AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ವಾರಕ್ಕೆ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ: ಸ್ಪರ್ಧಿಗೆ ವಿಶೇಷ ಅಧಿಕಾರ

ಬಿಗ್​ಬಾಸ್ ಕನ್ನಡ ಸೀಸನ್ 11 ರಲ್ಲಿ ಪ್ರತಿ ದಿನ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಭಾರಿ ಜಗಳಗಳು ನಡೆದು ಇಬ್ಬರು ಸ್ಪರ್ಧಿಗಳು ಮನೆಯಿಂದ ಹೊರಗೆ ಹೋಗಿದ್ದಾರೆ. ಇದೀಗ ಬಿಗ್​ಬಾಸ್ ಮನೆಗೆ ಹೊಸ ಸ್ಪರ್ಧಿಯೊಬ್ಬರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದುಕೊಂಡಿದ್ದಾರೆ. ಅವರಿಗೆ ವಿಶೇಷ ಅಧಿಕಾರ ಸಹ ದೊರೆತಿದೆ.

ಮೂರನೇ ವಾರಕ್ಕೆ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಎಂಟ್ರಿ: ಸ್ಪರ್ಧಿಗೆ ವಿಶೇಷ ಅಧಿಕಾರ
 ಶ್ರೀಲಕ್ಷ್ಮೀ ಎಚ್
| Edited By: |

Updated on:Oct 20, 2024 | 10:25 AM

Share

‘ಬಿಗ್ ಬಾಸ್ ಕನ್ನಡ’ದ 11ನೇ ಸೀಸನ್ ಈಗಾಗಲೇ ಶುರವಾಗಿದೆ. ಮೂರು ವಾರಗಳನ್ನು ಈ ಶೋ ಪೂರ್ಣಗೊಳಿಸಿದೆ. ಹೀಗಿರುವಾಗಲೇ ಬಿಗ್ ಬಾಸ್ ಮನೆಗೊಂದು ವೈಲ್ಡ್ ಕಾರ್ಡ್ನ ಆಗಮನ ಆಗಿದೆ. ಹೌದು, ದೊಡ್ಮನೆಯಲ್ಲಿ ಮಧ್ಯದಲ್ಲಿಯೇ ಇಬ್ಬರು ಎಲಿಮಿನೇಟ್ ಆದ ಕಾರಣದಿಂದಲೋ ಏನೋ ಹೊಸಬರನ್ನು ಒಳಗೆ ಕರೆ ತರಲಾಗಿದೆ. ದೊಡ್ಮನೆ ಒಳಗೆ ಕಾಲಿಟ್ಟ ಸ್ಪರ್ಧಿ ಯಾರು ಎನ್ನುವ ಪ್ರಶ್ನೆಗೆ ಈ ಸ್ಟೋರಿಯಲ್ಲಿ ಉತ್ತರ ನೀಡುತ್ತೇವೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದವು. ಇಬ್ಬರು ದೊಡ್ಮನೆಯಿಂದ ಎಲಿಮಿನೇಟ್ ಕೂಡ ಆದರು. ಇದಕ್ಕೆ ಕಾರಣ ಆಗಿದ್ದು ದೊಡ್ಮನೆಯ ಜಗಳ. ಹೌದು, ದೊಡ್ಮನೆಯಲ್ಲಿ ದೀರ್ಘ ಕಾಲ ಜಗಳ ನಡೆಯಿತು. ಇದರಿಂದ ಲಾಯರ್ ಜಗದೀಶ್ ಹಾಗೂ ರಂಜಿತ್ ಔಟ್ ಆದರು. ಈಗ ದೊಡ್ಮನೆ ಒಳಗೆ ಹನುಮಂತ ಅವರ ಆಗಮನ ಆಗಿದೆ.

ಕಲರ್ಸ್ ಕನ್ನಡವು ಈಗ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋದಲ್ಲಿ ಗಾಯಕ ಹನುಮಂತ ಅವರ ಆಗಮನ ಆಗಿದೆ. ಹನುಮಂತ ಅವರು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಜೀ ಕನ್ನಡ ‘ಸರೆಗಮಪ..’ರಿಯಾಲಿಟಿ ಶೋಗೆ ಬಂದಿದ್ದ ಅವರು ನಂತರ ಸಾಕಷ್ಟು ಜನಪ್ರಿಯತೆ ಪಡೆದರು. ‘ಕಾಮಿಡಿ ಕಿಲಾಡಿಗಳು’ ರೀತಿಯ ಶೋಗಳಲ್ಲಿ ಅವರು ಕಾಣಿಸಿಕೊಂಡಿದ್ದರು. ಅವರು ಕುರಿ ಕಾಯುತ್ತಾ ಇದ್ದವರು. ಅವರಿಗೆ ಈಗ ಸಾಕಷ್ಟು ಜನಪ್ರಿಯತೆ ಸಿಕ್ಕಿದೆ.

ಇದನ್ನೂ ಓದಿ:ಬಿಗ್​ಬಾಸ್ ವೇದಿಕೆ ಮೇಲೆ ಲಾಯರ್ ಜಗದೀಶ್, ಮನೆಗೆ ಮತ್ತೆ ಎಂಟ್ರಿ?

‘ಬಿಗ್ ಬಾಸ್’ಗೆ ಬಂದ ಕೂಡಲೇ ಅವರಿಗೆ ವಿಶೇಷ ಅಧಿಕಾರವೂ ಸಿಕ್ಕಿದೆ. ಅವರು ಕ್ಯಾಪ್ಟನ್ ಆಗಿದ್ದಾರೆ. ದೊಡ್ಮನೆಯಲ್ಲಿ ಕ್ಯಾಪ್ಟನ್ ಆದ ಅವರಿಗೆ ಅಭಿನಂದನೆ ತಿಳಿಸಲಾಗಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಕೇವಲ ಫೈಟ್ಗಳು ಜಾಸ್ತಿ ಇದ್ದವು. ಇದು ಮಿತಿಮೀರಿದ್ದರಿಂದ ಯಾವುದೇ ಕಾಮಿಡಿ ಘಟನೆಗಳು ನಡೆಯುತ್ತಲೇ ಇರಲಿಲ್ಲ. ಈಗ ಹಾಸ್ಯ ಮಾಡುವ ಉದ್ದೇಶದಿಂದಲೇ ಅವರನ್ನು ಕರೆತರಲಾಗಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಸಾಮಾನ್ಯವಾಗಿ ಬಿಗ್ ಬಾಸ್ ಶುರುವಾಗಿ ತಿಂಗಳ ಬಳಿಕ ವೈಲ್ಡ್ ಕಾರ್ಡ್ ಎಂಟ್ರಿಯನ್ನು ಕೊಡಿಸಲಾಗುತ್ತದೆ. ಆದರೆ, ಈ ಬಾರಿ ಆ ರೀತಿ ಮಾಡಿಲ್ಲ. ವಾರದ ಮಧ್ಯದಲ್ಲೇ ಇಬ್ಬರು ಹೋಗಿದ್ದರಿಂದ ಮೂರೇ ವಾರಕ್ಕೆ ವೈಲ್ಡ್ ಕಾರ್ಡ್ ಎಂಟ್ರಿಯ ಆಗಮನ ಆಗಿದೆ ಅನ್ನೋದು ವಿಶೇಷ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:02 am, Sun, 20 October 24

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?