AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಫಿನಾಲೆಗೆ ಇನ್ನೆಷ್ಟು ದಿನ ಬಾಕಿ ಇದೆ? ಮಾಹಿತಿ ಕೊಟ್ಟ ಸುದೀಪ್

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ಚಾಲ್ತಿಯಲ್ಲಿದೆ. ಮನೆಯಲ್ಲಿ ಈಗ 9 ಮಂದಿ ಸ್ಪರ್ಧಿಗಳಿದ್ದಾರೆ. ಈ ವಾರ ಎಲಿಮಿನೇಷನ್ ಸಹ ಆಗುತ್ತಿಲ್ಲ. ಬಿಗ್​ಬಾಸ್ ಪ್ರಾರಂಭವಾಗಿ ಈಗಾಗಲೇ 97 ದಿನಗಳಾಗಿವೆ. ಬಿಗ್​ಬಾಸ್ ಕನ್ನಡ 11 ಫಿನಾಲೆ ಯಾವಾಗ ನಡೆಯಲಿದೆ? ಇಲ್ಲಿದೆ ಮಾಹಿತಿ.

ಬಿಗ್​ಬಾಸ್ ಫಿನಾಲೆಗೆ ಇನ್ನೆಷ್ಟು ದಿನ ಬಾಕಿ ಇದೆ? ಮಾಹಿತಿ ಕೊಟ್ಟ ಸುದೀಪ್
Bigg Boss Kannada 11
Follow us
ಮಂಜುನಾಥ ಸಿ.
|

Updated on: Jan 05, 2025 | 8:01 AM

ಬಿಗ್​ಬಾಸ್ ಕನ್ನಡ ಸೀಸನ್ 11 ಚಾಲ್ತಿಯಲ್ಲಿದೆ. ಸ್ಪರ್ಧಿಗಳು ಉತ್ತಮವಾಗಿ ಆಡುತ್ತಿದ್ದಾರೆ. ಗೆಲ್ಲುವ ಭರವಸೆ ಮೂಡಿಸಿದ್ದ ಕೆಲವರು ಈಗಾಗಲೇ ಮನೆಗೆ ಹೋಗಿದ್ದಾರೆ. ಗೆಲ್ಲುವುದೇ ಇಲ್ಲ ಎಂದುಕೊಂಡಿದ್ದವರು ಕೆಲವರು ಇಲ್ಲಿವರೆಗೆ ಬಂದಿದ್ದಾರೆ. ಬಿಗ್​ಬಾಸ್ ಕನ್ನಡ ಸೀಸನ್ 11, 2024 ರ ಸೆಪ್ಟೆಂಬರ್ 29 ರಂದು ಆರಂಭವಾಗಿತ್ತು. ಶೋ ಆರಂಭವಾಗಿ ಮೂರು ತಿಂಗಳಾಗಿದೆ. ಸರಿಯಾಗಿ ಹೇಳಬೇಕೆಂದರೆ 97 ದಿನಗಳು ಕಳೆದಿವೆ. ಇನ್ನೂ ಒಂಬತ್ತು ಮಂದಿ ಸ್ಪರ್ಧಿಗಳು ಮನೆಯಲ್ಲಿದ್ದಾರೆ. ಈ ಸೀಸನ್​ನ ಫಿನಾಲೆ ಎಂದು ನಡೆಯಲಿದೆ ಎಂಬ ಪ್ರಶ್ನೆ ಎಲ್ಲರಿಗೂ ಇತ್ತು. ಇದಕ್ಕೆ ಈಗ ಸ್ವತಃ ಸುದೀಪ್ ಉತ್ತರ ನೀಡಿದ್ದಾರೆ.

ಶನಿವಾರದ ಎಪಿಸೋಡ್​ನಲ್ಲಿ ಈ ಬಗ್ಗೆ ಮಾತನಾಡಿದ ಸುದೀಪ್, ಬಿಗ್​ಬಾಸ್ ಫಿನಾಲೆಗೆ ಇನ್ನೆಷ್ಟು ವಾರ ಬಾಕಿ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸುದೀಪ್ ಹೇಳಿರುವಂತೆ ಇನ್ನು ಫಿನಾಲೆಗೆ ಇನ್ನು ಮೂರು ವಾರ ಇದೆಯಂತೆ. ಅಂದರೆ ಇನ್ನು 21 ದಿನದಲ್ಲಿ ಶೋ ಫಿನಾಲೆ ನಡೆದು ಈ ಬಾರಿ ವಿನ್ನರ್ ಯಾರು ಎಂಬುದು ಖಾತ್ರಿ ಆಗಲಿದೆ. ಶೋ ಅಂತ್ಯವಾಗಲಿದೆ, ಮಾತ್ರವಲ್ಲದೆ ಬಿಗ್​ಬಾಸ್ ಜೊತೆ ಸುದೀಪ್​ ಅವರ ಪಯಣವೂ ಅಂತ್ಯವಾಗಲಿದೆ.

ಬಿಗ್​ಬಾಸ್ ಮನೆಯಲ್ಲಿ ಇನ್ನೂ ಒಂಬತ್ತು ಮಂದಿ ಇದ್ದಾರೆ. ಈ ವಾರ ಯಾವುದೇ ಎಲಿಮಿನೇಷನ್ ಇರುವುದಿಲ್ಲ ಏಕೆಂದರೆ ಈ ವಾರ ನಾಮಿನೇಷನ್ ಸಹ ಆಗಿಲ್ಲ. ಫಿನಾಲೆ ವಾರಕ್ಕೆ ಸಾಮಾನ್ಯವಾಗಿ ಐದು ಜನ ಬರುತ್ತಾರೆ. ಹಾಗಾಗಿ ಮುಂದಿನ ವಾರ ಇಬ್ಬರನ್ನು ಎಲಿಮಿನೇಟ್ ಮಾಡುವ ಸಾಧ್ಯತೆ ಇದೆ. ಅದರ ಮುಂದಿನ ವಾರ ಒಬ್ಬರನ್ನು ಎಲಿಮಿನೇಟ್ ಮಾಡಿ ಕೊನೆಯ ವಾರಕ್ಕೆ ಆರು ಅಥವಾ ಐದು ಮಂದಿಯನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ:ಬಿಗ್​ಬಾಸ್ ಕನ್ನಡ: ಮೊದಲ ವಾರ ಎಲಿಮಿನೇಟ್ ಆಗಿದ್ದು ಇವರೇನಾ?

ಬಿಗ್​ಬಾಸ್ ಸೀಸನ್ 11 ಹಲವು ಏರಿಳಿತಗಳನ್ನು ಕಂಡಿದೆ. ಶೋ ಪ್ರಾರಂಭವಾದ ಒಂದೆರಡು ವಾರ ವೀಕ್ಷಕರಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಲಾಯರ್ ಜಗದೀಶ್​ರ ಅವಾಚ್ಯ ಶಬ್ದಗಳು, ಪದೇ ಪದೇ ಜಗಳಗಳು ಬೇಸರ ಮೂಡಿಸಿದ್ದವು. ಇದರ ಜೊತೆಗೆ ಬಿಗ್​ಬಾಸ್ ಮನೆಯಲ್ಲಿ ಮಾಡಲಾಗಿದ್ದ ಸ್ವರ್ಗ-ನರಕ ಕಾನ್ಸೆಪ್ಟ್ ಸಹ ತೀವ್ರ ಟೀಕೆಗೆ ಗುರಿಯಾಗಿತ್ತು. ಸ್ಪರ್ಧಿಗಳನ್ನು ಜೈಲಿನಲ್ಲಿ ಇರಿಸುವ ಮೂಲಕ ಮಾನವ ಹಕ್ಕುಗಳ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಪೊಲೀಸರು ಸಹ ಬಿಗ್​ಬಾಸ್ ಸೆಟ್​ಗೆ ಭೇಟಿ ನೀಡಿ ವೀಕ್ಷಣೆ ನಡೆಸಿದ್ದರು. ಮಾನವ ಹಕ್ಕು ಆಯೋಗವೂ ಸಹ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿತ್ತು.

ಹಲವು ಅಡೆ-ತಡೆಗಳ ಬಳಿಕ ಇದೀಗ ಇನ್ನು ಮೂರು ವಾರದಲ್ಲಿ ಬಿಗ್​ಬಾಸ್ 11 ರ ಫಿನಾಲೆ ನಡೆಯಲಿದೆ. ಸುದೀಪ್ ಅವರು ಇನ್ನು ಮುಂದೆ ಬಿಗ್​ಬಾಸ್ ನಿರೂಪಣೆ ಮಾಡುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ಅವರಿಗೆ ಬಿಗ್​ಬಾಸ್ ಹೇಗೆ ಸೆಂಡಾಫ್ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು
ವಿವೇಕ, ವಿವೇಚನೆ ಮಾರಿಕೊಂಡಿರುವ ಪಾಕಿಸ್ತಾನಕ್ಕೆ ಬುದ್ಧಿ ಬಾರದು