AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಭಾರತಕ್ಕೆ ಕೃಷ್ಣ, ಬಿಗ್ ಬಾಸ್​ಗೆ ಕಿಚ್ಚ: ‘ಬಿಬಿಕೆ 11’ ಪ್ರೋಮೋ ಕಂಡು ಫ್ಯಾನ್ಸ್ ಪ್ರತಿಕ್ರಿಯೆ

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಸೆಪ್ಟೆಂಬರ್​ 29ಕ್ಕೆ ಬಿಗ್​ ಬಾಸ್​ ಹೊಸ ಸೀಸನ್​ ಆರಂಭವಾಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್​ ಅವರೇ ನಿರೂಪಕರಾಗಿ ಮುಂದುವರಿಯುತ್ತಿದ್ದಾರೆ. ಹೊಸ ಪ್ರೋಮೋದಲ್ಲಿ ಅವರನ್ನು ನೋಡಿದ ಅಭಿಮಾನಿಗಳಿಗೆ ಸಖತ್​ ಖುಷಿ ಆಗಿದೆ. ಪ್ರೋಮೋಗೆ ವೀಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಸಿಕ್ಕಿದೆ.

ಮಹಾಭಾರತಕ್ಕೆ ಕೃಷ್ಣ, ಬಿಗ್ ಬಾಸ್​ಗೆ ಕಿಚ್ಚ: ‘ಬಿಬಿಕೆ 11’ ಪ್ರೋಮೋ ಕಂಡು ಫ್ಯಾನ್ಸ್ ಪ್ರತಿಕ್ರಿಯೆ
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Sep 16, 2024 | 6:37 AM

Share

ಕೆಲವೇ ಗಂಟೆಗಳ ಹಿಂದೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಪ್ರೋಮೋ ಬಿಡುಗಡೆ ಆಯಿತು. ಇದನ್ನು ನೋಡಿದ ವೀಕ್ಷಕರು ಹಲವು ರೀತಿಯಲ್ಲಿ ಕಮೆಂಟ್​ ಮಾಡಿದ್ದಾರೆ. ಈ ಪ್ರೋಮೋದಲ್ಲಿ ಅತಿ ಹೆಚ್ಚು ಹೈಲೈಟ್​ ಆಗಿರುವುದು ಕಿಚ್ಚ ಸುದೀಪ್. ಹೌದು, ಈ ಬಾರಿ ಆ್ಯಂಕರ್ ಬದಲಾಗುತ್ತಾರೆ ಎಂಬ ಬಗ್ಗೆ ಗುಮಾನಿ ಇತ್ತು. ಆ ಗುಮಾನಿಯಲ್ಲಿ ಹೆಚ್ಚು ಮಾಡುವ ರೀತಿಯಲ್ಲಿ ಈ ಮೊದಲು ಒಂದು ಪ್ರೋಮೋ ಬಂದಿತ್ತು. ಆದರೆ ಈಗ ಬಿಡುಗಡೆ ಆಗಿರುವ ಹೊಸ ಪ್ರೋಮೋದಲ್ಲಿ ಸುದೀಪ್​ ಅವರು ಕಾಣಿಸಿಕೊಂಡಿರುವುದರಿಂದ ಎಲ್ಲ ಅನುಮಾನಗಳು ಬಗೆಹರಿದಿವೆ. ‘ಬಿಬಿಕೆ 11’ ಪ್ರೋಮೋ ನೋಡಿದ ಜನರು ವಿವಿಧ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

‘ಕಲರ್ಸ್​ ಕನ್ನಡ’ ಸೋಶಿಯಲ್​ ಮೀಡಿಯಾದಲ್ಲಿ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ರ ಪ್ರೋಮೋವನ್ನು ಹಂಚಿಕೊಂಡಿದೆ. ಅದಕ್ಕೆ ಸಾವಿರಾರು ಮಂದಿ ಕಮೆಂಟ್​ ಮಾಡಿದ್ದಾರೆ. ‘ಕೃಷ್ಣ ಇಲ್ಲದೇ ಮಹಾಭಾರತ ಇಲ್ಲ. ಕಿಚ್ಚ ಸುದೀಪ್ ಅವರಿಲ್ಲದೇ ಬಿಗ್ ಬಾಸ್​ ಕನ್ನಡ ಇಲ್ಲ’ ಎಂದು ಫ್ಯಾನ್ಸ್​ ಅಭಿಪ್ರಾಯ ತಿಳಿಸಿದ್ದಾರೆ. ‘ಕಿಚ್ಚ ಸುದೀಪ್​ ಅವರೇ ಆ್ಯಂಕರ್​ ಎಂಬುದು ತಿಳಿದು ಈಗ ಸಮಾಧಾನ ಆಯ್ತು’ ಎಂದು ಕೂಡ ಅನೇಕರು ಹೇಳಿದ್ದಾರೆ.

‘ನಾವು ಬಿಗ್​ ಬಾಸ್​ ನೋಡುವುದೇ ಸುದೀಪ್​ ಅವರಿಗೋಸ್ಕರ’ ಎಂದು ಅನೇಕರು ಕಮೆಂಟ್​ ಮಾಡಿದ್ದಾರೆ. ‘ಬದಲಾವಣೆ ಜಗದ ನಿಯಮ; ಅದಕ್ಕೆ ಬಿಗ್ ಬಾಸ್‍ ಕೂಡ ಹೇಳೋದು ‘ಹೌದು ಸ್ವಾಮಿ’. ಆದರೆ ಇವರ ವಿಚಾರದಲ್ಲಿ ಬದಲಾವಣೆ ನೋ ವೇ, ಚಾನ್ಸೇ ಇಲ್ಲ’ ಎಂದು ಈ ಪ್ರೋಮೋಗೆ ಕ್ಯಾಪ್ಷನ್​ ನೀಡಲಾಗಿದೆ. ಈ ಮಾತನ್ನು ಸುದೀಪ್​ ಫ್ಯಾನ್ಸ್ ಕೂಡ ನಿಜ ಎಂದಿದ್ದಾರೆ.

‘ಇನ್ಮೇಲೆ ಕಲರ್ಸ್​ ಕನ್ನಡ ನಂಬರ್​ 1 ಆಗುತ್ತೆ’ ಎಂದು ಕೆಲವು ಅಭಿಮಾನಿಗಳು ಭವಿಷ್ಯ ನುಡಿದಿದ್ದಾರೆ. ಇದು 11ನೇ ಸೀಸನ್​ ಆದ್ದರಿಂದ ಈ ಬಾರಿ ಬಿಗ್​ ಬಾಸ್​ ಶೋ ತುಂಬ ಸ್ಪೆಷಲ್​ ಆಗಿರಲಿದೆ ಎಂಬ ನಿರೀಕ್ಷೆ ವೀಕ್ಷಕರಿಗೆ ಇದೆ. ಅದಕ್ಕೆ ತಕ್ಕಂತೆಯೇ ಪ್ರೋಮೋದಲ್ಲಿ ಸುದೀಪ್​ ಅವರು ‘ಇದು ಹೊಸ ಅಧ್ಯಾಯ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಇಷ್ಟು ಕಳಪೆ ಬಿಗ್​ ಬಾಸ್​ ನಿರೂಪಕ ಬೇರೆ ಯಾರೂ ಇಲ್ಲ’: ಸ್ಟಾರ್​ ನಟನ ವಿರುದ್ಧ ನೆಟ್ಟಿಗರ ಅಸಮಾಧಾನ

ಸೆಪ್ಟೆಂಬರ್​ 29ರಂದು ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಆರಂಭ ಆಗಲಿದೆ. ಯಾವೆಲ್ಲ ಸ್ಪರ್ಧಿಗಳು ಬರುತ್ತಾರೆ ಎಂಬುದನ್ನು ತಿಳಿಯುವ ಕಾತರ ಎಲ್ಲರಲ್ಲೂ ಇದೆ. ಇನ್ನು, ಸುದೀಪ್​ ಅವರು ‘ಮ್ಯಾಕ್ಸ್​’ ಸಿನಿಮಾದ ಬಿಡುಗಡೆಯ ಕೆಲಸಗಳಲ್ಲೂ ನಿರತರಾಗಿದ್ದಾರೆ. ಅದರ ನಡುವೆ ಅವರು ಬಿಗ್​ ಬಾಸ್​ ಕಾರ್ಯಕ್ರಮವನ್ನು ನಡೆಸಿಕೊಡಲು ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ