ಬಿಗ್​ಬಾಸ್ ಹೋಗೋ ಎಲ್ಲ ಸ್ಪರ್ಧಿಗಳ ಹೆಸರು ಲೀಕ್, ಯಾರು ಸ್ವರ್ಗಕ್ಕೆ? ಯಾರು ನರಕಕ್ಕೆ?

ಬಿಗ್​ಬಾಸ್ ಕನ್ನಡ ಸೀಸನ್ 11 ಇಂದು (ಭಾನುವಾರ) ಸಂಜೆ ಆರಂಭವಾಗಲಿದೆ. ನಿನ್ನೆ ನಾಲ್ಕು ಸ್ಪರ್ಧಿಗಳ ಹೆಸರು ಘೋಷಣೆ ಮಾಡಲಾಗಿದೆ. ಇಂದು ಸಂಜೆ ಇನ್ನುಳಿದ ಸ್ಪರ್ಧಿಗಳ ಹೆಸರು ಘೋಷಣೆ ಆಗಲಿದೆ. ಆದರೆ ಅದಕ್ಕೆ ಮುಂಚೆಯೇ ಸ್ಪರ್ಧಿಗಳ ಹೆಸರು ಲೀಕ್ ಆಗಿದೆ.

ಬಿಗ್​ಬಾಸ್ ಹೋಗೋ ಎಲ್ಲ ಸ್ಪರ್ಧಿಗಳ ಹೆಸರು ಲೀಕ್, ಯಾರು ಸ್ವರ್ಗಕ್ಕೆ? ಯಾರು ನರಕಕ್ಕೆ?
Follow us
|

Updated on: Sep 29, 2024 | 11:29 AM

ಬಿಗ್​ಬಾಸ್ ಕನ್ನಡ ಸೀಸನ್ 11 ಇಂದು ಸಂಜೆ ಆರು ಗಂಟೆಯಿಂದ ಪ್ರಾರಂಭ ಆಗಲಿದೆ. ನಿನ್ನೆ ಕಲರ್ಸ್ ವಾಹಿನಿಯಲ್ಲಿ ನಡೆದ ರಾಜಾ ರಾಣಿ ರೀಲೋಡೆಡ್ ಫಿನಾಲೆ ಕಾರ್ಯಕ್ರಮದಲ್ಲಿ ನಾಲ್ಕು ಜನ ಸ್ಪರ್ಧಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಆ ನಾಲ್ವರಲ್ಲಿ ಯಾರು ಸ್ವರ್ಗಕ್ಕೆ ಹೋಗಲಿದ್ದಾರೆ ಯಾರು ನರಕಕ್ಕೆ ಹೋಗಲಿದ್ದಾರೆ ಎಂಬ ಕುತೂಹಲ ಉಂಟಾಗಿದೆ. ಸದ್ಯಕ್ಕೆ ನಾಲ್ಕು ಮಂದಿ ಸ್ಪರ್ಧಿಗಳ ಹೆಸರಷ್ಟೆ ಘೋಷಣೆ ಆಗಿದ್ದು ಇನ್ನೂ ಸುಮಾರು 12 ರಿಂದ 14 ಮಂದಿ ಸ್ಪರ್ಧಿಗಳ ಹೆಸರು ಇಂದು ಸಂಜೆ ಘೋಷಣೆ ಆಗಲಿದೆ. ಇಂದು ಸಂಜೆ ಸುದೀಪ್ ಘೋಷಣೆ ಮಾಡಲಿರುವ ಸ್ಪರ್ಧಿಗಳ ಹೆಸರುಗಳು ಮುಂಚಿತವಾಗಿ ಲೀಕ್ ಆಗಿದ್ದು, ಅವರಲ್ಲಿ ಯಾರು ಸ್ವರ್ಗಕ್ಕೆ ಹೋಗಲಿದ್ದಾರೆ ಯಾರು ನರಕಕ್ಕೆ ಹೋಗಲಿದ್ದಾರೆ ಎಂಬ ಮಾಹಿತಿ ಸಹ ಹೊರಬಿದ್ದಿದೆ.

ನಿನ್ನೆ ನಡೆದ ರಾಜಾ ರಾಣಿ ಫಿನಾಲೆಯಲ್ಲಿ ಗೌತಮಿ ಜಾಧವ್, ಲಾಯರ್ ಜಗದೀಶ್, ಚೈತ್ರಾ ಕುಂದಾಪುರ ಹಾಗೂ ಗೋಲ್ಡ್ ಸುರೇಶ್ ಅವರ ಹೆಸರುಗಳು ಘೋಷಣೆಯಾಗಿದೆ. ಇವರಲ್ಲಿ ಲಾಯರ್ ಜಗದೀಶ್ ಮತ್ತು ಗೌತಮಿ ಜಾಧವ್ ಅವರುಗಳು ಸ್ವರ್ಗಕ್ಕೆ ಹೋಗಲಿದ್ದು, ಚೈತ್ರಾ ಕುಂದಾಪುರ ಮತ್ತು ಗೋಲ್ಡ್ ಸುರೇಶ್ ಅವರುಗಳು ನರಕಕ್ಕೆ ಹೋಗಲಿದ್ದಾರಂತೆ.

ಇದನ್ನೂ ಓದಿ: ಬಿಗ್ ಬಾಸ್​ಗೆ ಈಗಷ್ಟೇ ಎಂಟ್ರಿ ಪಡೆದ ಲಾಯರ್​ ಜಗದೀಶ್​ನ ಹೊರಹಾಕಲು ನಡೆದಿದೆ ಚರ್ಚೆ

ಸೋಷಿಯಲ್ ಮೀಡಿಯಾದಿಂದ ಜನಪ್ರಿಯವಾದ ಆ ಬಳಿಕ ಗಿಚ್ಚಿ ಗಿಲಿ-ಗಿಲಿಗೂ ಹೋಗಿ ಬಂದಿರುವ ಧನರಾಜ್ ಅವರು ಬಿಗ್​ಬಾಸ್ ಮನೆಗೆ ಹೋಗಲಿದ್ದಾರಂತೆ. ನಟರಾದ ಕೀರ್ತಿ ಧರ್ಮರಾಜ್ ಸಹ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ. ‘ನವಗ್ರಹ’ ಸಿನಿಮಾದಲ್ಲಿ ಇವರು ದರ್ಶನ್ ಜೊತೆ ನಟಿಸಿದ್ದರು. ನಟ ಉಗ್ರಂ ಮಂಜು ಸಹ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ. ನಟಿಯರಾದ ಯಮುನಾ, ಭವ್ಯ, ಐಶ್ವರ್ಯಾ, ತ್ರಿವಿಕ್ರಮ್ ಮತ್ತು ಹಂಸ ಅವರುಗಳು ಸಹ ಬಿಗ್​ಬಾಸ್ ಮನೆಯಲ್ಲಿದ್ದು, ಇವರೆಲ್ಲರೂ ಸ್ವರ್ಗದಲ್ಲಿ ಇರಲಿದ್ದಾರಂತೆ.

ನಟ ಶಿಶಿರ ನಟಿ ಮೋಕ್ಷಿತ ಹಾಗೂ ಕಳೆದ ಬಾರಿ ಬಿಗ್​ಬಾಸ್​ಗೆ ಹೋಗಿದ್ದ ತುಕಾಲಿ ಸಂತೋಷ್ ಅವರ ಪತ್ನಿ ತುಕಾಲಿ ಮಾನಸ ಸಹ ಈ ಬಾರಿ ಬಿಗ್​ಬಾಸ್​ಗೆ ಹೋಗಲಿದ್ದಾರೆ. ಇವರ ಜೊತೆಗೆ ರಂಜಿತಾ ಸಹ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ. ಇವರುಗಳು ನರಕದಲ್ಲಿ ಇರಲಿದ್ದಾರಂತೆ. ಚೈತ್ರಾ ಕುಂದಾಪುರ ಹಾಗೂ ಗೋಲ್ಡ್ ಸುರೇಶ್ ಸಹ ನರಕದಲ್ಲಿ ಇರಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ