AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಭಾರತಕ್ಕೆ ಕೃಷ್ಣ, ಬಿಗ್ ಬಾಸ್​ಗೆ ಕಿಚ್ಚ: ‘ಬಿಬಿಕೆ 11’ ಪ್ರೋಮೋ ಕಂಡು ಫ್ಯಾನ್ಸ್ ಪ್ರತಿಕ್ರಿಯೆ

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್​ 29ಕ್ಕೆ ಬಿಗ್​ ಬಾಸ್​ ಹೊಸ ಸೀಸನ್​ ಆರಂಭವಾಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್​ ಅವರೇ ನಿರೂಪಕರಾಗಿ ಮುಂದುವರಿಯುತ್ತಿದ್ದಾರೆ. ಹೊಸ ಪ್ರೋಮೋದಲ್ಲಿ ಅವರನ್ನು ನೋಡಿದ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ. ಪ್ರೋಮೋಗೆ ವೀಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಸಿಕ್ಕಿದೆ.

ಮಹಾಭಾರತಕ್ಕೆ ಕೃಷ್ಣ, ಬಿಗ್ ಬಾಸ್​ಗೆ ಕಿಚ್ಚ: ‘ಬಿಬಿಕೆ 11’ ಪ್ರೋಮೋ ಕಂಡು ಫ್ಯಾನ್ಸ್ ಪ್ರತಿಕ್ರಿಯೆ
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Sep 16, 2024 | 6:37 AM

Share

ಕೆಲವೇ ಗಂಟೆಗಳ ಹಿಂದೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಪ್ರೋಮೋ ಬಿಡುಗಡೆ ಆಯಿತು. ಇದನ್ನು ನೋಡಿದ ವೀಕ್ಷಕರು ಹಲವು ರೀತಿಯಲ್ಲಿ ಕಮೆಂಟ್​ ಮಾಡಿದ್ದಾರೆ. ಈ ಪ್ರೋಮೋದಲ್ಲಿ ಅತಿ ಹೆಚ್ಚು ಹೈಲೈಟ್​ ಆಗಿರುವುದು ಕಿಚ್ಚ ಸುದೀಪ್. ಹೌದು, ಈ ಬಾರಿ ಆ್ಯಂಕರ್ ಬದಲಾಗುತ್ತಾರೆ ಎಂಬ ಬಗ್ಗೆ ಗುಮಾನಿ ಇತ್ತು. ಆ ಗುಮಾನಿಯಲ್ಲಿ ಹೆಚ್ಚು ಮಾಡುವ ರೀತಿಯಲ್ಲಿ ಈ ಮೊದಲು ಒಂದು ಪ್ರೋಮೋ ಬಂದಿತ್ತು. ಆದರೆ ಈಗ ಬಿಡುಗಡೆ ಆಗಿರುವ ಹೊಸ ಪ್ರೋಮೋದಲ್ಲಿ ಸುದೀಪ್​ ಅವರು ಕಾಣಿಸಿಕೊಂಡಿರುವುದರಿಂದ ಎಲ್ಲ ಅನುಮಾನಗಳು ಬಗೆಹರಿದಿವೆ. ‘ಬಿಬಿಕೆ 11’ ಪ್ರೋಮೋ ನೋಡಿದ ಜನರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಕಲರ್ಸ್​ ಕನ್ನಡ’ ಸೋಶಿಯಲ್​ ಮೀಡಿಯಾದಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ರ ಪ್ರೋಮೋವನ್ನು ಹಂಚಿಕೊಂಡಿದೆ. ಅದಕ್ಕೆ ಸಾವಿರಾರು ಮಂದಿ ಕಮೆಂಟ್​ ಮಾಡಿದ್ದಾರೆ. ‘ಕೃಷ್ಣ ಇಲ್ಲದೇ ಮಹಾಭಾರತ ಇಲ್ಲ. ಕಿಚ್ಚ ಸುದೀಪ್ ಅವರಿಲ್ಲದೇ ಬಿಗ್ ಬಾಸ್​ ಕನ್ನಡ ಇಲ್ಲ’ ಎಂದು ಫ್ಯಾನ್ಸ್​ ಅಭಿಪ್ರಾಯ ತಿಳಿಸಿದ್ದಾರೆ. ‘ಕಿಚ್ಚ ಸುದೀಪ್​ ಅವರೇ ಆ್ಯಂಕರ್​ ಎಂಬುದು ತಿಳಿದು ಈಗ ಸಮಾಧಾನ ಆಯ್ತು’ ಎಂದು ಕೂಡ ಅನೇಕರು ಹೇಳಿದ್ದಾರೆ.

‘ನಾವು ಬಿಗ್​ ಬಾಸ್​ ನೋಡುವುದೇ ಸುದೀಪ್​ ಅವರಿಗೋಸ್ಕರ’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ‘ಬದಲಾವಣೆ ಜಗದ ನಿಯಮ; ಅದಕ್ಕೆ ಬಿಗ್ ಬಾಸ್‍ ಕೂಡ ಹೇಳೋದು ‘ಹೌದು ಸ್ವಾಮಿ’. ಆದರೆ ಇವರ ವಿಚಾರದಲ್ಲಿ ಬದಲಾವಣೆ ನೋ ವೇ, ಚಾನ್ಸೇ ಇಲ್ಲ’ ಎಂದು ಈ ಪ್ರೋಮೋಗೆ ಕ್ಯಾಪ್ಷನ್​ ನೀಡಲಾಗಿದೆ. ಈ ಮಾತನ್ನು ಸುದೀಪ್​ ಫ್ಯಾನ್ಸ್ ಕೂಡ ನಿಜ ಎಂದಿದ್ದಾರೆ.

‘ಇನ್ಮೇಲೆ ಕಲರ್ಸ್​ ಕನ್ನಡ ನಂಬರ್​ 1 ಆಗುತ್ತೆ’ ಎಂದು ಕೆಲವು ಅಭಿಮಾನಿಗಳು ಭವಿಷ್ಯ ನುಡಿದಿದ್ದಾರೆ. ಇದು 11ನೇ ಸೀಸನ್​ ಆದ್ದರಿಂದ ಈ ಬಾರಿ ಬಿಗ್​ ಬಾಸ್​ ಶೋ ತುಂಬ ಸ್ಪೆಷಲ್​ ಆಗಿರಲಿದೆ ಎಂಬ ನಿರೀಕ್ಷೆ ವೀಕ್ಷಕರಿಗೆ ಇದೆ. ಅದಕ್ಕೆ ತಕ್ಕಂತೆಯೇ ಪ್ರೋಮೋದಲ್ಲಿ ಸುದೀಪ್​ ಅವರು ‘ಇದು ಹೊಸ ಅಧ್ಯಾಯ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ’: ಸ್ಟಾರ್​ ನಟನ ವಿರುದ್ಧ ನೆಟ್ಟಿಗರ ಅಸಮಾಧಾನ

ಸೆಪ್ಟೆಂಬರ್​ 29ರಂದು ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಆರಂಭ ಆಗಲಿದೆ. ಯಾವೆಲ್ಲ ಸ್ಪರ್ಧಿಗಳು ಬರುತ್ತಾರೆ ಎಂಬುದನ್ನು ತಿಳಿಯುವ ಕಾತರ ಎಲ್ಲರಲ್ಲೂ ಇದೆ. ಇನ್ನು, ಸುದೀಪ್​ ಅವರು ‘ಮ್ಯಾಕ್ಸ್​’ ಸಿನಿಮಾದ ಬಿಡುಗಡೆಯ ಕೆಲಸಗಳಲ್ಲೂ ನಿರತರಾಗಿದ್ದಾರೆ. ಅದರ ನಡುವೆ ಅವರು ಬಿಗ್​ ಬಾಸ್​ ಕಾರ್ಯಕ್ರಮವನ್ನು ನಡೆಸಿಕೊಡಲು ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?