AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕನ್ನಡದ ನವಾಜುದ್ದೀನ್ ಸಿದ್ಧಿಕಿ’; ಬಿಗ್ ಬಾಸ್ ಫಿನಾಲೆ ಸಮೀಪಿಸಿದಾಗ ಮಂಜುನ ಹೊಗಳಿದ ತ್ರಿವಿಕ್ರಂ

ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಮಂಜು ಮತ್ತು ತ್ರಿವಿಕ್ರಂರ ನಡುವಿನ ಸ್ಪರ್ಧಾತ್ಮಕ ಸಂಬಂಧ ಫೈನಲ್ ವಾರದಲ್ಲಿ ಸ್ನೇಹವಾಗಿ ಬದಲಾಗಿದೆ. ತ್ರಿವಿಕ್ರಂ ಅವರು ಮಂಜು ಅವರನ್ನು ‘ಕನ್ನಡದ ನವಾಜುದ್ದೀನ್ ಸಿದ್ದಿಕಿ’ ಎಂದು ಕರೆದು ಪತ್ರದಲ್ಲಿ ಪ್ರಶಂಸಿಸಿದ್ದಾರೆ. ಆರೋಗ್ಯ ಮತ್ತು ಮದ್ಯಪಾನದ ಬಗ್ಗೆಯೂ ಉತ್ತಮ ಸಲಹೆಗಳನ್ನು ನೀಡಿದ್ದಾರೆ.

‘ಕನ್ನಡದ ನವಾಜುದ್ದೀನ್ ಸಿದ್ಧಿಕಿ’; ಬಿಗ್ ಬಾಸ್ ಫಿನಾಲೆ ಸಮೀಪಿಸಿದಾಗ ಮಂಜುನ ಹೊಗಳಿದ ತ್ರಿವಿಕ್ರಂ
ಮಂಜು-ತ್ರಿವಿಕ್ರಂ
ರಾಜೇಶ್ ದುಗ್ಗುಮನೆ
|

Updated on: Jan 23, 2025 | 6:57 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಉಗ್ರಂ ಮಂಜು ಹಾಗೂ ತ್ರಿವಿಕ್ರಂ ಮಧ್ಯೆ ಯಾವುದೂ ಸರಿ ಇರಲಿಲ್ಲ. ಇವರ ಮಧ್ಯೆ ಆಗಾಗ ಕಿರಿಕ್​​ಗಳು ಆಗಿದ್ದು ಇದೆ. ಇವರಿಬ್ಬರೂ ಒಳ್ಳೆಯ ಕಾಂಪಿಟೇಟರ್​ಗಳು. ಇಬ್ಬರೂ ಫಿನಾಲೆ ವಾರ ತಲುಪಿದ್ದಾರೆ. ಆದರೆ, ಫಿನಾಲೆ ಸಮೀಪಿಸುದ್ದಿಂತೆ ಇವರ ಮಧ್ಯೆ ಹೊಂದಾಣಿಕೆ ಆಗಿದೆ. ಒಬ್ಬರ ಬಗ್ಗೆ ಒಬ್ಬರು ಒಳ್ಳೆಯ ಮಾತುಗಳನ್ನು ಹೇಳಿಕೊಳ್ಳುತ್ತಾ ಇದ್ದಾರೆ. ಈಗ ಬಿಗ್ ಬಾಸ್ ಕೊಟ್ಟ ಚಟುವಟಿಕೆ ಒಂದರಲ್ಲಿ ತ್ರಿವಿಕ್ರಂ ಅವರು ಮಂಜು ಬಗ್ಗೆ ಒಳ್ಳೆಯ ಮಾತುಗಳನ್ನಾಡಿದ್ದಾರೆ.

ಬಿಗ್ ಬಾಸ್ ಗಾರ್ಡನ್ ಏರಿಯಾದಲ್ಲಿ ರೆಸಾರ್ಟ್ ಮಾದರಿಯ ಸೆಟ್ ಹಾಕಿದ್ದರು. ಅಲ್ಲಿ ತಿನ್ನೋಕೆ ಊಟ, ಫೈಯರ್ ಕ್ಯಾಂಪ್ ಇತ್ತು. ಸ್ಪರ್ಧಿಗಳು ಮೊದಲೇ ಬರೆದಿಟ್ಟ ಲೆಟರ್​ಗಳನ್ನು ಓದಿ ಹೇಳಬೇಕಿತ್ತು. ಮೊದಲು ತೆರಳಿದ ಮಂಜು ಅವರು ತಮ್ಮ ಬಗ್ಗೆ ಬರೆದು ಸಾಲುಗಳನ್ನು ಓದಿದರು. ‘ಮಂಜು ಅವರ ಫ್ಯಾನ್ ಬಾಯ್’ ಎಂದು ತ್ರಿವಿಕ್ರಂ ಅವರು ಅನೇಕ ಬಾರಿ ಹೇಳಿಕೊಂಡಿದ್ದರು. ಅದನ್ನೇ ಪತ್ರದ ಮೊದಲ ಸಾಲಿನಲ್ಲಿ ಬರೆದಿದ್ದರು.

‘ಮಂಜಣ್ಣ ನಿನ್ನ ಫ್ಯಾನ್ ಬಾಯ್ ನಾನು. ನಿನ್ನ ಕಂಡಾಗಲೆಲ್ಲ ನನಗೆ ಕಾಡೋದು ಒಂದೇ ಪ್ರಶ್ನೆ, ಹೇಗೆ ಇಷ್ಟು ಎನರ್ಜಿಟಿಕ್ ಆಗಿ ಇರ್ರೀಯಾ ಅಂತಾ. ನಿನ್ನ ಎನರ್ಜಿ ಮ್ಯಾಚ್ ಮಾಡೋಕೆ ನಾನು ಕೂಡ ಕೆಲವೊಮ್ಮೆ ಕಷ್ಟಪಟ್ಟಿದ್ದು ಇದೆ. ಕಲಾ ಸರಸ್ವತಿ ನಿನ್ನ ಭಕ್ತಿಗೆ ಒಲಿದಿದ್ದಾಳೆ. ತುಂಬಾ ಎತ್ತರಕ್ಕೆ ಬೆಳೆಯಬೇಕು. ನಾನು ಅದನ್ನು ನೋಡಬೇಕು. ಸದಾ ನಗುತ್ತಾ ಇರು, ನಗಸ್ತಾ ಇರು. ಕೋಪ ಬಿಡಬೇಡ, ಅದುವೇ ನಿನ್ನ ಕಿರೀಟ’ ಎಂದಿದ್ದಾರೆ ತ್ರಿವಿಕ್ರಂ.

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಬಂದ ಭವ್ಯಾ ಗೌಡ ತಂದೆ; ಮನದೊಳಗೆ ಇದೆ ನೋವಿನ ಕಥೆ

ಮಂಜು ಅವರು ಬಿಗ್ ಬಾಸ್ ಮನೆಯಿಂದ ಹೊರಗಿದ್ದಾಗ ಸಾಕಷ್ಟು ಕುಡಿಯುತ್ತಿದ್ದರಂತೆ ಆದರೆ, ಕಳೆದ ನಾಲ್ಕು ತಿಂಗಳಿಂದ ಅವರು ಮದ್ಯ ಸೇವನೆ ಮಾಡಿಲ್ಲ. ಕುಡಿತದ ವಿಚಾರದಲ್ಲೂ ತ್ರಿವಿಕ್ರಂ ಅವರು ಮಂಜುಗೆ ಕಿವಿಮಾತು ಹೇಳಿದ್ದಾರೆ. ‘ಜಾಸ್ತಿ ಕುಡಿಯಬೇಡ, ಫಿಟ್ನೆಸ್ ಹಾಳುಮಾಡಿಕೊಳ್ಳಬೇಡ, ತುಂಬಾ ಚೆನ್ನಾಗಿ ಕಾಣ್ತಾ ಇದೀಯಾ. ಕನ್ನಡದ ನವಾಜುದ್ದೀನ್ ಸಿದ್ಧಿಕಿ ನೀನು. ಆಗ್ಬೇಕು ನೀನು’ ಎಂದು ಪತ್ರ ಪೂರ್ಣಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ