ಬಿಗ್​ಬಾಸ್ ಹೊಸ ಪ್ರೋಮೊ: ಸ್ವರ್ಗ-ನರಕದ ಕತೆ ಹೇಳಿದ ಸುದೀಪ್

Bigg Boss Kannada season 11: ಬಿಗ್​ಬಾಸ್ ಕನ್ನಡ ಸೀಸನ್ 11 ರ ಹೊಸ ಪ್ರೋಮೋ ಬಿಡುಗಡೆ ಆಗಿದ್ದು, ಸ್ವರ್ಗ-ನರಕದ ಜೀವನಕ್ಕೆ ಈ ಬಾರಿಯ ಬಿಗ್​ಬಾಸ್ ಅನ್ನು ಹೋಲಿಸಿದ್ದಾರೆ ಕಿಚ್ಚ ಸುದೀಪ್.

ಬಿಗ್​ಬಾಸ್ ಹೊಸ ಪ್ರೋಮೊ: ಸ್ವರ್ಗ-ನರಕದ ಕತೆ ಹೇಳಿದ ಸುದೀಪ್
ಬಿಗ್​ಬಾಸ್ ಕನ್ನಡ
Follow us
|

Updated on: Sep 21, 2024 | 8:24 PM

ಕನ್ನಡ ಬಿಗ್​ಬಾಸ್ ಸೀಸನ್ 11 ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ಹಿಂದೆ ಒಂದೆರಡು ಪ್ರೋಮೊಗಳು ಬಿಡುಗಡೆ ಆಗಿ ಕುತೂಹಲ ಕೆರಳಿಸಿವೆ. ಈ ಬಾರಿ ಸುದೀಪ್ ಇರುವುದಿಲ್ಲ ಬದಲಿಗೆ ಬೇರೊಬ್ಬ ನಟ ಇರುತ್ತಾರೆ ಎಂದೆಲ್ಲ ಸುದ್ದಿ ಹರಿಬಿಡಲಾಗಿತ್ತು. ಆದರೆ ಅದೆಲ್ಲ ಸುಳ್ಳಾಗಿದ್ದು, ಈ ಹೊಸ ಸೀಸನ್ ಅನ್ನೂ ಸಹ ಸುದೀಪ್ ಅವರೇ ನಿರೂಪಣೆ ಮಾಡಲಾಗುತ್ತಿದ್ದು, ಅವರನ್ನು ಒಳಗೊಂಡಿರುವ ಪ್ರೊಮೊ ಬಿಡುಗಡೆ ಆಗಿದೆ. ಇಂದು (ಸೆಪ್ಟೆಂಬರ್ 21) ಬಿಡುಗಡೆ ಆಗಿರುವ ಹೊಸ ಪ್ರೋಮೋನಲ್ಲಿ ಸುದೀಪ್ ಸ್ವರ್ಗ ಮತ್ತು ನರಕದ ಕತೆ ಹೇಳಿದ್ದಾರೆ. ಆ ಮೂಲಕ ಬಿಗ್​ಬಾಸ್ ಮನೆ ಈ ಬಾರಿ ಹೇಗಿರಲಿದೆ ಎಂಬ ಸಣ್ಣ ಸುಳಿವೊಂದನ್ನು ನೀಡಿದ್ದಾರೆ.

ಪ್ರೋಮೋದ ಆರಂಭದಲ್ಲಿಯೇ ಕೆಲವು ಯುವಕ-ಯುವತಿಯರು ಸ್ವರ್ಗದಲ್ಲಿ ಡೈನಿಂಗ್ ಟೇಬಲ್ ಮೇಲೆ ಕುಳಿತು ಖುಷಿಯಿಂದ ಆಹಾರ ಸೇವಿಸುತ್ತಿದ್ದಾರೆ. ಅದೇ ವಿಡಿಯೋ ಮುಂದುವರೆದರೆ ನರಕದಂತೆ ಕಾಣುವ ಭೀಕರ ಪ್ರದೇಶದಲ್ಲಿ ತಟ್ಟೆಯಲ್ಲಿ ಗಂಜಿ ಕುಡಿಯುತ್ತಿದ್ದಾರೆ ಬೆಂಕಿಯ ಕುಲುಮೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಆಗ ಬರುವ ಸುದೀಪ್, ಸ್ವರ್ಗದಲ್ಲಿರುವವರು, ನರಕದಲ್ಲಿರುತ್ತಾರೆ ನರಕದಲ್ಲಿರುವವರು ಸ್ವರ್ಗದಲ್ಲಿರುತ್ತಾರೆ ಎಂದು ಬಿಗ್​ಬಾಸ್ ಶೈಲಿಯಲ್ಲಿ ಸ್ವರ್ಗ ನರಕದ ಜೀವನದ ಬಗ್ಗೆ ಹೇಳಿದ್ದಾರೆ.

ಇದನ್ನೂ ಓದಿ:ಕೈ-ಕೈ ಮಿಲಾಯಿಸಿದ ಬಿಗ್​ಬಾಸ್ ಸ್ಪರ್ಧಿಗಳು, ನಟಿಗೆ ಕಪಾಳಮೋಕ್ಷ

ಯಾರು ಸ್ನೇಹಿತರಾಗುತ್ತಾರೆ ಎಂದು ನಂಬಿರುತ್ತೇವೆಯೋ ಅವರೇ ಬೆನ್ನಿಗೆ ಚೂರಿ ಹಾಕಬಹುದು, ಯಾರು ಚೂರಿ ಹಾಕುತ್ತಾರೆ ಎಂದುಕೊಂಡಿರುತ್ತೇವೆಯೋ ಅವರೇ ಸ್ನೇಹಿತರೂ ಆಗಬಹುದು ಎಂದು ಹೇಳಿದ್ದಾರೆ. ಆ ಮೂಲಕ ಬಿಗ್​ಬಾಸ್ ಮನೆಯಲ್ಲಿ ಯಾವ ಸಂಬಂಧವೂ ಶಾಶ್ವತವಲ್ಲ ಎಂದು ಸಹ ಹೇಳಿದ್ದಾರೆ. ಆ ಮೂಲಕ ಈ ಬಾರಿಯ ಬಿಗ್​ಬಾಸ್​ ಸುಲಭವಂತೂ ಆಗಿರುವುದಿಲ್ಲ, ಹಲವು ಟ್ವಿಸ್ಟ್ ಮತ್ತು ಟರ್ನ್​ಗಳನ್ನು ಒಳಗೊಂಡಿರುತ್ತದೆ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

ಅಂದಹಾಗೆ ಕನ್ನಡ ಬಿಗ್​ಬಾಸ್ ಸೀಸನ್ 11 ಸೆಪ್ಟೆಂಬರ್ 29 ರಂದು ಪ್ರಾರಂಭವಾಗಲಿದೆ. ರಿಯಾಲಿಟಿ ಶೋನ ಗ್ರ್ಯಾಂಡ್ ಓಪನಿಂಗ್ ಸೆಪ್ಟೆಂಬರ್ 29 ಸಂಜೆ 6 ಗಂಟೆಗೆ ಪ್ರಾರಂಭವಾಗಲಿದೆ. ಅದರ ಬಳಿಕ ಪ್ರತಿದಿನ ರಾತ್ರಿ 9:30ಗೆ ಎಪಿಸೋಡ್​ಗಳು ಪ್ರಸಾರ ಆಗಲಿವೆ. ಈ ಬಾರಿ ಲೈವ್ ಇರುವುದಿಲ್ಲ ಎನ್ನಲಾಗುತ್ತಿದೆ. ಸೀಸನ್ 11 ರಲ್ಲಿ ಕೆಲವು ಬದಲಾವಣೆಗಳು ಇರಲಿವೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್