AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಧನರಾಜ್ ಎಲಿಮಿನೇಟ್ ಆಗೋದು ಪಕ್ಕಾ? ಇಲ್ಲಿದೆ ಲೆಕ್ಕಾಚಾರ

ಬಿಗ್ ಬಾಸ್ ಕನ್ನಡ ಸೀಸನ್ 11 ರ ಆರನೇ ವಾರದಲ್ಲಿ ಧನರಾಜ್ ನಾಮಿನೇಷನ್ ಆಗಿದ್ದು, ಅವರ ಎಲಿಮಿನೇಷನ್ ಬಗ್ಗೆ ಚರ್ಚೆಗಳು ಜೋರಾಗಿದೆ. ಕ್ಯಾಪ್ಟನ್ ಹನುಮಂತ ಅವರು ಧನರಾಜ್ ಅವರನ್ನು ನಾಮಿನೇಟ್ ಮಾಡಿದ್ದು, ಇದರಿಂದ ಧನರಾಜ್ ಭಯಭೀತರಾಗಿದ್ದಾರೆ.

ಈ ವಾರ ಧನರಾಜ್ ಎಲಿಮಿನೇಟ್ ಆಗೋದು ಪಕ್ಕಾ? ಇಲ್ಲಿದೆ ಲೆಕ್ಕಾಚಾರ
ಧನರಾಜ್
ರಾಜೇಶ್ ದುಗ್ಗುಮನೆ
|

Updated on: Nov 06, 2024 | 8:33 AM

Share

‘ಬಿಗ್ ಬಾಸ್ ಕನ್ನಡ ಸೀಸನ್​ 11’ರಲ್ಲಿ ಈಗಾಗಲೇ ಐದು ವಾರಗಳು ಪೂರ್ಣಗೊಂಡಿವೆ. ಈ ವಾರ ಆರನೇ ವಾರದ ಎಲಿಮಿನೇಷನ್ ನಡೆಯಲಿದೆ. ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಇರುವ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳೇ. ಹೀಗಾಗಿ, ಯಾರು ಎಲಿಮಿನೇಟ್ ಆಗುತ್ತಾರೆ ಯಾರು ಉಳಿದುಕೊಳ್ಳುತ್ತಾರೆ ಎಂದು ಹೇಳೋದು ಕಷ್ಟ. ಹೀಗಿರುವಾಗಲೇ ಈ ವಾರ ಧನರಾಜ್ ಎಲಿಮಿನೇಟ್ ಆಗುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಸ್ವತಃ ಧನರಾಜ್ ಅವರು ಈ ಬಗ್ಗೆ ಆತಂಕ ಹೊರಹಾಕಿದ್ದಾರೆ.

ಈ ವಾರ ವಿವಿಧ ಟಾಸ್ಕ್​ಗಳ ಮೂಲಕ ನಾಮಿನೇಷನ್ ಮಾಡುವ ಅವಕಾಶ ನೀಡಲಾಗಿತ್ತು. ಟಾಸ್ಕ್ ಮಧ್ಯೆ ಕ್ಯಾಪ್ಟನ್ ಹನುಮಂತ ಅವರಿಗೆ ಮೂವರನ್ನು ನಾಮಿನೇಟ್ ಮಾಡುವ ಅವಕಾಶ ಸಿಕ್ಕಿತ್ತು. ಚೆನ್ನಾಗಿ ಆಡುತ್ತಿಲ್ಲ ಎನ್ನುವ ಕಾರಣ ನೀಡಿ ಮೋಕ್ಷಿತಾ ಅವರನ್ನು ಹನುಮಂತ ನಾಮಿನೇಟ್ ಮಾಡಿದರು. ಸುರೇಶ್ ಅವರು ನಿಮಿಷಕ್ಕೊಂದು ಮಾತನಾಡುತ್ತಿದ್ದಾರೆ ಎನ್ನುವ ಕಾರಣ ನೀಡಿ ನಾಮಿನೇಷನ್ ಮಾಡಿದರು. ಒಳ್ಳೆಯ ಪರ್ಫಾರ್ಮೆನ್ಸ್ ನೀಡಿಲ್ಲ ಎನ್ನುವ ಕಾರಣ ನೀಡಿ ಧನರಾಜ್ ಅವರನ್ನು ಹನುಮಂತ ನಾಮಿನೇಟ್ ಮಾಡಿದರು.

ಹನುಮಂತ ಹಾಗೂ ಧನರಾಜ್ ಮಧ್ಯೆ ಒಳ್ಳೆಯ ಗೆಳೆತನ ಇದೆ. ಹೀಗಾಗಿ, ಹನುಮಂತ ಅವರು ಗೆಳೆಯನನ್ನೇ ನಾಮಿನೇಟ್ ಮಾಡಿದ್ದು ಅನೇಕರಿಗೆ ಅಚ್ಚರಿ ತಂದಿದೆ. ಇದು ಧನರಾಜ್​​ಗೂ ಶಾಕಿಂಗ್ ಎನಿಸಿದೆ. ಈ ಬಗ್ಗೆ ಹನುಮಂತ ಬಳಿ ಪ್ರಶ್ನೆ ಮಾಡಿದ್ದಾರೆ. ‘ನಾನು ಹೊರ ಹೋದರೆ’ ಎಂದು ಧನರಾಜ್ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ಜಿಮ್ ಮಾಡಿದ್ರೆ ಸತ್ತಮೇಲೆ ಬೇರೆ ಕಡೆ ಸುಡ್ತಾರಾ’; ಹನುಮಂತನ ನೀತಿ ಪಾಠ

‘ನಾನು ನಾಮಿನೇಟ್ ಮಾಡಿದ ಬಳಿಕ ನೀನು ಹೊರಗೆ ಹೋಗ್ತೀಯಾ? ಹೊರಗೆ ಜನ ಇರ್ತಾರೆ ಅವರು ವೋಟ್ ಮಾಡ್ತಾರೆ’ ಎಂದರು ಹನುಮಂತ. ಕಳೆದ ವಾರದ ಒಂದು ಘಟನೆ ಅಲ್ಲಿದ್ದವರಿಗೆ ನೆನಪಾಯಿತು. ಕಳೆದ ವಾರ ಮಾನಸಾ ಅವರು ನಾಮಿನೇಟ್ ಆದಾಗ ಹನುಮಂತ ಅವರು ಇದೇ ರೀತಿಯ ಮಾತನ್ನು ಹೇಳಿದ್ದರು. ‘ನಾಮಿನೇಟ್ ಆದ ಮಾತ್ರಕ್ಕೆ ನೀವು ಹೊರ ಹೋಗಲ್ಲ. ನೀವು ಉಳಿದುಕೊಳ್ಳುತ್ತಿರಿ’ ಎಂದು ಮಾನಸಾಗೆ ಹೇಳಿದ್ದರು ಹನುಮಂತ. ಆದರೆ, ಮಾನಸಾ ಎಲಿಮಿನೇಟ್ ಆದರು. ಈಗ ಧನರಾಜ್​ಗೂ ಹನುಮಂತ ಇದೇ ಮಾತನ್ನು ಹೇಳಿದ್ದು, ಅವರಿಗೆ ಭಯ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ