AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಬಿಗ್​ಬಾಸ್ ಮನೆಗೆ ಹೋಗುವವರು ಯಾರು? ಇಲ್ಲಿದೆ ಸಂಭಾವ್ಯ ಪಟ್ಟಿ

Bigg Boss Kannada: ಬಿಗ್​ಬಾಸ್ ಕನ್ನಡ ಸೀಸನ್ 11 ಸೆಪ್ಟೆಂಬರ್ 29ಕ್ಕೆ ಪ್ರಾರಂಭವಾಗಲಿದೆ. ಪ್ರತಿಬಾರಿಯಂತೆ ಈ ಬಾರಿಯೂ ಸಹ ಬಿಗ್​ಬಾಸ್ ಮನೆ ಸೇರುವ ಸ್ಪರ್ಧಿಗಳ ಬಗ್ಗೆ ಕುತೂಹಲ ಮೂಡಿದೆ. ಈ ಬಾರಿ ಬಿಗ್​ಬಾಸ್ ಮನೆ ಸೇರುವ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ.

ಈ ಬಾರಿ ಬಿಗ್​ಬಾಸ್ ಮನೆಗೆ ಹೋಗುವವರು ಯಾರು? ಇಲ್ಲಿದೆ ಸಂಭಾವ್ಯ ಪಟ್ಟಿ
ಮಂಜುನಾಥ ಸಿ.
|

Updated on: Sep 24, 2024 | 12:08 PM

Share

ಬಿಗ್​ಬಾಸ್ ಕನ್ನಡ ಸೀಸನ್ 11 ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ನಿನ್ನೆಯಷ್ಟೆ ಕಿಚ್ಚ ಸುದೀಪ್ ಸೇರಿದಂತೆ ಬಿಗ್​ಬಾಸ್ ಆಯೋಜಕರು ಸುದ್ದಿಗೋಷ್ಠಿ ನಡೆಸಿ ಈ ಬಾರಿಯ ಬಿಗ್​ಬಾಸ್ 11 ರ ವಿಶೇಷತೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಾರಿ ಬಿಗ್​ಬಾಸ್ ಸ್ಪರ್ಧಿಗಳ ಆಯ್ಕೆ ಭಿನ್ನವಾಗಿರಲಿದೆ, ಕಳೆದ ಬಾರಿ ವೋಟಿಂಗ್ ಆಧಾರದಲ್ಲಿ ಸ್ಪರ್ಧಿಗಳನ್ನು ಆಯ್ಕೆ ಮಾಡಲಾಗಿತ್ತು. ಇಬ್ಬರು ಸ್ಪರ್ಧಿಗಳನ್ನು ವೇದಿಕೆ ಮೇಲಿಂದಲೇ ವಾಪಸ್ ಕಳಿಸಲಾಗಿತ್ತು. ಕಡಿಮೆ ಮತ ಪಡೆದ ಕೆಲವರನ್ನು ಹೋಲ್ಡ್​ನಲ್ಲಿ ಇಡಲಾಗಿತ್ತು. ಈ ಬಾರಿ ವೋಟಿಂಗ್ ಇರಲಿದೆಯಾದರೂ ಕಳೆದ ಬಾರಿಗಿಂತಲೂ ಭಿನ್ನವಾಗಿರಲಿದೆ ಎನ್ನಲಾಗುತ್ತಿದೆ.

ಇನ್ನು ಈ ಬಾರಿ ಯಾವ ಸೆಲೆಬ್ರಿಟಿಗಳು ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ಈಗಾಗಲೇ ಕೆಲವು ಹೆಸರುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿವೆ. ಅದರಲ್ಲಿ ಪ್ರಮುಖವಾಗಿ ಕೇಳಿ ಬರುತ್ತಿರುವುದು ನಟ ಸುನಿಲ್ ಹೆಸರು. ‘ಎಕ್ಸ್​ಕ್ಯೂಸ್​ ಮೀ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿರುವ ಸುನಿಲ್ ಈ ಬಾರಿ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎಂಬ ಮಾತುಗಳು ಜೋರಾಗಿಯೇ ಕೇಳಿ ಬರುತ್ತಿದೆ.

ಪ್ರತಿ ಸೀಸನ್​ನಲ್ಲೂ ಕಮಿಡಿಯನ್ ಅನ್ನು ಶೋಗೆ ಕಳಿಸಲಾಗುತ್ತದೆ ಈ ಬಾರಿ ಕಮಿಡಿಯನ್ ಕೋಟಾನಲ್ಲಿ ಹುಲಿ ಕಾರ್ತಿಕ್ ಬಿಗ್​ಬಾಸ್ ಮನೆಗೆ ಹೋಗಲಿದ್ದಾರೆ ಎನ್ನಲಾಗುತ್ತಿದೆ. ಹಿಂದಿನ ಶೋಗಳಲ್ಲಿ ಕಮಿಡಿಯನ್​ಗಳು ಚೆನ್ನಾಗಿ ಪ್ರದರ್ಶನ ನೀಡಿದ್ದಾರೆ. ಕೆಲವರು ಕಪ್ ಸಹ ಗೆದ್ದಿದ್ದಾರೆ. ಈ ಬಾರಿ ಹುಲಿ ಕಾರ್ತಿಕ್ ಹೇಗೆ ಆಡಲಿದ್ದಾರೆ, ಹೇಗೆ ರಂಜಿಸಲಿದ್ದಾರೆ ಕಾದು ನೋಡಬೇಕಿದೆ.

ಇದನ್ನೂ ಓದಿ:ಬಿಗ್​ಬಾಸ್ ಹೊಸ ಪ್ರೋಮೊ: ಸ್ವರ್ಗ-ನರಕದ ಕತೆ ಹೇಳಿದ ಸುದೀಪ್

ಇನ್ನು ಇತ್ತೀಚೆಗಿನ ಕೆಲ ಸೀಸನ್​ನಲ್ಲಿ ಯೂಟ್ಯೂಬರ್​ಗಳಿಗೆ ಸಹ ಬಿಗ್​ಬಾಸ್​ ಸ್ಪರ್ಧಿಗಳಾಗಿ ಅವಕಾಶ ಕೊಡಲಾಗುತ್ತಿದೆ. ಈ ಹಿಂದೆಲ್ಲ ರಘು ವೈನ್ಸ್, ಸೋಷಿಯಲ್ ಮೀಡಿಯಾ ಸೆನ್ಸೇಷನ್ ನವಾಜ್, ಇನ್ನೂ ಕೆಲವು ಯೂಟ್ಯೂಬರ್​ಗಳನ್ನು ಸ್ಪರ್ಧಿಯಾಗಿ ಸೇರಿಸಲಾಗಿತ್ತು. ಈ ಬಾರಿ ಸಹ ಇಬ್ಬರು ಜನಪ್ರಿಯ ಯೂಟ್ಯೂಬರ್​ಗಳನ್ನು ಸ್ಪರ್ಧಿಗಳಾಗಿ ಆಯ್ಕೆ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ‘ಕಲಾಮಾಧ್ಯಮ’ದ ಪರಮೇಶ್ ಅವರನ್ನು ಕೇಳಲಾಗಿದೆ ಎನ್ನಲಾಗುತ್ತಿದೆ ಆದರೆ ಅವರು ಸ್ಪರ್ಧಿಯಾಗಿ ಬರುವ ಬಗ್ಗೆ ಖಾತ್ರಿ ಇಲ್ಲ. ಒಬ್ಬ ಮೊಟೊ ವ್ಲಾಗರ್ ಬಿಗ್​ಬಾಸ್ ಮನೆಗೆ ಬರುತ್ತಾರೆ ಎನ್ನಲಾಗುತ್ತಿದೆ. ಇನ್ನು ರೀಲ್ಸ್​ನಿಂದಲೇ ಜನಪ್ರಿಯವಾಗಿರುವ ರೀಲ್ಸ್ ರೇಷ್ಮಾ ಬಿಗ್​ಬಾಸ್ ಸ್ಪರ್ಧಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಕಿರುತೆರೆಯಿಂದ ಹಲವರನ್ನು ಬಿಗ್​ಬಾಸ್​ಗೆ ಕರೆದುಕೊಳ್ಳಲಾಗುತ್ತದೆ. ಕಿರುತೆರೆಯ ತಾರೆಯರೇ ಹೆಚ್ಚು ಮಂದಿ ಬಿಗ್​ಬಾಸ್​ಗೆ ಆಗಮಿಸಿದ್ದಾರೆ. ಹಲವರು ಗೆದ್ದಿದ್ದಾರೆ ಸಹ. ಈ ಬಾರಿ ನಕಲಿ ದರ್ಶನ್, ಅವಿನಾಶ್ ಅವರನ್ನು ಬಿಗ್​ಬಾಸ್​ಗೆ ಕರೆತರುವುದು ಬಹುತೇಕ ಖಾತ್ರಿ ಎನ್ನಲಾಗುತ್ತಿದೆ. ಅವಿನಾಶ್, ಥೇಟ್ ದರ್ಶನ್ ರೀತಿಯೇ ಇದ್ದು, ಅವರು ಈ ಬಾರಿ ಬಿಗ್​ಬಾಸ್ ಮನೆಗೆ ಬರಲಿದ್ದಾರೆ.

ನಟಿ ಪ್ರೇಮಾಗೂ ಆಫರ್ ಹೋಗಿದೆ ಎನ್ನಲಾಗುತ್ತಿದೆ. ಕಿರುತೆರೆ ನಟಿಯರಾದ ಸುಕೃತಾ ನಾಗ್, ನಟಿ ಭವ್ಯಾ. ನಟರಾದ ದೀಪಕ್ ಗೌಡ, ಗೌರವ್ ಶೆಟ್ಟಿ, ಯೂಟ್ಯೂಬ್ ಕಿರುಚಿತ್ರಗಳಿಂದ ಹೆಸರು ಗಳಿಸಿರುವ ನಟರೊಬ್ಬರು ಸಹ ಎಂಟ್ರಿ ಕೊಡಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನು ಹಿಂದೂಪರ ಹೋರಾಟಗಾರ್ತಿಯಾಗಿ ಗುರುತಿಸಿಕೊಂಡು ಬಳಿಕ ವಂಚನೆ, ಬೆದರಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಚೈತ್ರಾ ಕುಂದಾಪುರ ಸಹ ಬಿಗ್​ಬಾಸ್​ಗೆ ಬರಲಿದ್ದಾರೆ ಎನ್ನಲಾಗುತ್ತಿದೆ. ಸೆಪ್ಟೆಂಬರ್ 29 ರಂದು ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರಾರಂಭವಾಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?