುಳಬಿಟ್ಟಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಆರಂಭ ಸೆಪ್ಟೆಂಬರ್ 29ರಂದು ನಡೆಯಲಿದೆ. ಸೆಪ್ಟೆಂಬರ್ 28ರಂದು ಕೆಲವು ಸ್ಪರ್ಧಿಗಳ ಹೆಸರನ್ನು ರಿವೀಲ್ ಮಾಡಲು ಕಲರ್ಸ್ ಕನ್ನಡ ನಿರ್ಧರಿಸಿದೆ. ‘ರಾಜಾ ರಾಣಿ’ ಶೋ ಫಿನಾಲೆಯಲ್ಲಿ ಕೆಲವು ಕಂಟೆಸ್ಟ್​ಗಳನ್ನು ರಿವೀಲ್ ಮಾಡಲಾಗುತ್ತಿದೆ. ಈ ರೀತಿ ಮಾಡುತ್ತಿರುವುದು ಇದೇ ಮೊದಲು. ಅದಕ್ಕೂ ಮೊದಲು ಪ್ರೋಮೋ ರಿಲೀಸ್ ಆಗಿದ್ದು, ಸ್ಪರ್ಧಿಗಳ ಮುಖವನ್ನು ತೋರಿಸಲಾಗಿದೆ.

ಕಲರ್ಸ್ ಕನ್ನಡದಲ್ಲಿ ‘ಬಿಗ್ ಬಾಸ್​’ಗೆ ಸಂಬಂಧಿಸಿದ ಹೊಸ ಪ್ರೋಮೋ ರಿಲೀಸ್ ಆಗಿದೆ. ಇದರಲ್ಲಿ ಬರೋ ಒಂದು ಕ್ಲಿಪ್​ನಲ್ಲಿ  ಕೆಲವು ಸ್ಪರ್ಧಿಗಳ ಫೋಟೋಗಳನ್ನು ತೋರಿಸಲಾಗಿದೆ. ಎಲ್ಲರನ್ನೂ ಬ್ಲರ್ ಮಾಡಲಾಗಿದೆ. ಇದು ವೀಕ್ಷಕರ ತಲೆಗೆ ಹುಳಬಿಟ್ಟಂತೆ ಆಗಿದೆ. ಹೀಗಾಗಿ ಇವರು ಯಾರು ಎಂದು ಊಹಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಇದನ್ನೂ ಓದಿ:  ಈ ಬಾರಿ ಬಿಗ್ ಬಾಸ್​ನಲ್ಲಿ ಎರಡು ಮನೆ; ಅಪ್​ಡೇಟ್​ ಕೊಟ್ಟ ಸುದೀಪ್ 

ಈ ಬಾರಿ ಬಿಗ್ ಬಾಸ್​​ ವಿಶೇಷವಾಗಿರಲಿದೆ. 11ನೇ ಸೀಸನ್ ಎಂಬ ಕಾರಣಕ್ಕೆ ಅದ್ದೂರಿತನ ಹೆಚ್ಚಿಸಲು ನಿರ್ಧರಿಸಲಾಗಿದೆ. ‘ನರಕ ಹಾಗೂ ಸ್ವರ್ಗ’ ಕಾನ್ಸೆಪ್ಟ್​ನಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 11’ ಮೂಡಿ ಬರುತ್ತಿದೆ. ಕಿಚ್ಚ ಸುದೀಪ್ ಅವರ ಸಾರಥ್ಯ ಇರಲಿದೆ.

ಸ್ಪರ್ಧಿಗಳ ಮಧ್ಯೆ ಟಫ್ ಸ್ಪರ್ಧೆ

ಕಳೆದ ವರ್ಷ ‘ಬಿಗ್ ಬಾಸ್’ ಸಾಕಷ್ಟು ಚರ್ಚೆ ಹುಟ್ಟುಹಾಕಿತ್ತು. ಸ್ಪರ್ಧಿಗಳ ಮಧ್ಯೆ ಸಾಕಷ್ಟು ಟಫ್ ಕಾಂಪಿಟೇಷನ್ ಇತ್ತು. ಹಾಸ್ಯಕ್ಕೆ ಜಾಗ ಇಲ್ಲದೆ, ಎಲ್ಲರೂ ಕಿತ್ತಾಡಿಕೊಂಡಿದ್ದರು. ಈ ಬಾರಿ ಹಾಗಾಗಿದರಲಿ ಎಂಬುದು ಎಲ್ಲರ ಕೋರಿಕೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:44 pm, Thu, 26 September 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ