AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.29ರಿಂದ ‘ಬಿಗ್​ ಬಾಸ್​ ಕನ್ನಡ 11’ ಶುರು: ಸುದೀಪ್ ಆ್ಯಂಕರ್​; ಇದು ಹೊಸ ಅಧ್ಯಾಯ

10 ಸೀಸನ್​ಗಳ ಯಶಸ್ಸಿನ ಬಳಿಕ 11ನೇ ಸೀಸನ್​ ಆರಂಭ ಆಗುತ್ತಿದೆ ‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋ ಹೊಸ ಸೀಸನ್​ಗೂ ಕಿಚ್ಚ ಸುದೀಪ್​ ಅವರೇ ಸಾರಥ್ಯ ವಹಿಸಿಕೊಂಡಿದ್ದಾರೆ. ಅವರನ್ನು ಬಿಟ್ಟು ಬೇರೆ ನಟರನ್ನು ನಿರೂಪಕರ ಸ್ಥಾನದಲ್ಲಿ ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದ ಅಭಿಮಾನಿಗಳ ಮಾತು ನಿಜವಾಗಿದೆ. ಈ ಬಗ್ಗೆ ಇಲ್ಲಿದೆ ಮಾಹಿತಿ..

ಸೆ.29ರಿಂದ ‘ಬಿಗ್​ ಬಾಸ್​ ಕನ್ನಡ 11’ ಶುರು: ಸುದೀಪ್ ಆ್ಯಂಕರ್​; ಇದು ಹೊಸ ಅಧ್ಯಾಯ
ಬಿಗ್​ ಬಾಸ್​ ಕನ್ನಡ ಸೀಸನ್ 11, ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Sep 15, 2024 | 7:42 PM

Share

ಬಿಗ್ ಬಾಸ್​ ಕನ್ನಡ ಹೊಸ ಸೀಸನ್ ಯಾವಾಗ ಶುರು ಆಗಲಿದೆ ಎಂದು ಕಾದಿದ್ದ ವೀಕ್ಷಕರಿಗೆಲ್ಲ ಇಂದು (ಸೆಪ್ಟೆಂಬರ್ 15) ದೊಡ್ಡ ಸುದ್ದಿ ಸಿಕ್ಕಿದೆ. ಅಲ್ಲದೇ ಈ ಸೀಸನ್​ನಲ್ಲಿ ಆ್ಯಂಕರ್​ ಬದಲಾಗುತ್ತಾರಾ ಎಂಬ ಅನುಮಾನಕ್ಕೂ ತೆರೆ ಬಿದ್ದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್​ 11’ ಕಾರ್ಯಕ್ರಮ ಸೆಪ್ಟೆಂಬರ್ 29ರಿಂದ ಆರಂಭ ಆಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್​ ಅವರೇ ಆ್ಯಂಕರ್​ ಆಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಅಪ್​ಡೇಟ್​ ನೀಡಲು ‘ಕಲರ್ಸ್​ ಕನ್ನಡ’ ಟಿವಿಯಲ್ಲಿ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕಿಚ್ಚ ಸುದೀಪ್​ ಅವರು ಅಬ್ಬರಿಸಿದ್ದಾರೆ.

ಇಷ್ಟು ವರ್ಷಗಳ ಕಾಲ ಸುದೀಪ್​ ಅವರು ಯಶಸ್ವಿಯಾಗಿ ಬಿಗ್​ ಬಾಸ್​ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಅವರಿಂದಾಗಿ ಎಲ್ಲ 10 ಸೀಸನ್​ಗಳಿಗೆ ಸ್ಟಾರ್ ಮೆರುಗು ಸಿಕ್ಕಿತು. ಈಗ ಸಡನ್​ ಆಗಿ ಬೇರೆ ಆ್ಯಂಕರ್​ ಬರುತ್ತಾರೆ ಎಂದರೆ ಅಭಿಮಾನಿಗಳು ಅದನ್ನು ಸ್ವೀಕರಿಸುವುದು ಕಷ್ಟ. ಹಾಗಿದ್ದರೂ ಕೂಡ ಕೆಲವು ಅನುಮಾನಗಳು ಹುಟ್ಟಿಕೊಂಡಿದ್ದವು. ಸುದೀಪ್​ ಬದಲು ಬೇರೆಯವರು ಈ ಬಾರಿ ನಿರೂಪಣೆ ಮಾಡಬಹುದು ಎಂದು ಕೆಲವರು ಊಹಿಸಿದ್ದರು. ಆದರೆ ಅದು ನಿಜವಾಗಿಲ್ಲ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ನಾನು ಟಾಯ್ಲೆಟ್ ಕ್ಲೀನ್​ ಮಾಡಬೇಕಾ? ಸ್ಟಾರ್​ ನಟನ ಪತ್ನಿಯ ತಿರುಗೇಟು

‘ಗಿಚ್ಚಿ ಗಿಲಿಗಿಲಿ 3’ ಗ್ರ್ಯಾಂಡ್​ ಫಿನಾಲೆಯ ಸಂಚಿಕೆಯ ನಡುವೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಹೊಸ ಪ್ರೋಮೋ ಬಿತ್ತರ ಆಗಿದೆ. ಇದರಲ್ಲಿ ಸುದೀಪ್​ ಅವರು ಖಡಕ್​ ಆಗಿ ಡೈಲಾಗ್​ ಹೊಡೆದಿದ್ದಾರೆ. ‘10 ವರ್ಷದಿಂದ ಒಂದು ಲೆಕ್ಕ, ಈಗಿಂದ ಬೇರೇನೇ ಲೆಕ್ಕ. ಇದು ಹೊಸ ಅಧ್ಯಾಯ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ. ಈ ಪ್ರೋಮೋ ನೋಡಿ ಸುದೀಪ್​ ಅಭಿಮಾನಿಗಳಿಗೆ ಖುಷಿ ಆಗಿದೆ.

ಪ್ರತಿ ವರ್ಷದಂತೆ ಈ ವರ್ಷ ಕೂಡ ಈಗಾಗಲೇ ಅನೇಕ ವ್ಯಕ್ತಿಗಳ ಹೆಸರು ಕೇಳಿಬರುತ್ತಿದೆ. ಈ ಬಾರಿ ಯಾರೆಲ್ಲ ಬಿಗ್​ ಬಾಸ್​ ಮನೆಯೊಳಗೆ ಕಾಲಿಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಸಿನಿಮಾ ಸೆಲೆಬ್ರಿಟಿಗಳು, ಕಿರುತೆರೆಯಲ್ಲಿ ಖ್ಯಾತಿ ಗಳಿಸಿದವರು, ಸೋಶಿಯಲ್​ ಮೀಡಿಯಾದಲ್ಲಿ ಸದ್ದು ಮಾಡಿದವರು, ಪತ್ರಿಕೋದ್ಯಮದ ಖ್ಯಾತನಾಮರು.. ಹೀಗೆ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಗಳು ಬರಲಿದ್ದಾರೆ. ‘ಕಲರ್ಸ್​ ಕನ್ನಡ’ ಹಾಗೂ ‘ಜಿಯೋ ಸಿನಿಮಾ’ ಮೂಲಕ ಈ ಶೋ ಪ್ರಸಾರ ಆಗಲಿದೆ. ಸೆ.29ರ ಭಾನುವಾರ ಗ್ರ್ಯಾಂಡ್ ಓಪನಿಂಗ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ