AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajat: ರಜತ್ ದೊಡ್ಮನೆಯಿಂದ ಔಟ್; ಪ್ರಮುಖ ಘಟ್ಟದಲ್ಲಿ ಹೊರ ಹೋದ್ರು

Bigg Boss Elimination: ಬಿಗ್ ಬಾಸ್ ಕನ್ನಡ ಸೀಸನ್ 11ರ ಫೈನಲ್‌ನಲ್ಲಿ ರಜತ್ ಅವರು ಮೊದಲು ಎಲಿಮಿನೇಟ್ ಆಗಿದ್ದಾರೆ. ಆರು ಸ್ಪರ್ಧಿಗಳಲ್ಲಿ ಐದು ಮಂದಿ ಉಳಿದಿದ್ದಾರೆ. ರಜತ್ ಅವರು ವೈಲ್ಡ್ ಕಾರ್ಡ್ ಎಂಟ್ರಿಯಾಗಿ 50 ದಿನಗಳ ನಂತರ ದೊಡ್ಮನೆ ಸೇರಿದ್ದರು. ಕಡಿಮೆ ಮತಗಳನ್ನು ಪಡೆದ ಕಾರಣ ಅವರು ನಿರ್ಗಮಿಸಿದ್ದಾರೆ. ಅವರ ಆತ್ಮವಿಶ್ವಾಸ ಮತ್ತು ಟಾಸ್ಕ್‌ಗಳಲ್ಲಿನ ಸಕ್ರಿಯ ಭಾಗವಹಿಸುವಿಕೆ ಗಮನಾರ್ಹವಾಗಿತ್ತು.

Rajat: ರಜತ್ ದೊಡ್ಮನೆಯಿಂದ ಔಟ್; ಪ್ರಮುಖ ಘಟ್ಟದಲ್ಲಿ ಹೊರ ಹೋದ್ರು
ರಜತ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Jan 26, 2025 | 11:26 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಫಿನಾಲೆಯಲ್ಲಿ ರಜತ್ ಔಟ್ ಆಗಿದ್ದಾರೆ. ಫಿನಾಲೆಯಲ್ಲಿ ಇದ್ದ ಆರು ಸ್ಪರ್ಧಿಗಳ ಸಂಖ್ಯೆ ಎರಡಕ್ಕೆ ಇಳಿಕೆ ಆಗಿದೆ. ರಜತ್ ಅವರಿಗೆ ಸಾಕಷ್ಟು ಬೇಡಿಕೆ ಸೃಷ್ಟಿ ಆಗಿತ್ತು. ವೈಲ್ಡ್ ಕಾರ್ಡ್ ಮೂಲಕ 50 ದಿನ ಆದ ಬಳಿಕ ಅವರು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದರು. ಅವರು ಭಾನುವಾರ (ಜನವರಿ 26) ಹೊರ ಹೋಗಿದ್ದಾರೆ. ಈ ಮೂಲಕ ತ್ರಿವಿಕ್ರಂ ಹಾಗೂ ಹನುಮಂತ ಉಳಿದುಕೊಂಡಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 11’ ಸಾಕಷ್ಟು ಗಮನ ಸೆಳೆದಿದೆ. ಈವರೆಗೆ 20 ಸ್ಪರ್ಧಿಗಳು ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದರು. ಆ ಪೈಕಿ ಫಿನಾಲೆಗೆ ಆರು ಮಂದಿ ಮಾತ್ರ ಬಂದಿದ್ದರು. ಮೋಕ್ಷಿತಾ, ಭವ್ಯಾ ಗೌಡ, ಹನುಮಂತ, ತ್ರಿವಿಕ್ರಂ, ಮಂಜು ಮಧ್ಯೆಯ ಸ್ಪರ್ಧೆಯಲ್ಲಿ ಭವ್ಯಾ ಮೊದಲು ಹೋದರೆ, ನಂತರ ಮಂಜು, ಮೋಕ್ಷಿತಾ ಔಟ್ ಆದರು. ನಂತರ ರಜತ್ ಅವರು ವೇದಿಕೆಯ ಮೇಲೆ ಬಂದು ಹೊರ ಹೋದರು. ಅವರು ಕಡಿಮೆ ವೋಟ್ ಪಡೆದು ಮನೆಯಿಂದ ಹೊರ ನಡೆದಿದ್ದಾರೆ.

ಬಿಗ್ ಬಾಸ್ ವೇದಿಕೆ ಏರಿದಾಗಿನಿಂದಲೂ ಒಂದು ಹೊಸ ಅಲೆ ಸೃಷ್ಟಿ ಮಾಡಿದ್ದರು ರಜತ್. ಅವರು ಟಾಸ್ಕ್​ನಿಂದ ಹಿಡಿದು ಎಲ್ಲದರಲ್ಲೂ ಆ್ಯಕ್ಟೀವ್ ಆಗಿದ್ದರು. ಈ ಮೂಲಕ ದೊಡ್ಮನೆಗೆ ಚೈತನ್ಯ ಕೊಟ್ಟರು. ರಜತ್ ಅವರು ಟಾಸ್ಕ್​ನಲ್ಲಿ ಭೇಷ್ ಎನಿಸಿಕೊಂಡಿದ್ದರು. ಇದುವೇ ಅವರಿಗೆ ಪ್ಲಸ್ ಪಾಯಿಂಟ್ ಆಗಿತ್ತು. ಮನರಂಜನೆಯಲ್ಲೂ ಅವರು ಹಿಂದೆ ಬಿದ್ದಿರಲಿಲ್ಲ.

ಇದನ್ನೂ ಓದಿ: ರಜತ್​ಗೆ ಮಾತ್ರ ಜಾಕೆಟ್ ಕಳುಹಿಸಿದ ಸುದೀಪ್? ಕಾರಣ ಏನು?

ರಜತ್ ಅವರಿಗೆ ದುರಹಂಕಾರ ಇತ್ತೀಚೆಗೆ ಹೆಚ್ಚಾಯಿತೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿತ್ತು. ಅವರು ಫೇವರಿಸಂ ಆರೋಪ ಕೂಡ ಹೊತ್ತರು. ಎಲ್ಲಕ್ಕಿಂತ ಮುಖ್ಯವಾಗಿ ರಜತ್ ಅವರು ಹಲವು ಸಮಯದಲ್ಲಿ ಭಾಷೆ ಮೇಲೆ ಹಿಡಿತ ಇಟ್ಟುಕೊಳ್ಳದೆ ಎಡವಿದ್ದರು. ಈ ವಿಚಾರದಲ್ಲಿ ಸುದೀಪ್ ಅನೇಕ ಬಾರಿಗೆ ಅವರಿಗೆ ಕಿವಿಮಾತು ಕೂಡ ಹೇಳಿದ್ದರು. ಆದರೆ, ರಜತ್ ಇದನ್ನು ತಿದ್ದುಕೊಂಡಿಲ್ಲ. ಎಲ್ಲರನ್ನೂ ಹೊರಕ್ಕೆ ಕಳಿಸಿ, ಕಪ್ ಗೆದ್ದೇ ಹೋಗೋದು ಎಂದು ರಜತ್ ಹೇಳಿದ್ದರು. ಅವರ ಆಸೆ ಈಡೇರಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:26 pm, Sun, 26 January 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ