AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಧನರಾಜ್ ಎಲಿಮಿನೇಟ್ ಆಗೋದು ಪಕ್ಕಾ? ಇಲ್ಲಿದೆ ಲೆಕ್ಕಾಚಾರ

ಬಿಗ್ ಬಾಸ್ ಕನ್ನಡ ಸೀಸನ್ 11 ರ ಆರನೇ ವಾರದಲ್ಲಿ ಧನರಾಜ್ ನಾಮಿನೇಷನ್ ಆಗಿದ್ದು, ಅವರ ಎಲಿಮಿನೇಷನ್ ಬಗ್ಗೆ ಚರ್ಚೆಗಳು ಜೋರಾಗಿದೆ. ಕ್ಯಾಪ್ಟನ್ ಹನುಮಂತ ಅವರು ಧನರಾಜ್ ಅವರನ್ನು ನಾಮಿನೇಟ್ ಮಾಡಿದ್ದು, ಇದರಿಂದ ಧನರಾಜ್ ಭಯಭೀತರಾಗಿದ್ದಾರೆ.

ಈ ವಾರ ಧನರಾಜ್ ಎಲಿಮಿನೇಟ್ ಆಗೋದು ಪಕ್ಕಾ? ಇಲ್ಲಿದೆ ಲೆಕ್ಕಾಚಾರ
ಧನರಾಜ್
ರಾಜೇಶ್ ದುಗ್ಗುಮನೆ
|

Updated on: Nov 06, 2024 | 8:33 AM

Share

‘ಬಿಗ್ ಬಾಸ್ ಕನ್ನಡ ಸೀಸನ್​ 11’ರಲ್ಲಿ ಈಗಾಗಲೇ ಐದು ವಾರಗಳು ಪೂರ್ಣಗೊಂಡಿವೆ. ಈ ವಾರ ಆರನೇ ವಾರದ ಎಲಿಮಿನೇಷನ್ ನಡೆಯಲಿದೆ. ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಇರುವ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳೇ. ಹೀಗಾಗಿ, ಯಾರು ಎಲಿಮಿನೇಟ್ ಆಗುತ್ತಾರೆ ಯಾರು ಉಳಿದುಕೊಳ್ಳುತ್ತಾರೆ ಎಂದು ಹೇಳೋದು ಕಷ್ಟ. ಹೀಗಿರುವಾಗಲೇ ಈ ವಾರ ಧನರಾಜ್ ಎಲಿಮಿನೇಟ್ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಸ್ವತಃ ಧನರಾಜ್ ಅವರು ಈ ಬಗ್ಗೆ ಆತಂಕ ಹೊರಹಾಕಿದ್ದಾರೆ.

ಈ ವಾರ ವಿವಿಧ ಟಾಸ್ಕ್​ಗಳ ಮೂಲಕ ನಾಮಿನೇಷನ್ ಮಾಡುವ ಅವಕಾಶ ನೀಡಲಾಗಿತ್ತು. ಟಾಸ್ಕ್ ಮಧ್ಯೆ ಕ್ಯಾಪ್ಟನ್ ಹನುಮಂತ ಅವರಿಗೆ ಮೂವರನ್ನು ನಾಮಿನೇಟ್ ಮಾಡುವ ಅವಕಾಶ ಸಿಕ್ಕಿತ್ತು. ಚೆನ್ನಾಗಿ ಆಡುತ್ತಿಲ್ಲ ಎನ್ನುವ ಕಾರಣ ನೀಡಿ ಮೋಕ್ಷಿತಾ ಅವರನ್ನು ಹನುಮಂತ ನಾಮಿನೇಟ್ ಮಾಡಿದರು. ಸುರೇಶ್ ಅವರು ನಿಮಿಷಕ್ಕೊಂದು ಮಾತನಾಡುತ್ತಿದ್ದಾರೆ ಎನ್ನುವ ಕಾರಣ ನೀಡಿ ನಾಮಿನೇಷನ್ ಮಾಡಿದರು. ಒಳ್ಳೆಯ ಪರ್ಫಾರ್ಮೆನ್ಸ್ ನೀಡಿಲ್ಲ ಎನ್ನುವ ಕಾರಣ ನೀಡಿ ಧನರಾಜ್ ಅವರನ್ನು ಹನುಮಂತ ನಾಮಿನೇಟ್ ಮಾಡಿದರು.

ಹನುಮಂತ ಹಾಗೂ ಧನರಾಜ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ, ಹನುಮಂತ ಅವರು ಗೆಳೆಯನನ್ನೇ ನಾಮಿನೇಟ್ ಮಾಡಿದ್ದು ಅನೇಕರಿಗೆ ಅಚ್ಚರಿ ತಂದಿದೆ. ಇದು ಧನರಾಜ್​​ಗೂ ಶಾಕಿಂಗ್ ಎನಿಸಿದೆ. ಈ ಬಗ್ಗೆ ಹನುಮಂತ ಬಳಿ ಪ್ರಶ್ನೆ ಮಾಡಿದ್ದಾರೆ. ‘ನಾನು ಹೊರ ಹೋದರೆ’ ಎಂದು ಧನರಾಜ್ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ಜಿಮ್ ಮಾಡಿದ್ರೆ ಸತ್ತಮೇಲೆ ಬೇರೆ ಕಡೆ ಸುಡ್ತಾರಾ’; ಹನುಮಂತನ ನೀತಿ ಪಾಠ

‘ನಾನು ನಾಮಿನೇಟ್ ಮಾಡಿದ ಬಳಿಕ ನೀನು ಹೊರಗೆ ಹೋಗ್ತೀಯಾ? ಹೊರಗೆ ಜನ ಇರ್ತಾರೆ ಅವರು ವೋಟ್ ಮಾಡ್ತಾರೆ’ ಎಂದರು ಹನುಮಂತ. ಕಳೆದ ವಾರದ ಒಂದು ಘಟನೆ ಅಲ್ಲಿದ್ದವರಿಗೆ ನೆನಪಾಯಿತು. ಕಳೆದ ವಾರ ಮಾನಸಾ ಅವರು ನಾಮಿನೇಟ್ ಆದಾಗ ಹನುಮಂತ ಅವರು ಇದೇ ರೀತಿಯ ಮಾತನ್ನು ಹೇಳಿದ್ದರು. ‘ನಾಮಿನೇಟ್ ಆದ ಮಾತ್ರಕ್ಕೆ ನೀವು ಹೊರ ಹೋಗಲ್ಲ. ನೀವು ಉಳಿದುಕೊಳ್ಳುತ್ತಿರಿ’ ಎಂದು ಮಾನಸಾಗೆ ಹೇಳಿದ್ದರು ಹನುಮಂತ. ಆದರೆ, ಮಾನಸಾ ಎಲಿಮಿನೇಟ್ ಆದರು. ಈಗ ಧನರಾಜ್​ಗೂ ಹನುಮಂತ ಇದೇ ಮಾತನ್ನು ಹೇಳಿದ್ದು, ಅವರಿಗೆ ಭಯ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ