AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲಿಮಿನೇಷನ್ ನಡೆಸದೇ ಇದ್ದಿದ್ದೇಕೆ? ಸುದೀಪ್ ಕೊಟ್ಟ ಕಾರಣ ಒಪ್ಪಿಕೊಳ್ಳುವಂಥದ್ದೇ

ಎರಡನೇ ವಾರದಲ್ಲಿ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಶೋನಲ್ಲಿ ಸ್ಪರ್ಧಿಗಳ ನಡುವೆ ಪೈಪೋಟಿ ಜೋರಾಗಿದೆ. ಸ್ವರ್ಗ ವರ್ಸಸ್​ ನರಕ ಎಂಬ ಕಾನ್ಸೆಪ್ಟ್ ಇತ್ತು. ಅದು ಈಗ ಇಲ್ಲ. ಕಳೆದ ವಾರ ಎಲಿಮಿನೇಷನ್ ಇಲ್ಲ. ಅದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿದ್ದಾರೆ.

ಎಲಿಮಿನೇಷನ್ ನಡೆಸದೇ ಇದ್ದಿದ್ದೇಕೆ? ಸುದೀಪ್ ಕೊಟ್ಟ ಕಾರಣ ಒಪ್ಪಿಕೊಳ್ಳುವಂಥದ್ದೇ
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 14, 2024 | 6:52 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಎರಡನೇ ವಾರ ಪೂರ್ಣಗೊಂಡಿದೆ. ಯಾರು ಎಲಿಮಿನೇಷನ್ ಆಗುತ್ತಾರೆ ಎನ್ನುವ ಪ್ರಶ್ನೆ ಈ ವಾರ ಮೂಡಿಯೇ ಇರಲಿಲ್ಲ. ಅದಕ್ಕೆ ಕಾರಣವೂ ಇತ್ತು. ಈ ವಾರ ವೋಟಿಂಗ್ ಲೈನ್ ತೆಗೆದಿರುವುದಿಲ್ಲ ಎಂದು ಎಪಿಸೋಡ್​ನಲ್ಲಿ ಮಾಹಿತಿ ನೀಡಲಾಗಿತ್ತು. ಆದರೆ, ಈ ವಿಚಾರ ಮನೆ ಮಂದಿಗೆ ಗೊತ್ತಿರಲಿಲ್ಲ. ಕೊನೆಯವರೆಗೂ ಟೆನ್ಷನ್ ಕೊಟ್ಟ ಕಿಚ್ಚ ಅಂತಿಮವಾಗಿ ಎಲಿಮಿನೇಷನ್ ಮಾಡುವುದಿಲ್ಲ ಎಂದು ಘೋಷಿಸಿದರು. ಆಗ ಮನೆ ಮಂದಿ ನಿಟ್ಟುಸಿರು ಬಿಟ್ಟರು.

ಕಳೆದ ವಾರ ಭವ್ಯಾ ಗೌಡ, ಧನರಾಜ್, ಧರ್ಮ ಕೀರ್ತಿರಾಜ್, ರಂಜಿತ್ ಕುಮಾರ್, ತ್ರಿವಿಕ್ರಂ, ಮಾನಸಾ, ಐಶ್ವರ್ಯಾ, ಗೋಲ್ಡ್ ಸುರೇಶ್, ಹಂಸಾ, ಲಾಯರ್ ಜಗದೀಶ್, ಅನುಷಾ ರೈ ನಾಮಿನೇಟ್ ಆಗಿದ್ದರು. ಶನಿವಾರದ (ಅಕ್ಟೋಬರ್ 12) ಎಪಿಸೋಡ್​ನಲ್ಲಿ ಸುದೀಪ್ ಯಾರನ್ನೂ ಸೇವ್ ಮಾಡಿರಲಿಲ್ಲ. ಭಾನುವಾರ ಒಬ್ಬೊಬ್ಬರನ್ನಾಗಿ ಸೇವ್ ಮಾಡುತ್ತಾ ಬಂದರು.

ಕೊನೆಯಲ್ಲಿ ಅನುಷಾ ರೈ, ತ್ರಿವಿಕ್ರಂ ಹಾಗೂ ರಂಜಿತ್ ಉಳಿದರು. ಈ ಮೂವರಲ್ಲಿ ಮೊದಲು ಅನುಷಾ ಅವರನ್ನು ಸೇವ್ ಮಾಡಿದರು. ಕೊನೆಯಲ್ಲಿ ತ್ರಿವಿಕ್ರಂ ಹಾಗೂ ರಂಜಿತ್ ಉಳಿದರು. ಇಬ್ಬರೂ ದೊಡ್ಮನೆಯಲ್ಲಿ ಸ್ಟ್ರಾಂಗ್ ಎನಿಸಿಕೊಂಡಿದ್ದಾರೆ. ಯಾರೇ ಹೋದರೂ ಅದು ಬಿಗ್ ಬಾಸ್ ಆಟಕ್ಕೆ ಆಗುವ ನಷ್ಟವೇ. ಹೀಗಾಗಿ, ಎಲ್ಲರಲ್ಲೂ ಟೆನ್ಷನ್ ಮೂಡಿತ್ತು.

‘ತ್ರಿವಿಕ್ರಂ ಬ್ಯಾಡ್​ಲಕ್​’ ಎಂದರು ಸುದೀಪ್. ಬಿಗ್ ಬಾಸ್​ ಮನೆಯಲ್ಲಿ ಒಮ್ಮೆ ಮೌನ ಆವರಿಸಿತು. ಯಾರೂ ತುಟಿ ಪಿಟಕ್ ಎನ್ನಲಿಲ್ಲ. ಕೊನೆಗೆ ಸುದೀಪ್ ಅವರು, ‘ಇಬ್ಬರೂ ಹೋಗುತ್ತಿಲ್ಲ, ಅಭಿನಂದನೆಗಳು’ ಎಂದರು. ಈ ವಿಚಾರ ಕೇಳಿ ಎಲ್ಲರೂ ಖುಷಿಪಟ್ಟರು.

ಇದನ್ನೂ ಓದಿ: ಬಿಗ್ ಬಾಸ್ ತೊರೆಯಲು ಸುದೀಪ್ ನಿರ್ಧಾರ: ಇದೇ ಕೊನೆಯ ಸೀಸನ್; ಅಧಿಕೃತ ಘೋಷಣೆ

‘ಈ ವಾರ ನಿಯಮಗಳನ್ನು ಸಾಕಷ್ಟು ಬ್ರೇಕ್ ಮಾಡಿದ್ದೀರಿ, ಬಿಗ್ ಬಾಸ್ ಮನೆಯ ನಿಯಮಗಳಿಗೆ ಯಾರೂ ಗೌರವ ನೀಡಲೇ ಇಲ್ಲ. ಈ ಕಾರಣದಿಂದಲೇ ಬಿಗ್ ಬಾಸ್ ನೀಡಿದ್ದ ಪನಿಶ್​ಮೆಂಟ್,​ ನಾಮಿನೇಷನ್. ಎಲ್ಲರೂ ನಾಮಿನೇಟ್ ಆದಾಗ ಕೆಲವೊಮ್ಮೆ ಅರ್ಹವಲ್ಲದ ವ್ಯಕ್ತಿ ಹೋಗಿ ಬಿಡುತ್ತಾರೆ’ ಎಂದರು ಸುದೀಪ್. ಈ ವಾರ ಎಲಿಮಿನೇಟ್ ಮಾಡದಿರಲು ಇದುವೇ ಕಾರಣ. ಇದನ್ನು ಅನೇಕರು ಇಪ್ಪಿದ್ದಾರೆ. ‘ಅನಿರೀಕ್ಷಿತಗಳಿಗೆ ರೆಡಿ ಆಗಿ’ ಎಂದು ಸುದೀಪ್ ಎಚ್ಚರಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಬಜೆಟ್ ಬೆನ್ನಲ್ಲೇ ಅಧಿಕಾರ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಶಾಕಿಂಗ್ ಮಾತು
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು