AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುತೇಕ ಘಟಾನುಘಟಿಗಳು ನಾಮಿನೇಟ್; ಈ ವಾರ ಡಬಲ್ ಎಲಿಮಿನೇಷನ್?

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ವಾರ ಡಬಲ್ ಎಲಿಮಿನೇಷನ್ ಆಗುವ ಸಾಧ್ಯತೆ ಹೆಚ್ಚಿದೆ. ಹಿಂದಿನ ಸೀಸನ್‌ಗಳಲ್ಲಿ ಡಬಲ್ ಎಲಿಮಿನೇಷನ್ ಪದ್ಧತಿ ಇತ್ತು. ಈ ವಾರ ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್ ಮೊದಲಾದವರು ನಾಮಿನೇಟ್ ಆಗಿದ್ದಾರೆ. ಈ ವಾರದ ಡಬಲ್ ಎಲಿಮಿನೇಷನ್ ನಡೆದರೆ ಯಾರೆಲ್ಲ ಹೊರಗೆ ಹೋಗುತ್ತಾರೆ ಎಂಬುದು ಕುತೂಹಲಕಾರಿ ವಿಷಯ ಆಗಿದೆ.

ಬಹುತೇಕ ಘಟಾನುಘಟಿಗಳು ನಾಮಿನೇಟ್; ಈ ವಾರ ಡಬಲ್ ಎಲಿಮಿನೇಷನ್?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Dec 11, 2024 | 9:05 AM

Share

ಕನ್ನಡ ಬಿಗ್ ಬಾಸ್​ನ ಪ್ರತಿ ಸೀಸನ್​ನಲ್ಲಿ ಒಮ್ಮೆಯಾದರೂ ಡಬಲ್ ಎಲಿಮಿನೇಷನ್ ನಡೆಸಲಾಗುತ್ತದೆ. ಈ ರೀತಿ ಡಬಲ್ ಎಲಿಮಿನೇಷನ್ ನಡೆಸುವಾಗ ಅದರ ಹಿಂದಿನ ವಾರ ಯಾವುದೇ ಎಲಿಮಿನೇಷನ್ ಪ್ರಕ್ರಿಯೆ ನಡೆಯೋದಿಲ್ಲ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಪದ್ಧತಿ. ಕಳೆದ ವಾರ ಯಾವುದೇ ಕಾರಣ ನೀಡದೆ ಎಲಿಮಿನೇಷನ್ ನಡೆಸಿಲ್ಲ. ಇದು ಸಾಕಷ್ಟು ಅನುಮಾನ ಮೂಡಿಸಿದೆ. ಈ ವಾರ ಡಬಲ್ ಎಲಿಮಿನೇಷನ್ ನಡೆಯೋದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಭಿನ್ನವಾಗಿ ನಾಮಿನೇಷನ್ ನಡೆಸಲಾಗಿದೆ. ಕಳೆದ ಸೀಸನ್​ನ ಸ್ಪರ್ಧಿಗಳು ಬಂದು ನಾಮಿನೇಷನ್ ಪ್ರಕ್ರಿಯೆ ನಡೆಸಿಕೊಟ್ಟಿದ್ದಾರೆ. ಕಾರ್ತಿಕ್ ಮಹೇಶ್, ನಮ್ರತಾ ಗೌಡ, ವರ್ತೂರ್ ಸಂತೋಷ್, ತುಕಾಲಿ ಸಂತೋಷ್ ಮೊದಲಾದವರು ದೊಡ್ಮನೆ ಒಳಗೆ ಬಂದಿದ್ದರು. ಅವರುಗಳ ಫನ್ ಮಾಡುವುದರ ಜೊತೆಗೆ, ಅವರ ನೇತೃತ್ವದಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ.

ಬಿಗ್ ಬಾಸ್ ಮನೆಯಲ್ಲಿರುವ 11 ಸ್ಪರ್ಧಿಗಳ ಪೈಕಿ ಈ ವಾರ ಬಹುತೇಕ ಘಟಾನುಘಟಿಗಳು ನಾಮಿನೇಟ್ ಆಗಿದ್ದಾರೆ. ತ್ರಿವಿಕ್ರಮ್, ಭವ್ಯಾ ಗೌಡ, ಧನರಾಜ್​ ಆಚಾರ್, ಶಿಶಿರ್, ರಜತ್ ಕಿಶನ್, ಹನುಮಂತ, ಚೈತ್ರಾ ಹಾಗೂ ಮೋಕ್ಷಿತಾ ನಾಮಿನೇಟ್ ಲಿಸ್ಟ್​ನಲ್ಲಿ ಇದ್ದಾರೆ. ಈ ಪೈಕಿ ಯಾರು ಎಲಿಮಿನೇಟ್ ಆಗುತ್ತಾರೆ ಎನ್ನುವ ಕುತೂಹಲ ಮೂಡಿದೆ. ಧನರಾಜ್, ಶಿಶಿರ್ ಹಾಗೂ ಚೈತ್ರಾಗೆ ಹೆಚ್ಚಿನ ಭಯ ಇದೆ.

ಈ ವಾರ ಡಬಲ್ ಎಲಿಮಿನೇಷನ್ ನಡೆಯಬಹುದೇ ಎನ್ನುವ ಪ್ರಶ್ನೆಯೂ ಕಾಡಿದೆ. ಸದ್ಯ ದೊಡ್ಮನೆಯಲ್ಲಿ 12 ಸ್ಪರ್ಧಿಗಳು ಇದ್ದಾರೆ. ಎಲಿಮಿನೇಷನ್ ನಡೆದರೆ ದೊಡ್ಮನೆಯ ಸ್ಪರ್ಧಿಗಳ ಸಂಖ್ಯೆ 10ಕ್ಕೆ ಇಳಿಕೆ ಆಗಲಿದೆ. ಆ ಬಳಿಕ ಆಟ ಮತ್ತಷ್ಟು ದುರ್ಗಮ ಆಗಲಿದೆ.

ಇದನ್ನೂ ಓದಿ: ಸ್ವಿಮ್ಮಿಂಗ್​ಪೂಲ್​ನಲ್ಲಿ ಬಿದ್ದ ಐಶ್ವರ್ಯಾನ ರಕ್ಷಿಸಿದ ತ್ರಿವಿಕ್ರಂ; ಉರಿದು ಹೋದ ಭವ್ಯಾ ಎಕ್ಸ್​ಪ್ರೆಷನ್ ನೋಡಿ

ಐಶ್ವರ್ಯಾ ಅವರದ್ದು ಅದೃಷ್ಟ ಎಂದೇ ಹೇಳಬಹುದು. ಎರಡು ವಾರಗಳ ಹಿಂದೆ ಅವರು ಎಲಿಮಿನೇಟ್ ಆಗೋದು ಬಹುತೇಕ ಖಚಿತ ಆಗಿತ್ತು. ಆದರೆ, ಅವರು ಜಸ್ಟ್ ಮಿಸ್ ಆದರು. ಶೋಭಾ ಶೆಟ್ಟಿ ಹೊರಕ್ಕೆ ಹೋಗಿ ಇವರನ್ನು ಉಳಿಸಿದರು. ಕಳೆದ ವಾರ ಯಾವುದೇ ಎಲಿಮಿನೇಷನ್ ನಡೆದಿಲ್ಲ. ಈ ವಾರ ಅವರು ನಾಮಿನೇಟ್ ಆಗಿಯೇ ಇಲ್ಲ. ಹೀಗಾಗಿ, ಅವರು ಮೂರು ವಾರ ಹೆಚ್ಚುವರಿಯಾಗು ಬಿಗ್ ಬಾಸ್ ಮನೆಯಲ್ಲಿ ಮುಂದುವರಿಯೋದು ಖಚಿತವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:57 am, Wed, 11 December 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ