AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಹೊಸ ಪ್ರೋಮೊ: ಸ್ವರ್ಗ-ನರಕದ ಕತೆ ಹೇಳಿದ ಸುದೀಪ್

Bigg Boss Kannada season 11: ಬಿಗ್​ಬಾಸ್ ಕನ್ನಡ ಸೀಸನ್ 11 ರ ಹೊಸ ಪ್ರೋಮೋ ಬಿಡುಗಡೆ ಆಗಿದ್ದು, ಸ್ವರ್ಗ-ನರಕದ ಜೀವನಕ್ಕೆ ಈ ಬಾರಿಯ ಬಿಗ್​ಬಾಸ್ ಅನ್ನು ಹೋಲಿಸಿದ್ದಾರೆ ಕಿಚ್ಚ ಸುದೀಪ್.

ಬಿಗ್​ಬಾಸ್ ಹೊಸ ಪ್ರೋಮೊ: ಸ್ವರ್ಗ-ನರಕದ ಕತೆ ಹೇಳಿದ ಸುದೀಪ್
ಬಿಗ್​ಬಾಸ್ ಕನ್ನಡ
ಮಂಜುನಾಥ ಸಿ.
|

Updated on: Sep 21, 2024 | 8:24 PM

Share

ಕನ್ನಡ ಬಿಗ್​ಬಾಸ್ ಸೀಸನ್ 11 ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಹಿಂದೆ ಒಂದೆರಡು ಪ್ರೋಮೊಗಳು ಬಿಡುಗಡೆ ಆಗಿ ಕುತೂಹಲ ಕೆರಳಿಸಿವೆ. ಈ ಬಾರಿ ಸುದೀಪ್ ಇರುವುದಿಲ್ಲ ಬದಲಿಗೆ ಬೇರೊಬ್ಬ ನಟ ಇರುತ್ತಾರೆ ಎಂದೆಲ್ಲ ಸುದ್ದಿ ಹರಿಬಿಡಲಾಗಿತ್ತು. ಆದರೆ ಅದೆಲ್ಲ ಸುಳ್ಳಾಗಿದ್ದು, ಈ ಹೊಸ ಸೀಸನ್ ಅನ್ನೂ ಸಹ ಸುದೀಪ್ ಅವರೇ ನಿರೂಪಣೆ ಮಾಡಲಾಗುತ್ತಿದ್ದು, ಅವರನ್ನು ಒಳಗೊಂಡಿರುವ ಪ್ರೊಮೊ ಬಿಡುಗಡೆ ಆಗಿದೆ. ಇಂದು (ಸೆಪ್ಟೆಂಬರ್ 21) ಬಿಡುಗಡೆ ಆಗಿರುವ ಹೊಸ ಪ್ರೋಮೋನಲ್ಲಿ ಸುದೀಪ್ ಸ್ವರ್ಗ ಮತ್ತು ನರಕದ ಕತೆ ಹೇಳಿದ್ದಾರೆ. ಆ ಮೂಲಕ ಬಿಗ್​ಬಾಸ್ ಮನೆ ಈ ಬಾರಿ ಹೇಗಿರಲಿದೆ ಎಂಬ ಸಣ್ಣ ಸುಳಿವೊಂದನ್ನು ನೀಡಿದ್ದಾರೆ.

ಪ್ರೋಮೋದ ಆರಂಭದಲ್ಲಿಯೇ ಕೆಲವು ಯುವಕ-ಯುವತಿಯರು ಸ್ವರ್ಗದಲ್ಲಿ ಡೈನಿಂಗ್ ಟೇಬಲ್ ಮೇಲೆ ಕುಳಿತು ಖುಷಿಯಿಂದ ಆಹಾರ ಸೇವಿಸುತ್ತಿದ್ದಾರೆ. ಅದೇ ವಿಡಿಯೋ ಮುಂದುವರೆದರೆ ನರಕದಂತೆ ಕಾಣುವ ಭೀಕರ ಪ್ರದೇಶದಲ್ಲಿ ತಟ್ಟೆಯಲ್ಲಿ ಗಂಜಿ ಕುಡಿಯುತ್ತಿದ್ದಾರೆ ಬೆಂಕಿಯ ಕುಲುಮೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಗ ಬರುವ ಸುದೀಪ್, ಸ್ವರ್ಗದಲ್ಲಿರುವವರು, ನರಕದಲ್ಲಿರುತ್ತಾರೆ ನರಕದಲ್ಲಿರುವವರು ಸ್ವರ್ಗದಲ್ಲಿರುತ್ತಾರೆ ಎಂದು ಬಿಗ್​ಬಾಸ್ ಶೈಲಿಯಲ್ಲಿ ಸ್ವರ್ಗ ನರಕದ ಜೀವನದ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ:ಕೈ-ಕೈ ಮಿಲಾಯಿಸಿದ ಬಿಗ್​ಬಾಸ್ ಸ್ಪರ್ಧಿಗಳು, ನಟಿಗೆ ಕಪಾಳಮೋಕ್ಷ

ಯಾರು ಸ್ನೇಹಿತರಾಗುತ್ತಾರೆ ಎಂದು ನಂಬಿರುತ್ತೇವೆಯೋ ಅವರೇ ಬೆನ್ನಿಗೆ ಚೂರಿ ಹಾಕಬಹುದು, ಯಾರು ಚೂರಿ ಹಾಕುತ್ತಾರೆ ಎಂದುಕೊಂಡಿರುತ್ತೇವೆಯೋ ಅವರೇ ಸ್ನೇಹಿತರೂ ಆಗಬಹುದು ಎಂದು ಹೇಳಿದ್ದಾರೆ. ಆ ಮೂಲಕ ಬಿಗ್​ಬಾಸ್ ಮನೆಯಲ್ಲಿ ಯಾವ ಸಂಬಂಧವೂ ಶಾಶ್ವತವಲ್ಲ ಎಂದು ಸಹ ಹೇಳಿದ್ದಾರೆ. ಆ ಮೂಲಕ ಈ ಬಾರಿಯ ಬಿಗ್​ಬಾಸ್​ ಸುಲಭವಂತೂ ಆಗಿರುವುದಿಲ್ಲ, ಹಲವು ಟ್ವಿಸ್ಟ್ ಮತ್ತು ಟರ್ನ್​ಗಳನ್ನು ಒಳಗೊಂಡಿರುತ್ತದೆ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

ಅಂದಹಾಗೆ ಕನ್ನಡ ಬಿಗ್​ಬಾಸ್ ಸೀಸನ್ 11 ಸೆಪ್ಟೆಂಬರ್ 29 ರಂದು ಪ್ರಾರಂಭವಾಗಲಿದೆ. ರಿಯಾಲಿಟಿ ಶೋನ ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 29 ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಅದರ ಬಳಿಕ ಪ್ರತಿದಿನ ರಾತ್ರಿ 9:30ಗೆ ಎಪಿಸೋಡ್​ಗಳು ಪ್ರಸಾರ ಆಗಲಿವೆ. ಈ ಬಾರಿ ಲೈವ್ ಇರುವುದಿಲ್ಲ ಎನ್ನಲಾಗುತ್ತಿದೆ. ಸೀಸನ್ 11 ರಲ್ಲಿ ಕೆಲವು ಬದಲಾವಣೆಗಳು ಇರಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ