AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss: ಅವಾಚ್ಯ ಶಬ್ದ ಬಳಸಿದ ರಜತ್​ಗೆ ಸುದೀಪ್ ಕ್ಲಾಸ್

Bigg Boss Kannada season 11: ಈ ವಾರ ಬಿಗ್​ಬಾಸ್ ಮನೆಯಲ್ಲಿ ಹಲವು ಘಟನೆಗಳು ನಡೆದಿವೆ. ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಮನೆಗೆ ಬಂದಿರುವ ರಜತ್, ಅವಾಚ್ಯ ಶಬ್ದಗಳನ್ನು ಬಳಸಿರುವ ಕಾರಣ ಅವರಿಗೆ ಕಳಪೆ ನೀಡಲಾಗಿತ್ತು. ಇದೀಗ ಸುದೀಪ್, ರಜತ್​ಗೆ ಮೆದುವಾಗಿ ಎಚ್ಚರಿಕೆ ಕೊಟ್ಟಿದ್ದಾರೆ.

Bigg Boss: ಅವಾಚ್ಯ ಶಬ್ದ ಬಳಸಿದ ರಜತ್​ಗೆ ಸುದೀಪ್ ಕ್ಲಾಸ್
ಮಂಜುನಾಥ ಸಿ.
|

Updated on: Nov 23, 2024 | 10:50 PM

Share

ಕಳೆದ ವಾರ ಮನೆಗೆ ಬಂದ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿಗಳು ಬಹಳ ಅಗ್ರೆಸ್ಸಿವ್ ಆಗಿ ಆಟ ಆಡುತ್ತಿದ್ದಾರೆ. ಶೋಭಾ ಹಾಗೂ ರಜತ್ ಅವರುಗಳು ವೈಲ್ಡ್ ಕಾರ್ಡ್ ಮೂಲಕ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ರಜತ್ ಅಂತೂ ತಾನು ಅತ್ಯಂತ ಅಗ್ರೆಸ್ಸಿವ್ ಎಂದು ಬಂದ ದಿನವೇ ತೋರಿಸಿದ್ದಾರೆ. ಅದರಂತೆ ಆಟ ಸಹ ಆಡುತ್ತಿದ್ದಾರೆ. ಆದರೆ ಈ ವಾರ ನಡೆದ ಟಾಸ್ಕ್​ಗಳಲ್ಲಿ ಅವರು ತುಸು ಹೆಚ್ಚಾಗಿಯೇ ಅಗ್ರೆಸ್ಸಿವ್ ಆಗಿದ್ದಾರೆ. ಆದರೆ ಸುದೀಪ್ ಇಂದು ಅವರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ಈ ವಾರ ನಡೆದ ಟಾಸ್ಕ್​ನಲ್ಲಿ ರಜತ್ ತೀರಾ ಅಗ್ರೆಸ್ಸಿವ್ ಆಗಿ ಆಡಿದ್ದು, ಆಟಗಾರ ಸುರೇಶ್ ಅವರ ಬಗ್ಗೆ ಅವಾಚ್ಯ ಶಬ್ದ ಬಳಸಿದ್ದಾರೆ. ಈ ಹಿಂದೆ ಲಾಯರ್ ಜಗದೀಶ್ ಅವಾಚ್ಯ ಶಬ್ದಗಳನ್ನು ಬಳಸಿ ಮನೆಯಿಂದ ಹೊರಗೆ ಹೋಗಿದ್ದಾರೆ. ಆದರೆ ಈಗ ಮತ್ತೆ ಮನೆಯಲ್ಲಿ ಅವಾಚ್ಯ ಶಬ್ದಗಳು ಕೇಳಿ ಬಂದಿವೆ. ಇದೇ ಕಾರಣಕ್ಕೆ ರಜತ್​ಗೆ ಕಳಪೆ ನೀಡಿ ಜೈಲಿಗೆ ಸಹ ಅಟ್ಟಲಾಗಿತ್ತು.

ಶನಿವಾರದ ಎಪಿಸೋಡ್​ನಲ್ಲಿ ವಾರದ ಪಂಚಾಯಿತಿ ನಡೆಸಿಕೊಟ್ಟ ಸುದೀಪ್, ಸುರೇಶ್ ವಿರುದ್ಧ ಅವಾಚ್ಯ ಶಬ್ದ ಬಳಸಿದ ರಜತ್​ಗೆ ಸಣ್ಣದಾಗಿ ಕ್ಲಾಸ್ ತೆಗೆದುಕೊಂಡರು. ಕನ್ನಡದಲ್ಲಿ ಹಲವಾರು ಮಾತುಗಳಿವೆ ಆದರೆ ಆ ಮಾತುಗಳನ್ನು ಏಕೆ ಬಳಸಿದಿರಿ ಎಂದು ಪ್ರಶ್ನೆ ಮಾಡಿದ ಸುದೀಪ್, ಅಂದು ಬಳಸಿದ ಮಾತುಗಳನ್ನು ಈಗ ಇಲ್ಲಿ ನನ್ನ ಎದುರು ಬಳಸಿ ನೋಡೋಣ’ ಎಂದು ಸವಾಲು ಹಾಕಿದರು. ‘ಕೋಪದಲ್ಲಿದ್ದಾಗ ಇದೇ ಭಾಷೆ ಬಳಸುವೆ ಅನ್ನುತ್ತೀರಿ, ಈ ಮನೆಯಲ್ಲಿ ಕೋಪ ಬರುವ ಸನ್ನಿವೇಶ ಸಾಕಷ್ಟು ಬರುತ್ತವೆ, ಆಗೆಲ್ಲ ಹೀಗೆಯೇ ಮಾತನಾಡುತ್ತೀರಾ’ ಎಂದರು.

ಇದನ್ನೂ ಓದಿ:ವೈಲ್ಡ್​ ಕಾರ್ಡ್ ಮೂಲಕ ಬಿಗ್​ಬಾಸ್​ಗೆ ಎಂಟ್ರಿ ಕೊಟ್ಟ ಗ್ಲಾಮರ್ ಗೊಂಬೆ

‘ಅಂದು ಕೋಪದಲ್ಲಿ ಮಾತನಾಡಿದೆ ಮತ್ತೆ ಮಾತನಾಡುವುದಿಲ್ಲ’ ಎಂದು ರಜತ್ ಕ್ಷಮೆ ಕೇಳಿದರಾದರೂ, ಯಾರೇ ಆಗಲಿ ಸೋಲುತ್ತೀರಿ, ಗೆಲ್ಲುತ್ತೀರಿ, ಬಹಳ ಕಷ್ಟಪಟ್ಟು ಆಡುತ್ತಿದ್ದೀರಿ ಆದರೆ ಅವಾಚ್ಯ ಶಬ್ದ ಬಳಸಿ, ಜಗಳ ಮಾಡಿ, ಕೈ ಮಾಡಿ ಇಂಥಹಾ ಸಿಲ್ಲಿ ಕಾರಣಗಳಿಗೆ, ನಿಮ್ಮ ಗುಂಡಿಯನ್ನು ನೀವೇ ತೋಡಿಕೊಂಡು ಮನೆಯಿಂದ ಹೊರಗೆ ಹೋಗಬೇಡಿ’ ಎಂದು ಎಲ್ಲರಿಗೂ ಬುದ್ಧಿವಾದ ಹೇಳಿದರು ಸುದೀಪ್.

ಹೊರಗಡೆಯಿಂದ ಮನೆಗೆ ಬಂದ ರಜತ್, ‘ಶೋ ಟಿಆರ್​ಪಿ ಚೆನ್ನಾಗಿದೆ. ಜನರಿಗೆ ಇದು ಇಷ್ಟ ಆಗ್ತಿದೆ, ಇದು ಇಷ್ಟ ಆಗ್ತಿಲ್ಲ’ ಎಂದು ಹೇಳಿದ್ದರು. ಇದರ ಬಗ್ಗೆ ಅಸಮಾಧಾನಗೊಂಡು ಮಾತನಾಡಿದ ಸುದೀಪ್, ಹೊರಗಡೆಯದ್ದು ಒಳಗೆ ಹೇಳಲಿ ಎಂದು ಕಳಿಸಿಕೊಟ್ಟಿದ್ದಾ ಎಂದು ಕೇಳಿದರು. ಅದಕ್ಕೆ ರಜತ್ ಮತ್ತೊಮ್ಮೆ ರಿಪೀಟ್ ಮಾಡಲ್ಲ ಎಂದರು. ಅದಕ್ಕೆ ಸುದೀಪ್, ಮತ್ತೆ ಹಾಗೆ ಮಾಡಿದರೆ ಬಾಗಿಲು ತೆಗೆದು ಹೊರಗೆ ಕಳಿಸುತ್ತೇನೆ. ಬಾಗಿಲಿನ ಒಂದು ಕೀ ನನ್ನ ಹತ್ತಿರ ಇದೆ’ ಎಂದು ಎಚ್ಚರಿಕೆ ಕೊಟ್ಟರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!