AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಹೋಗೋ ಎಲ್ಲ ಸ್ಪರ್ಧಿಗಳ ಹೆಸರು ಲೀಕ್, ಯಾರು ಸ್ವರ್ಗಕ್ಕೆ? ಯಾರು ನರಕಕ್ಕೆ?

ಬಿಗ್​ಬಾಸ್ ಕನ್ನಡ ಸೀಸನ್ 11 ಇಂದು (ಭಾನುವಾರ) ಸಂಜೆ ಆರಂಭವಾಗಲಿದೆ. ನಿನ್ನೆ ನಾಲ್ಕು ಸ್ಪರ್ಧಿಗಳ ಹೆಸರು ಘೋಷಣೆ ಮಾಡಲಾಗಿದೆ. ಇಂದು ಸಂಜೆ ಇನ್ನುಳಿದ ಸ್ಪರ್ಧಿಗಳ ಹೆಸರು ಘೋಷಣೆ ಆಗಲಿದೆ. ಆದರೆ ಅದಕ್ಕೆ ಮುಂಚೆಯೇ ಸ್ಪರ್ಧಿಗಳ ಹೆಸರು ಲೀಕ್ ಆಗಿದೆ.

ಬಿಗ್​ಬಾಸ್ ಹೋಗೋ ಎಲ್ಲ ಸ್ಪರ್ಧಿಗಳ ಹೆಸರು ಲೀಕ್, ಯಾರು ಸ್ವರ್ಗಕ್ಕೆ? ಯಾರು ನರಕಕ್ಕೆ?
ಮಂಜುನಾಥ ಸಿ.
|

Updated on: Sep 29, 2024 | 11:29 AM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಇಂದು ಸಂಜೆ ಆರು ಗಂಟೆಯಿಂದ ಪ್ರಾರಂಭ ಆಗಲಿದೆ. ನಿನ್ನೆ ಕಲರ್ಸ್ ವಾಹಿನಿಯಲ್ಲಿ ನಡೆದ ರಾಜಾ ರಾಣಿ ರೀಲೋಡೆಡ್ ಫಿನಾಲೆ ಕಾರ್ಯಕ್ರಮದಲ್ಲಿ ನಾಲ್ಕು ಜನ ಸ್ಪರ್ಧಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಆ ನಾಲ್ವರಲ್ಲಿ ಯಾರು ಸ್ವರ್ಗಕ್ಕೆ ಹೋಗಲಿದ್ದಾರೆ ಯಾರು ನರಕಕ್ಕೆ ಹೋಗಲಿದ್ದಾರೆ ಎಂಬ ಕುತೂಹಲ ಉಂಟಾಗಿದೆ. ಸದ್ಯಕ್ಕೆ ನಾಲ್ಕು ಮಂದಿ ಸ್ಪರ್ಧಿಗಳ ಹೆಸರಷ್ಟೆ ಘೋಷಣೆ ಆಗಿದ್ದು ಇನ್ನೂ ಸುಮಾರು 12 ರಿಂದ 14 ಮಂದಿ ಸ್ಪರ್ಧಿಗಳ ಹೆಸರು ಇಂದು ಸಂಜೆ ಘೋಷಣೆ ಆಗಲಿದೆ. ಇಂದು ಸಂಜೆ ಸುದೀಪ್ ಘೋಷಣೆ ಮಾಡಲಿರುವ ಸ್ಪರ್ಧಿಗಳ ಹೆಸರುಗಳು ಮುಂಚಿತವಾಗಿ ಲೀಕ್ ಆಗಿದ್ದು, ಅವರಲ್ಲಿ ಯಾರು ಸ್ವರ್ಗಕ್ಕೆ ಹೋಗಲಿದ್ದಾರೆ ಯಾರು ನರಕಕ್ಕೆ ಹೋಗಲಿದ್ದಾರೆ ಎಂಬ ಮಾಹಿತಿ ಸಹ ಹೊರಬಿದ್ದಿದೆ.

ನಿನ್ನೆ ನಡೆದ ರಾಜಾ ರಾಣಿ ಫಿನಾಲೆಯಲ್ಲಿ ಗೌತಮಿ ಜಾಧವ್, ಲಾಯರ್ ಜಗದೀಶ್, ಚೈತ್ರಾ ಕುಂದಾಪುರ ಹಾಗೂ ಗೋಲ್ಡ್ ಸುರೇಶ್ ಅವರ ಹೆಸರುಗಳು ಘೋಷಣೆಯಾಗಿದೆ. ಇವರಲ್ಲಿ ಲಾಯರ್ ಜಗದೀಶ್ ಮತ್ತು ಗೌತಮಿ ಜಾಧವ್ ಅವರುಗಳು ಸ್ವರ್ಗಕ್ಕೆ ಹೋಗಲಿದ್ದು, ಚೈತ್ರಾ ಕುಂದಾಪುರ ಮತ್ತು ಗೋಲ್ಡ್ ಸುರೇಶ್ ಅವರುಗಳು ನರಕಕ್ಕೆ ಹೋಗಲಿದ್ದಾರಂತೆ.

ಇದನ್ನೂ ಓದಿ: ಬಿಗ್ ಬಾಸ್​ಗೆ ಈಗಷ್ಟೇ ಎಂಟ್ರಿ ಪಡೆದ ಲಾಯರ್​ ಜಗದೀಶ್​ನ ಹೊರಹಾಕಲು ನಡೆದಿದೆ ಚರ್ಚೆ

ಸೋಷಿಯಲ್ ಮೀಡಿಯಾದಿಂದ ಜನಪ್ರಿಯವಾದ ಆ ಬಳಿಕ ಗಿಚ್ಚಿ ಗಿಲಿ-ಗಿಲಿಗೂ ಹೋಗಿ ಬಂದಿರುವ ಧನರಾಜ್ ಅವರು ಬಿಗ್​ಬಾಸ್ ಮನೆಗೆ ಹೋಗಲಿದ್ದಾರಂತೆ. ನಟರಾದ ಕೀರ್ತಿ ಧರ್ಮರಾಜ್ ಸಹ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ. ‘ನವಗ್ರಹ’ ಸಿನಿಮಾದಲ್ಲಿ ಇವರು ದರ್ಶನ್ ಜೊತೆ ನಟಿಸಿದ್ದರು. ನಟ ಉಗ್ರಂ ಮಂಜು ಸಹ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ. ನಟಿಯರಾದ ಯಮುನಾ, ಭವ್ಯ, ಐಶ್ವರ್ಯಾ, ತ್ರಿವಿಕ್ರಮ್ ಮತ್ತು ಹಂಸ ಅವರುಗಳು ಸಹ ಬಿಗ್​ಬಾಸ್ ಮನೆಯಲ್ಲಿದ್ದು, ಇವರೆಲ್ಲರೂ ಸ್ವರ್ಗದಲ್ಲಿ ಇರಲಿದ್ದಾರಂತೆ.

ನಟ ಶಿಶಿರ ನಟಿ ಮೋಕ್ಷಿತ ಹಾಗೂ ಕಳೆದ ಬಾರಿ ಬಿಗ್​ಬಾಸ್​ಗೆ ಹೋಗಿದ್ದ ತುಕಾಲಿ ಸಂತೋಷ್ ಅವರ ಪತ್ನಿ ತುಕಾಲಿ ಮಾನಸ ಸಹ ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಇವರ ಜೊತೆಗೆ ರಂಜಿತಾ ಸಹ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ. ಇವರುಗಳು ನರಕದಲ್ಲಿ ಇರಲಿದ್ದಾರಂತೆ. ಚೈತ್ರಾ ಕುಂದಾಪುರ ಹಾಗೂ ಗೋಲ್ಡ್ ಸುರೇಶ್ ಸಹ ನರಕದಲ್ಲಿ ಇರಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!